<p><strong>ತ್ರಿಶೂರ್/ತಿರುವನಂತಪುರ</strong>: ‘ಕೆಲ ದಿನಗಳಲ್ಲಿ ಕೇರಳದ ಅತಿರಪಿಲ್ಲಿ ಅರಣ್ಯ ಪ್ರದೇಶದಲ್ಲಿ ಆಂಥ್ರಾಕ್ಸ್ ಸೋಂಕಿನಿಂದಾಗಿ ಕೆಲ ಕಾಡು ಹಂದಿಗಳು ಮೃತಪಟ್ಟಿವೆ. ಆದರೆ ಜಾನುವಾರುಗಳಲ್ಲಿ ಸೋಂಕು ಕಾಣಿಸಿಕೊಂಡಿಲ್ಲ. ಹೀಗಾಗಿ ಯಾರೂ ಆತಂಕಕ್ಕೆ ಒಳಗಾಗಬಾರದು’ ಎಂದುತ್ರಿಶೂರ್ ಜಿಲ್ಲಾಧಿಕಾರಿ ಹರಿತಾ ವಿ.ಕುಮಾರ್ ತಿಳಿಸಿದ್ದಾರೆ.</p>.<p>‘ಅರಣ್ಯ ವ್ಯಾಪ್ತಿಯಲ್ಲಿನ ಸಾಕು ಪ್ರಾಣಿಗಳಲ್ಲೂ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. ಪ್ರಾಣಿಗಳಿಂದ ಮನುಷ್ಯರಿಗೆ ಸೋಂಕು ಹರಡುವ ಸಾಧ್ಯತೆಯೂ ತೀರಾ ಕಡಿಮೆ. ಹೀಗಾಗಿ ಗಾಬರಿಪಡುವ ಬದಲು ಕೆಲ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು’ ಎಂದು ಹೇಳಿದ್ದಾರೆ.</p>.<p>‘ಮುಂಜಾಗ್ರತಾ ದೃಷ್ಟಿಯಿಂದ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿನ ಜಾನುವಾರುಗಳಿಗೆ ಲಸಿಕೆ ನೀಡಲಾಗುತ್ತಿದೆ. ಸೋಂಕು ನಿಯಂತ್ರಿಸಲು ಎಲ್ಲಾ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದಿದ್ದಾರೆ.</p>.<p>‘ಆರೋಗ್ಯ ಹಾಗೂ ಪಶುಸಂಗೋಪನಾ ಇಲಾಖೆಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿವೆ. ಸೋಂಕು ನಿಯಂತ್ರಣ ಸಂಬಂಧ ಕೈಗೊಂಡಿರುವ ಕ್ರಮಗಳ ಕುರಿತ ಮಾಹಿತಿ ಒದಗಿಸುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಅರಣ್ಯ ಸಚಿವ ಎ.ಕೆ.ಶಶೀಂಧ್ರನ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತ್ರಿಶೂರ್/ತಿರುವನಂತಪುರ</strong>: ‘ಕೆಲ ದಿನಗಳಲ್ಲಿ ಕೇರಳದ ಅತಿರಪಿಲ್ಲಿ ಅರಣ್ಯ ಪ್ರದೇಶದಲ್ಲಿ ಆಂಥ್ರಾಕ್ಸ್ ಸೋಂಕಿನಿಂದಾಗಿ ಕೆಲ ಕಾಡು ಹಂದಿಗಳು ಮೃತಪಟ್ಟಿವೆ. ಆದರೆ ಜಾನುವಾರುಗಳಲ್ಲಿ ಸೋಂಕು ಕಾಣಿಸಿಕೊಂಡಿಲ್ಲ. ಹೀಗಾಗಿ ಯಾರೂ ಆತಂಕಕ್ಕೆ ಒಳಗಾಗಬಾರದು’ ಎಂದುತ್ರಿಶೂರ್ ಜಿಲ್ಲಾಧಿಕಾರಿ ಹರಿತಾ ವಿ.ಕುಮಾರ್ ತಿಳಿಸಿದ್ದಾರೆ.</p>.<p>‘ಅರಣ್ಯ ವ್ಯಾಪ್ತಿಯಲ್ಲಿನ ಸಾಕು ಪ್ರಾಣಿಗಳಲ್ಲೂ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. ಪ್ರಾಣಿಗಳಿಂದ ಮನುಷ್ಯರಿಗೆ ಸೋಂಕು ಹರಡುವ ಸಾಧ್ಯತೆಯೂ ತೀರಾ ಕಡಿಮೆ. ಹೀಗಾಗಿ ಗಾಬರಿಪಡುವ ಬದಲು ಕೆಲ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು’ ಎಂದು ಹೇಳಿದ್ದಾರೆ.</p>.<p>‘ಮುಂಜಾಗ್ರತಾ ದೃಷ್ಟಿಯಿಂದ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿನ ಜಾನುವಾರುಗಳಿಗೆ ಲಸಿಕೆ ನೀಡಲಾಗುತ್ತಿದೆ. ಸೋಂಕು ನಿಯಂತ್ರಿಸಲು ಎಲ್ಲಾ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದಿದ್ದಾರೆ.</p>.<p>‘ಆರೋಗ್ಯ ಹಾಗೂ ಪಶುಸಂಗೋಪನಾ ಇಲಾಖೆಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿವೆ. ಸೋಂಕು ನಿಯಂತ್ರಣ ಸಂಬಂಧ ಕೈಗೊಂಡಿರುವ ಕ್ರಮಗಳ ಕುರಿತ ಮಾಹಿತಿ ಒದಗಿಸುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಅರಣ್ಯ ಸಚಿವ ಎ.ಕೆ.ಶಶೀಂಧ್ರನ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>