<p><strong>ಚೆನ್ನೈ</strong>: ಅಣ್ಣಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಜ್ಞಾನಶೇಖರನ್ಗೆ ಚೆನ್ನೈನ<strong> </strong>ಮಹಿಳಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.</p><p>ಅಪರಾಧಿ ಜ್ಞಾನಶೇಖರನ್ಗೆ ಕನಿಷ್ಠ 30 ವರ್ಷಗಳ ಕಾಲ ಜೀವಾವಧಿ ಶಿಕ್ಷೆ ವಿಧಿಸಿ, ಇಲ್ಲಿನ ಮಹಿಳಾ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.</p><p>ನ್ಯಾಯಾಧೀಶೆ ಎಂ. ರಾಜಲಕ್ಷ್ಮಿ ಅವರು ಜ್ಞಾನಶೇಖರನ್ ಅಪರಾಧಿ ಎಂದು ಮೇ 28ರಂದು ಆದೇಶ ನೀಡಿದ್ದರು. ಶಿಕ್ಷೆ ಪ್ರಮಾಣವನ್ನು ಇಂದು (ಜೂನ್) 2ರಂದು ಪ್ರಕಟಿಸುವುದಾಗಿ ತಿಳಿಸಿದ್ದರು.</p>.ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಬೆಂಗಳೂರಿನ 'ಒನ್8 ಕಮ್ಯೂನ್' ವಿರುದ್ಧ ಪ್ರಕರಣ.ವಿಡಿಯೊ: ಧುಮ್ಮಿಕ್ಕಿ ಹರಿಯುತ್ತಿದ್ದ ಹಳ್ಳದಲ್ಲಿ ತೂಗು ಸೇತುವೆ ದಾಟಿದ ಭೂಪ!. <p>ಜ್ಞಾನಶೇಖರನ್ ವಿರುದ್ಧ ಪ್ರಾಸಿಕ್ಯೂಷನ್ 11 ಆರೋಪಗಳನ್ನು ಮಾಡಿದ್ದು, ಪೂರಕ ದಾಖಲೆ ಮತ್ತು ವಿಧಿವಿಜ್ಞಾನ ಸಾಕ್ಷ್ಯಗಳ ಮೂಲಕ ಸಾಬೀತುಪಡಿಸಿದೆ ಎಂದು ಸರ್ಕಾರಿ ವಕೀಲರು ತಿಳಿಸಿದ್ದರು.</p><p>ಜ್ಞಾನಶೇಖರನ್ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಸಂತ್ರಸ್ತೆಯು ಕಳೆದ ವರ್ಷ ಡಿಸೆಂಬರ್ 23ರಂದು ಕೊಟ್ಟುಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ ಜ್ಞಾನಶೇಖರನ್ ಅವರನ್ನು ಬಂಧಿಸಲಾಗಿತ್ತು.</p><h2><strong>ಘಟನೆ ವಿವರ</strong></h2><p>ಚೆನ್ನೈ ನಗರದ ಹೃದಯ ಭಾಗದಲ್ಲಿರುವ ಪ್ರತಿಷ್ಠಿತ ಅಣ್ಣಾ ವಿಶ್ವವಿದ್ಯಾನಿಲಯದ ಕ್ಯಾಂಪಸ್ನೊಳಗೆ ಎರಡನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ರಸ್ತೆ ಬದಿಯ ವ್ಯಾಪಾರಿಯೊಬ್ಬ ಲೈಂಗಿಕ ದೌರ್ಜನ್ಯ ನಡೆಸಿ, ಆಕೆಯ ಸ್ನೇಹಿತನ ಮೇಲೂ ಹಲ್ಲೆ ಮಾಡಿರುವ ಘಟನೆ ನಡೆದಿತ್ತು.</p><p>2024ರ ಡಿಸೆಂಬರ್ 23 ರಂದು ಸಂಜೆ ಈ ಘಟನೆ ನಡೆದಿದ್ದು, ಸಂತ್ರಸ್ತರು ಡಿ.24 ರಂದು ಪೊಲೀಸರಿಗೆ ದೂರು ನೀಡಿದ್ದರು.