<p>ತಮಿಳುನಾಡಿನ 6 ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ನೇಮಕಗೊಂಡ ಕೆಲವೇ ದಿನಗಳ ಬಳಿಕ ಕೆ. ಅಣ್ಣಾಮಲೈ ಅವರು ತಮ್ಮ ಜವಾಬ್ದಾರಿಯಿಂದ ಹಿಂದೆ ಸರಿದಿದ್ದಾರೆ. </p><p>ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ತಮ್ಮ ತಂದೆಯ ಅನಾರೋಗ್ಯದ ಕಾರಣ ನೀಡಿ ಮಂಗಳವಾರ ತಮಗೆ ನೀಡಿದ್ದ ಜವಾಬ್ದಾರಿಯಿಂದ ಹಿಂದೆ ಸರಿದು ಅಚ್ಚರಿ ಮೂಡಿಸಿದ್ದಾರೆ. ತಂದೆಯ ಆರೈಕೆಗಾಗಿ ಕೊಯಮತ್ತೂರಿನಲ್ಲಿ ಇರಬೇಕಾಗಿರುವುದರಿಂದ ಚುನಾವಣಾ ಕೆಲಸದ ಜವಾಬ್ದಾರಿಯನ್ನು ನಿರಾಕರಿಸಿದ್ದೇನೆ ಎಂದು ಅಣ್ಣಾಮಲೈ ಹೇಳಿದ್ದಾರೆ. </p><p>'ನನ್ನ ತಂದೆ ಅಸ್ವಸ್ಥರಾಗಿದ್ದಾರೆ ಮತ್ತು ನಾನು ಅವರನ್ನು ನೋಡಿಕೊಳ್ಳಬೇಕು. ಹಾಗಾಗಿ ನನ್ನ ಜವಾಬ್ದಾರಿಗಳನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ ಎಂದು ನಾನು ಹೈಕಮಾಂಡ್ಗೆ ತಿಳಿಸಿದ್ದೇನೆ. ನನ್ನ ತಂದೆಯನ್ನು ನೋಡಿಕೊಳ್ಳುವುದು ನನ್ನ ಮೊದಲ ಆದ್ಯತೆ. ನೀವು ನನ್ನನ್ನು ಕೊಯಮತ್ತೂರಿನಲ್ಲಿ ಆಗಾಗ ನೋಡುತ್ತೀರಿ’ ಎಂದು ಅಣ್ಣಾಮಲೈ ತಿಳಿಸಿದ್ದಾರೆ</p><p>ಆದರೆ, ಕರ್ನಾಟಕ ಕೇಡರ್ನ ಮಾಜಿ ಐಪಿಎಸ್ ಅಧಿಕಾರಿ ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಕೇವಲ 6 ಸ್ಥಾನಗಳಿಗೆ ಸೀಮಿತಗೊಳಿಸಿದ್ದಕ್ಕಾಗಿ ರಾಜ್ಯ ನಾಯಕತ್ವದ ಬಗ್ಗೆ ಅಸಮಾಧಾನಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>ಎಐಎಡಿಎಂಕೆ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವ ಉದ್ದೇಶದಿಂದಾಗಿ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಬಳಿಕ ಬಿಜೆಪಿ ಅವರನ್ನು ಕಡೆಗಣಿಸಿತ್ತು. ಡಿಸೆಂಬರ್ನಲ್ಲಿ ಬಿಜೆಪಿ ಕೇಂದ್ರ ನಾಯಕರು ಎಎಂಎಂಕೆಯ ಟಿಟಿವಿ ದಿನಕರನ್ ಅವರನ್ನು ಎನ್ಡಿಎ ಒಕ್ಕೂಟಕ್ಕೆ ಮರಳಿ ತರಲು ಚಿಂತನೆ ನಡೆಸಿದ್ದರು.