ಕಿಶನ್ಗಂಜ್ನಲ್ಲಿ ಗುರುವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಶಿಕ್ಷಣ ಸಚಿವ ಮದನ್ ದಿಲಾವರ್, ಶಿಕ್ಷಕಿ ಹೇಮಲತಾ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ‘ಸರಸ್ವತಿಯ ಕೊಡುಗೆ ಏನು ಎಂದು ಶಾಲೆಯಲ್ಲೇ ಕೇಳಿದ್ದಾರೆ. ಈ ಮಾತನ್ನು ಯಾರೇ ಹೇಳಿದರೂ ಅವರನ್ನು ಅಮಾನತುಗೊಳಿಸುವೆ’ ಎಂದು ಸಚಿವರು ಸಭೆಯಲ್ಲಿ ಹೇಳಿದ್ದರು. ಮರುದಿನವೇ ಅಮಾನತು ಆದೇಶ ಹೊರಡಿಸಲಾಗಿದೆ.