</p><p>ಆರೋಪಿ ಜ್ಞಾನಶೇಖರನ್ (37) ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಆರೋಪಿಯು ಪದೇ ಪದೇ ಅಪರಾಧ ಕೃತ್ಯಗಳನ್ನು ಎಸಗುವನಾಗಿದ್ದಾನೆ. ಈತನ ವಿರುದ್ಧ ಬಿಎನ್ಎಸ್ ಕಾಯ್ದೆಯ ವಿವಿಧ ಸೆಕ್ಷನ್ಗಳಡಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು.</p><p>‘ಆರೋಪಿ, ವಿಶ್ವವಿದ್ಯಾನಿಲಯದ ಬಳಿಯ ಕೊಟ್ಟೂರ್ಪುರಂನಲ್ಲಿ ರಸ್ತೆ ಬದಿ ಉಪಾಹಾರ ಗೃಹ ನಡೆಸುತ್ತಿದ್ದ. ಕ್ಯಾಂಪಸ್ನಲ್ಲಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸಿದ ನಂತರ ಆರೋಪಿಯನ್ನು ಬಂಧಿಸಲಾಯಿತು. ಕೃತ್ಯ ಎಸಗಿರುವುದನ್ನು ಆತ ಒಪ್ಪಿಕೊಂಡಿದ್ದಾನೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದ್ದರು.</p>.ಪಾಕ್ ಭಯೋತ್ಪಾದನೆ: ಈಜಿಪ್ಟ್ ತಲುಪಿದ ಸುಪ್ರಿಯಾ ಸುಳೆ ನೇತೃತ್ವದ ನಿಯೋಗ.IPL 2025 | ಮತ್ತೆ ಮುಖಾಮುಖಿಯಾದ ಅಯ್ಯರ್–ರಜತ್: ಈ ಬಾರಿ ಗೆಲುವು ಯಾರಿಗೆ?.ಅಮೆರಿಕದಲ್ಲಿ ಇಸ್ರೇಲಿಗರ ಮೇಲೆ ಪೆಟ್ರೋಲ್ ಬಾಂಬ್ ದಾಳಿ: ಏಳು ಜನರಿಗೆ ಗಾಯ.ವಿದ್ಯಾರ್ಥಿ ವೇತನ ಕೈಪಿಡಿ: ಗುರುರಾಯರು ಫೌಂಡೇಷನ್ ಸ್ಕಾಲರ್ಷಿಪ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ಅಣ್ಣಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಜ್ಞಾನಶೇಖರನ್ಗೆ ಚೆನ್ನೈನ<strong> </strong>ಮಹಿಳಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.</p><p>ಅಪರಾಧಿ ಜ್ಞಾನಶೇಖರನ್ಗೆ ಕನಿಷ್ಠ 30 ವರ್ಷಗಳ ಕಾಲ ಜೀವಾವಧಿ ಶಿಕ್ಷೆ ವಿಧಿಸಿ, ಇಲ್ಲಿನ ಮಹಿಳಾ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.</p><p>ನ್ಯಾಯಾಧೀಶೆ ಎಂ. ರಾಜಲಕ್ಷ್ಮಿ ಅವರು ಜ್ಞಾನಶೇಖರನ್ ಅಪರಾಧಿ ಎಂದು ಮೇ 28ರಂದು ಆದೇಶ ನೀಡಿದ್ದರು. ಶಿಕ್ಷೆ ಪ್ರಮಾಣವನ್ನು ಇಂದು (ಜೂನ್) 2ರಂದು ಪ್ರಕಟಿಸುವುದಾಗಿ ತಿಳಿಸಿದ್ದರು.</p>.ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಬೆಂಗಳೂರಿನ 'ಒನ್8 ಕಮ್ಯೂನ್' ವಿರುದ್ಧ ಪ್ರಕರಣ.ವಿಡಿಯೊ: ಧುಮ್ಮಿಕ್ಕಿ ಹರಿಯುತ್ತಿದ್ದ ಹಳ್ಳದಲ್ಲಿ ತೂಗು ಸೇತುವೆ ದಾಟಿದ ಭೂಪ!. <p>ಜ್ಞಾನಶೇಖರನ್ ವಿರುದ್ಧ ಪ್ರಾಸಿಕ್ಯೂಷನ್ 11 ಆರೋಪಗಳನ್ನು ಮಾಡಿದ್ದು, ಪೂರಕ ದಾಖಲೆ ಮತ್ತು ವಿಧಿವಿಜ್ಞಾನ ಸಾಕ್ಷ್ಯಗಳ ಮೂಲಕ ಸಾಬೀತುಪಡಿಸಿದೆ ಎಂದು ಸರ್ಕಾರಿ ವಕೀಲರು ತಿಳಿಸಿದ್ದರು.</p><p>ಜ್ಞಾನಶೇಖರನ್ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಸಂತ್ರಸ್ತೆಯು ಕಳೆದ ವರ್ಷ ಡಿಸೆಂಬರ್ 23ರಂದು ಕೊಟ್ಟುಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ ಜ್ಞಾನಶೇಖರನ್ ಅವರನ್ನು ಬಂಧಿಸಲಾಗಿತ್ತು.</p><h2><strong>ಘಟನೆ ವಿವರ</strong></h2><p>ಚೆನ್ನೈ ನಗರದ ಹೃದಯ ಭಾಗದಲ್ಲಿರುವ ಪ್ರತಿಷ್ಠಿತ ಅಣ್ಣಾ ವಿಶ್ವವಿದ್ಯಾನಿಲಯದ ಕ್ಯಾಂಪಸ್ನೊಳಗೆ ಎರಡನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ರಸ್ತೆ ಬದಿಯ ವ್ಯಾಪಾರಿಯೊಬ್ಬ ಲೈಂಗಿಕ ದೌರ್ಜನ್ಯ ನಡೆಸಿ, ಆಕೆಯ ಸ್ನೇಹಿತನ ಮೇಲೂ ಹಲ್ಲೆ ಮಾಡಿರುವ ಘಟನೆ ನಡೆದಿತ್ತು.</p><p>2024ರ ಡಿಸೆಂಬರ್ 23 ರಂದು ಸಂಜೆ ಈ ಘಟನೆ ನಡೆದಿದ್ದು, ಸಂತ್ರಸ್ತರು ಡಿ.24 ರಂದು ಪೊಲೀಸರಿಗೆ ದೂರು ನೀಡಿದ್ದರು.</p><p>ಆರೋಪಿ ಜ್ಞಾನಶೇಖರನ್ (37) ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಆರೋಪಿಯು ಪದೇ ಪದೇ ಅಪರಾಧ ಕೃತ್ಯಗಳನ್ನು ಎಸಗುವನಾಗಿದ್ದಾನೆ. ಈತನ ವಿರುದ್ಧ ಬಿಎನ್ಎಸ್ ಕಾಯ್ದೆಯ ವಿವಿಧ ಸೆಕ್ಷನ್ಗಳಡಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು.</p><p>‘ಆರೋಪಿ, ವಿಶ್ವವಿದ್ಯಾನಿಲಯದ ಬಳಿಯ ಕೊಟ್ಟೂರ್ಪುರಂನಲ್ಲಿ ರಸ್ತೆ ಬದಿ ಉಪಾಹಾರ ಗೃಹ ನಡೆಸುತ್ತಿದ್ದ. ಕ್ಯಾಂಪಸ್ನಲ್ಲಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸಿದ ನಂತರ ಆರೋಪಿಯನ್ನು ಬಂಧಿಸಲಾಯಿತು. ಕೃತ್ಯ ಎಸಗಿರುವುದನ್ನು ಆತ ಒಪ್ಪಿಕೊಂಡಿದ್ದಾನೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದ್ದರು.</p>.ಪಾಕ್ ಭಯೋತ್ಪಾದನೆ: ಈಜಿಪ್ಟ್ ತಲುಪಿದ ಸುಪ್ರಿಯಾ ಸುಳೆ ನೇತೃತ್ವದ ನಿಯೋಗ.IPL 2025 | ಮತ್ತೆ ಮುಖಾಮುಖಿಯಾದ ಅಯ್ಯರ್–ರಜತ್: ಈ ಬಾರಿ ಗೆಲುವು ಯಾರಿಗೆ?.ಅಮೆರಿಕದಲ್ಲಿ ಇಸ್ರೇಲಿಗರ ಮೇಲೆ ಪೆಟ್ರೋಲ್ ಬಾಂಬ್ ದಾಳಿ: ಏಳು ಜನರಿಗೆ ಗಾಯ.ವಿದ್ಯಾರ್ಥಿ ವೇತನ ಕೈಪಿಡಿ: ಗುರುರಾಯರು ಫೌಂಡೇಷನ್ ಸ್ಕಾಲರ್ಷಿಪ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>