<p>ಸಿವಾನ್ (ಪಿಟಿಐ): ಬಿಹಾರದ ಸಿವಾನ್ ಜಿಲ್ಲೆಯ ಸಣ್ಣ ಸೇತುವೆಯೊಂದು ಶನಿವಾರ ಬೆಳಿಗ್ಗೆ ಕುಸಿದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚೆಗಷ್ಟೇ ರಾಜ್ಯದ ಅರಾರಿಯದಲ್ಲಿ ಹೊಸ ಸೇತುವೆಯೊಂದು ಕುಸಿದಿತ್ತು. ಅದರ ಬೆನ್ನಲ್ಲೇ ಮತ್ತೊಂದು ಸೇತುವೆ ಕುಸಿದು ಬಿದ್ದಿದೆ.</p>.<p>ದುರೌಂಧಾ ಮತ್ತು ಮಹಾರಾಜಗಂಜ್ ತಾಲ್ಲೂಕುಗಳ ಕೆಲ ಹಳ್ಳಿಗಳನ್ನು ಸಂಪರ್ಕಿಸುವ ಈ ಸೇತುವೆಯನ್ನು ಕಾಲುವೆಯ ಮೇಲೆ ನಿರ್ಮಿಸಲಾಗಿತ್ತು. ಅದು ಮುಂಜಾನೆ 5 ಗಂಟೆ ಸುಮಾರಿಗೆ ಕುಸಿದಿದೆ ಎಂದು ಜಿಲ್ಲಾಧಿಕಾರಿ ಮುಕುಲ್ ಕುಮಾರ್ ಗುಪ್ತಾ ತಿಳಿಸಿದ್ದಾರೆ.</p>.<p>ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಇದು ತುಂಬಾ ಹಳೆಯ ಸೇತುವೆಯಾಗಿದ್ದು, ಕಾಲುವೆಯಲ್ಲಿ ನೀರು ಬಿಡುವಾಗ ಪಿಲ್ಲರ್ಗಳು ಕುಸಿದಿವೆ. ಅದನ್ನು ಪುನರ್ ನಿರ್ಮಿಸುವವರೆಗೆ ಈ ಭಾಗದ ಹಳ್ಳಿಗಳ ನಿವಾಸಿಗಳಿಗೆ ತೊಂದರೆಯಾಗುತ್ತದೆ. ಆದಷ್ಟು ಬೇಗ ಪುನರ್ ನಿರ್ಮಾಣಕಾರ್ಯ ಪೂರ್ಣಗೊಳಿಸಲು ಪ್ರಯತ್ನಿಸುತ್ತೇವೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.</p>.<p>1991ರಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಅಡಿಯಲ್ಲಿ 20 ಅಡಿ ಎತ್ತರದ ಈ ಸೇತುವೆಯನ್ನು ನಿರ್ಮಿಸಲಾಗಿತ್ತು. ತನಿಖಾ ವರದಿಯ ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಹಾರಾಜಗಂಜ್ನ ಉಪ ವಿಭಾಗಾಧಿಕಾರಿ ಅನಿಲ್ ಕುಮಾರ್ ತಿಳಿಸಿದ್ದಾರೆ.</p>.<p>ರಾಜ್ಯದ ಅರಾರಿಯ ಜಿಲ್ಲೆಯಲ್ಲಿ ಬಾಕ್ರಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆಯ ಒಂದು ಭಾಗ ಜೂನ್ 18ರಂದು ಕುಸಿದಿತ್ತು. ಈ ಸೇತುವೆಯ ಸಂಪರ್ಕ ರಸ್ತೆಗಳ ನಿರ್ಮಾಣ ಬಾಕಿ ಉಳಿದಿದ್ದುದರಿಂದ ಅದು ಸಾರ್ವಜನಿಕ ಬಳಕೆಗೆ ಮುಕ್ತವಾಗಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿವಾನ್ (ಪಿಟಿಐ): ಬಿಹಾರದ ಸಿವಾನ್ ಜಿಲ್ಲೆಯ ಸಣ್ಣ ಸೇತುವೆಯೊಂದು ಶನಿವಾರ ಬೆಳಿಗ್ಗೆ ಕುಸಿದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚೆಗಷ್ಟೇ ರಾಜ್ಯದ ಅರಾರಿಯದಲ್ಲಿ ಹೊಸ ಸೇತುವೆಯೊಂದು ಕುಸಿದಿತ್ತು. ಅದರ ಬೆನ್ನಲ್ಲೇ ಮತ್ತೊಂದು ಸೇತುವೆ ಕುಸಿದು ಬಿದ್ದಿದೆ.</p>.<p>ದುರೌಂಧಾ ಮತ್ತು ಮಹಾರಾಜಗಂಜ್ ತಾಲ್ಲೂಕುಗಳ ಕೆಲ ಹಳ್ಳಿಗಳನ್ನು ಸಂಪರ್ಕಿಸುವ ಈ ಸೇತುವೆಯನ್ನು ಕಾಲುವೆಯ ಮೇಲೆ ನಿರ್ಮಿಸಲಾಗಿತ್ತು. ಅದು ಮುಂಜಾನೆ 5 ಗಂಟೆ ಸುಮಾರಿಗೆ ಕುಸಿದಿದೆ ಎಂದು ಜಿಲ್ಲಾಧಿಕಾರಿ ಮುಕುಲ್ ಕುಮಾರ್ ಗುಪ್ತಾ ತಿಳಿಸಿದ್ದಾರೆ.</p>.<p>ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಇದು ತುಂಬಾ ಹಳೆಯ ಸೇತುವೆಯಾಗಿದ್ದು, ಕಾಲುವೆಯಲ್ಲಿ ನೀರು ಬಿಡುವಾಗ ಪಿಲ್ಲರ್ಗಳು ಕುಸಿದಿವೆ. ಅದನ್ನು ಪುನರ್ ನಿರ್ಮಿಸುವವರೆಗೆ ಈ ಭಾಗದ ಹಳ್ಳಿಗಳ ನಿವಾಸಿಗಳಿಗೆ ತೊಂದರೆಯಾಗುತ್ತದೆ. ಆದಷ್ಟು ಬೇಗ ಪುನರ್ ನಿರ್ಮಾಣಕಾರ್ಯ ಪೂರ್ಣಗೊಳಿಸಲು ಪ್ರಯತ್ನಿಸುತ್ತೇವೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.</p>.<p>1991ರಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಅಡಿಯಲ್ಲಿ 20 ಅಡಿ ಎತ್ತರದ ಈ ಸೇತುವೆಯನ್ನು ನಿರ್ಮಿಸಲಾಗಿತ್ತು. ತನಿಖಾ ವರದಿಯ ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಹಾರಾಜಗಂಜ್ನ ಉಪ ವಿಭಾಗಾಧಿಕಾರಿ ಅನಿಲ್ ಕುಮಾರ್ ತಿಳಿಸಿದ್ದಾರೆ.</p>.<p>ರಾಜ್ಯದ ಅರಾರಿಯ ಜಿಲ್ಲೆಯಲ್ಲಿ ಬಾಕ್ರಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆಯ ಒಂದು ಭಾಗ ಜೂನ್ 18ರಂದು ಕುಸಿದಿತ್ತು. ಈ ಸೇತುವೆಯ ಸಂಪರ್ಕ ರಸ್ತೆಗಳ ನಿರ್ಮಾಣ ಬಾಕಿ ಉಳಿದಿದ್ದುದರಿಂದ ಅದು ಸಾರ್ವಜನಿಕ ಬಳಕೆಗೆ ಮುಕ್ತವಾಗಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>