<p><strong>ಮುಂಬೈ</strong>: ‘ಮತ ಕಳ್ಳತನ’ ಆರೋಪದ ವಿರುದ್ಧ ಆಂದೋಲನ ನಡೆಸುವಂತೆ ಒತ್ತಾಯಿಸಿ ಪುಣೆಯಲ್ಲಿ ತಮ್ಮ ಭಿತ್ತಿಫಲಕಗಳನ್ನು ಅಳವಡಿಸಿರುವುದಕ್ಕೆ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಭಾನುವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಆರೋಪದ ವಿರುದ್ಧ ಎಚ್ಚೆತ್ತುಕೊಳ್ಳಿ. ಯುವಸಮೂಹವು ಆಂದೋಲನ ಮುನ್ನಡೆಸುವ ಸಮಯ ಬಂದಿದೆ’ ಎಂದಿದ್ದಾರೆ.</p>.<p>‘ನನ್ನ ಹೋರಾಟದಿಂದ 10 ಕಾನೂನುಗಳು ಜಾರಿಯಾಗಿವೆ. 90 ವರ್ಷ ದಾಟಿದ್ದೇನೆ. ಜನರು ಗಾಢನಿದ್ದೆಯಲ್ಲಿರುವಾಗ ನಾನೇ ಎಲ್ಲವನ್ನೂ ಮಾಡಬೇಕು ಎಂದು ನಿರೀಕ್ಷಿಸಿದರೆ ಅದು ತಪ್ಪು. ಈ ಹಿಂದೆ ನಾನು ಮಾಡಿದ್ದನ್ನು ಯುವಸಮೂಹವು ಇದೀಗ ಮುನ್ನಡೆಸಬೇಕು’ ಎಂದು ಹೇಳಿದರು.</p>.<p>‘ಇಷ್ಟು ವರ್ಷಗಳ ಹೋರಾಟದ ನಂತರವೂ ಸಮಾಜ ಎಚ್ಚೆತ್ತುಕೊಂಡಿಲ್ಲ. ಗಾಂಧಿಯ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು. ಸಾಮಾಜಿಕ, ಆರ್ಥಿಕ ಸಮಸ್ಯೆಗಳ ವಿರುದ್ಧ ಯುವಜನರು ಹೋರಾಟ ನಡೆಸಬೇಕು’ ಎಂದರು.</p>.<p>ಸ್ಥಳೀಯ ಕಾರ್ಯಕರ್ತ ಸಮೀರ್ ಉತ್ತರ್ಕರ್ ಹೆಸರಿನಲ್ಲಿ ಪುಣೆಯ ಪಶಾನ್ ಪ್ರದೇಶದಲ್ಲಿ ಬ್ಯಾನರ್ಗಳನ್ನು ಅಳವಡಿಸಲಾಗಿದೆ.</p>.<p>‘ಅಣ್ಣಾ, ಕನಿಷ್ಠ ಪಕ್ಷ ಈಗಲಾದರೂ ಎಚ್ಚರಗೊಳ್ಳಿ. ರಾವಣ ಮತ್ತು ಲಂಕೆಗಾಗಿ ಕುಂಭಕರ್ಣ ಸಹ ತನ್ನ ದೀರ್ಘ ನಿದ್ದೆಯಿಂದ ಎದ್ದಿದ್ದ. ದೇಶಕ್ಕಾಗಿ ನೀವು ಈಗ ಅದೇ ರೀತಿ ಏಕೆ ಮಾಡಬಾರದು?’ ಎಂಬ ಬರಹ ಬ್ಯಾನರ್ನಲ್ಲಿದೆ.</p>.<p>‘ಈ ಹಿಂದೆ ನವದೆಹಲಿಯ ಜಂತರ್ ಮಂತರ್ನಲ್ಲಿ ನೀವು ಮಾಡಿದ್ದ ‘ಮ್ಯಾಜಿಕ್’ ಅನ್ನು ಮತ್ತೊಮ್ಮೆ ನೋಡಲು ದೇಶವು ಉತ್ಸುಕವಾಗಿದೆ. ಚುನಾವಣಾ ಆಯೋಗದ ಅಕ್ರಮಗಳ ಬಗ್ಗೆ ಧ್ವನಿಯೆತ್ತಿ. ಆಂದೋಲನವನ್ನು ಮುನ್ನಡೆಸಿ’ ಎಂಬ ಆಗ್ರಹವುಳ್ಳ ಬರಹವು ಮತ್ತೊಂದು ಭಿತ್ತಿಫಲಕದಲ್ಲಿದೆ.</p>.