</p><p>ಅದಾದ ಬಳಿಕ ರಾಜ್ಯ ಘಟಕ ಆಯೋಜಿಸುವ ಕಾರ್ಯಕ್ರಮಗಳಿಂದ ಅಣ್ಣಾಮಲೈ ಅವರು ದೂರ ಉಳಿದಿದ್ದರು. ಮಾತ್ರವಲ್ಲ ಬಿಜೆಪಿಯು ಎಐಎಡಿಎಂಕೆ ಜೊತೆ ವ್ಯವಹರಿಸುತ್ತಿರುವ ರೀತಿ ಬಗ್ಗೆಯೂ ಅವರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗಿದೆ. </p><p>ತಮಿಳುನಾಡು ಬಿಜೆಪಿಯ ಅತ್ಯಂತ ಜನಪ್ರಿಯ ನಾಯಕರಾಗಿರುವ ಅಣ್ಣಾಮಲೈ, ರಾಜ್ಯ ಬಿಜಪಿ ಕಾರ್ಯಕ್ರಮಗಳನ್ನು ಹೊರತುಪಡಿಸಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸುವ ಬಹುತೇಕ ಕಾರ್ಯಕ್ರಮಗಳಲ್ಲಿ ಗಮನ ಸೆಳೆಯುತ್ತಿದ್ದಾರೆ.</p><p>ಎಐಎಡಿಎಂಕೆ ಬಗ್ಗೆ ಬಿಜೆಪಿ ನಾಯಕರು ಹೊಂದಿರುವ ಮೃದು ಧೋರಣೆಯಿಂದ ಎರಡೂ ದ್ರಾವಿಡ ಪಕ್ಷಗಳನ್ನು ನೇರವಾಗಿ ಎದುರಿಸುತ್ತಾ ಬಂದಿರುವ ಅಣ್ಣಾಮಲೈ ಅಸಮಾಧಾನಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>‘ಅಣ್ಣಾಮಲೈ ಅವರನ್ನು ಕೇವಲ 6 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಉಸ್ತುವಾರಿಯಾಗಿ ನೇಮಿಸಿರುವುದು ನ್ಯಾಯಯುತವಲ್ಲ. ಅವರನ್ನು ರಾಜ್ಯಾದ್ಯಂತ ಬಳಸಿಕೊಳ್ಳಬೇಕು’ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಪ್ರಜಾವಾಣಿಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಮಿಳುನಾಡಿನ 6 ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ನೇಮಕಗೊಂಡ ಕೆಲವೇ ದಿನಗಳ ಬಳಿಕ ಕೆ. ಅಣ್ಣಾಮಲೈ ಅವರು ತಮ್ಮ ಜವಾಬ್ದಾರಿಯಿಂದ ಹಿಂದೆ ಸರಿದಿದ್ದಾರೆ. </p><p>ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ತಮ್ಮ ತಂದೆಯ ಅನಾರೋಗ್ಯದ ಕಾರಣ ನೀಡಿ ಮಂಗಳವಾರ ತಮಗೆ ನೀಡಿದ್ದ ಜವಾಬ್ದಾರಿಯಿಂದ ಹಿಂದೆ ಸರಿದು ಅಚ್ಚರಿ ಮೂಡಿಸಿದ್ದಾರೆ. ತಂದೆಯ ಆರೈಕೆಗಾಗಿ ಕೊಯಮತ್ತೂರಿನಲ್ಲಿ ಇರಬೇಕಾಗಿರುವುದರಿಂದ ಚುನಾವಣಾ ಕೆಲಸದ ಜವಾಬ್ದಾರಿಯನ್ನು ನಿರಾಕರಿಸಿದ್ದೇನೆ ಎಂದು ಅಣ್ಣಾಮಲೈ ಹೇಳಿದ್ದಾರೆ. </p><p>'ನನ್ನ ತಂದೆ ಅಸ್ವಸ್ಥರಾಗಿದ್ದಾರೆ ಮತ್ತು ನಾನು ಅವರನ್ನು ನೋಡಿಕೊಳ್ಳಬೇಕು. ಹಾಗಾಗಿ ನನ್ನ ಜವಾಬ್ದಾರಿಗಳನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ ಎಂದು ನಾನು ಹೈಕಮಾಂಡ್ಗೆ ತಿಳಿಸಿದ್ದೇನೆ. ನನ್ನ ತಂದೆಯನ್ನು ನೋಡಿಕೊಳ್ಳುವುದು ನನ್ನ ಮೊದಲ ಆದ್ಯತೆ. ನೀವು ನನ್ನನ್ನು ಕೊಯಮತ್ತೂರಿನಲ್ಲಿ ಆಗಾಗ ನೋಡುತ್ತೀರಿ’ ಎಂದು ಅಣ್ಣಾಮಲೈ ತಿಳಿಸಿದ್ದಾರೆ</p><p>ಆದರೆ, ಕರ್ನಾಟಕ ಕೇಡರ್ನ ಮಾಜಿ ಐಪಿಎಸ್ ಅಧಿಕಾರಿ ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಕೇವಲ 6 ಸ್ಥಾನಗಳಿಗೆ ಸೀಮಿತಗೊಳಿಸಿದ್ದಕ್ಕಾಗಿ ರಾಜ್ಯ ನಾಯಕತ್ವದ ಬಗ್ಗೆ ಅಸಮಾಧಾನಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>ಎಐಎಡಿಎಂಕೆ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವ ಉದ್ದೇಶದಿಂದಾಗಿ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಬಳಿಕ ಬಿಜೆಪಿ ಅವರನ್ನು ಕಡೆಗಣಿಸಿತ್ತು. ಡಿಸೆಂಬರ್ನಲ್ಲಿ ಬಿಜೆಪಿ ಕೇಂದ್ರ ನಾಯಕರು ಎಎಂಎಂಕೆಯ ಟಿಟಿವಿ ದಿನಕರನ್ ಅವರನ್ನು ಎನ್ಡಿಎ ಒಕ್ಕೂಟಕ್ಕೆ ಮರಳಿ ತರಲು ಚಿಂತನೆ ನಡೆಸಿದ್ದರು.</p><p>ಅದಾದ ಬಳಿಕ ರಾಜ್ಯ ಘಟಕ ಆಯೋಜಿಸುವ ಕಾರ್ಯಕ್ರಮಗಳಿಂದ ಅಣ್ಣಾಮಲೈ ಅವರು ದೂರ ಉಳಿದಿದ್ದರು. ಮಾತ್ರವಲ್ಲ ಬಿಜೆಪಿಯು ಎಐಎಡಿಎಂಕೆ ಜೊತೆ ವ್ಯವಹರಿಸುತ್ತಿರುವ ರೀತಿ ಬಗ್ಗೆಯೂ ಅವರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗಿದೆ. </p><p>ತಮಿಳುನಾಡು ಬಿಜೆಪಿಯ ಅತ್ಯಂತ ಜನಪ್ರಿಯ ನಾಯಕರಾಗಿರುವ ಅಣ್ಣಾಮಲೈ, ರಾಜ್ಯ ಬಿಜಪಿ ಕಾರ್ಯಕ್ರಮಗಳನ್ನು ಹೊರತುಪಡಿಸಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸುವ ಬಹುತೇಕ ಕಾರ್ಯಕ್ರಮಗಳಲ್ಲಿ ಗಮನ ಸೆಳೆಯುತ್ತಿದ್ದಾರೆ.</p><p>ಎಐಎಡಿಎಂಕೆ ಬಗ್ಗೆ ಬಿಜೆಪಿ ನಾಯಕರು ಹೊಂದಿರುವ ಮೃದು ಧೋರಣೆಯಿಂದ ಎರಡೂ ದ್ರಾವಿಡ ಪಕ್ಷಗಳನ್ನು ನೇರವಾಗಿ ಎದುರಿಸುತ್ತಾ ಬಂದಿರುವ ಅಣ್ಣಾಮಲೈ ಅಸಮಾಧಾನಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>‘ಅಣ್ಣಾಮಲೈ ಅವರನ್ನು ಕೇವಲ 6 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಉಸ್ತುವಾರಿಯಾಗಿ ನೇಮಿಸಿರುವುದು ನ್ಯಾಯಯುತವಲ್ಲ. ಅವರನ್ನು ರಾಜ್ಯಾದ್ಯಂತ ಬಳಸಿಕೊಳ್ಳಬೇಕು’ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಪ್ರಜಾವಾಣಿಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>