ದೇಶದ ಹಲವೆಡೆ ಸೂಕ್ಷ್ಮ ಪ್ರದೇಶಗಳಲ್ಲಿ ಅಂತರ್ಜಾಲ ಸೇವೆ ಸ್ಥಗಿತಗೊಳಿಸಲಾಗಿದೆ. ಪೊಲೀಸ್ ಮೂಲಗಳ ಮಾಹಿತಿ ಪ್ರಕಾರ, ಪರಿಸ್ಥಿತಿ ನಿಯಂತ್ರಿಸುವ ಸಲುವಾಗಿ ದೇಶದಾದ್ಯಂತ ಸುಮಾರು 7,000 ಜನರನ್ನು ವಶಕ್ಕೆ ಪಡೆಯಲಾಗಿದೆ. 705 ಮಂದಿಯನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. ಚೆನ್ನೈ, ದೆಹಲಿ, ಗುರುಗ್ರಾಮ, ಕೋಲ್ಕತ್ತ ಮತ್ತು ಗುವಾಹಟಿಗಳಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.