<div><blockquote>ನಾಗರಿಕರಾಗಿ ನಮಗೆ ಕರ್ತವ್ಯಗಳಿಲ್ಲವೇ? ಬೇರೆಯವರ ಕಡೆ ಬೆರಳು ತೋರಿಸುವುದರಿಂದ ಏನನ್ನು ಸಾಧಿಸಲಾಗುವುದಿಲ್ಲ </blockquote><span class="attribution">ಅಣ್ಣಾ ಹಜಾರೆ ಸಾಮಾಜಿಕ ಕಾರ್ಯಕರ್ತ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ‘ಮತ ಕಳ್ಳತನ’ ಆರೋಪದ ವಿರುದ್ಧ ಆಂದೋಲನ ನಡೆಸುವಂತೆ ಒತ್ತಾಯಿಸಿ ಪುಣೆಯಲ್ಲಿ ತಮ್ಮ ಭಿತ್ತಿಫಲಕಗಳನ್ನು ಅಳವಡಿಸಿರುವುದಕ್ಕೆ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಭಾನುವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಆರೋಪದ ವಿರುದ್ಧ ಎಚ್ಚೆತ್ತುಕೊಳ್ಳಿ. ಯುವಸಮೂಹವು ಆಂದೋಲನ ಮುನ್ನಡೆಸುವ ಸಮಯ ಬಂದಿದೆ’ ಎಂದಿದ್ದಾರೆ.</p>.<p>‘ನನ್ನ ಹೋರಾಟದಿಂದ 10 ಕಾನೂನುಗಳು ಜಾರಿಯಾಗಿವೆ. 90 ವರ್ಷ ದಾಟಿದ್ದೇನೆ. ಜನರು ಗಾಢನಿದ್ದೆಯಲ್ಲಿರುವಾಗ ನಾನೇ ಎಲ್ಲವನ್ನೂ ಮಾಡಬೇಕು ಎಂದು ನಿರೀಕ್ಷಿಸಿದರೆ ಅದು ತಪ್ಪು. ಈ ಹಿಂದೆ ನಾನು ಮಾಡಿದ್ದನ್ನು ಯುವಸಮೂಹವು ಇದೀಗ ಮುನ್ನಡೆಸಬೇಕು’ ಎಂದು ಹೇಳಿದರು.</p>.<p>‘ಇಷ್ಟು ವರ್ಷಗಳ ಹೋರಾಟದ ನಂತರವೂ ಸಮಾಜ ಎಚ್ಚೆತ್ತುಕೊಂಡಿಲ್ಲ. ಗಾಂಧಿಯ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು. ಸಾಮಾಜಿಕ, ಆರ್ಥಿಕ ಸಮಸ್ಯೆಗಳ ವಿರುದ್ಧ ಯುವಜನರು ಹೋರಾಟ ನಡೆಸಬೇಕು’ ಎಂದರು.</p>.<p>ಸ್ಥಳೀಯ ಕಾರ್ಯಕರ್ತ ಸಮೀರ್ ಉತ್ತರ್ಕರ್ ಹೆಸರಿನಲ್ಲಿ ಪುಣೆಯ ಪಶಾನ್ ಪ್ರದೇಶದಲ್ಲಿ ಬ್ಯಾನರ್ಗಳನ್ನು ಅಳವಡಿಸಲಾಗಿದೆ.</p>.<p>‘ಅಣ್ಣಾ, ಕನಿಷ್ಠ ಪಕ್ಷ ಈಗಲಾದರೂ ಎಚ್ಚರಗೊಳ್ಳಿ. ರಾವಣ ಮತ್ತು ಲಂಕೆಗಾಗಿ ಕುಂಭಕರ್ಣ ಸಹ ತನ್ನ ದೀರ್ಘ ನಿದ್ದೆಯಿಂದ ಎದ್ದಿದ್ದ. ದೇಶಕ್ಕಾಗಿ ನೀವು ಈಗ ಅದೇ ರೀತಿ ಏಕೆ ಮಾಡಬಾರದು?’ ಎಂಬ ಬರಹ ಬ್ಯಾನರ್ನಲ್ಲಿದೆ.</p>.<p>‘ಈ ಹಿಂದೆ ನವದೆಹಲಿಯ ಜಂತರ್ ಮಂತರ್ನಲ್ಲಿ ನೀವು ಮಾಡಿದ್ದ ‘ಮ್ಯಾಜಿಕ್’ ಅನ್ನು ಮತ್ತೊಮ್ಮೆ ನೋಡಲು ದೇಶವು ಉತ್ಸುಕವಾಗಿದೆ. ಚುನಾವಣಾ ಆಯೋಗದ ಅಕ್ರಮಗಳ ಬಗ್ಗೆ ಧ್ವನಿಯೆತ್ತಿ. ಆಂದೋಲನವನ್ನು ಮುನ್ನಡೆಸಿ’ ಎಂಬ ಆಗ್ರಹವುಳ್ಳ ಬರಹವು ಮತ್ತೊಂದು ಭಿತ್ತಿಫಲಕದಲ್ಲಿದೆ.</p>.<div><blockquote>ನಾಗರಿಕರಾಗಿ ನಮಗೆ ಕರ್ತವ್ಯಗಳಿಲ್ಲವೇ? ಬೇರೆಯವರ ಕಡೆ ಬೆರಳು ತೋರಿಸುವುದರಿಂದ ಏನನ್ನು ಸಾಧಿಸಲಾಗುವುದಿಲ್ಲ </blockquote><span class="attribution">ಅಣ್ಣಾ ಹಜಾರೆ ಸಾಮಾಜಿಕ ಕಾರ್ಯಕರ್ತ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>