ನವದೆಹಲಿ: ‘ಭ್ರಷ್ಟಾಚಾರದ ಹೆಸರಿನಲ್ಲಿ ಅಧಿಕಾರ ಹಿಡಿಯಲು ಆಮ್ ಆದ್ಮಿ ಪಕ್ಷವು (ಎಎಪಿ) ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರನ್ನು ಬಳಸಿಕೊಂಡಿತ್ತು’ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಭಾನುವಾರ ಆರೋಪಿಸಿದ್ದಾರೆ.
ಸಂದರ್ಶನವೊಂದರಲ್ಲಿ ಅಣ್ಣಾ ಅವರು ದೆಹಲಿ ಅಬಕಾರಿ ನೀತಿಯನ್ನು ಟೀಕಿಸುತ್ತಿರುವ ವಿಡಿಯೊವನ್ನೂ ಸಚಿವರು ಹಂಚಿಕೊಂಡಿದ್ದಾರೆ.
'ಈಗ ಅವರು ಅಧಿಕಾರದಲ್ಲಿದ್ದಾರೆ. ಅಣ್ಣಾ ಅವರ ಮಾತುಗಳನ್ನು ಕೇಳುವುದಿಲ್ಲ’ ಎಂದೂ ಅವರು ಟ್ವೀಟ್ ಮಾಡಿದ್ದಾರೆ.