<p><strong>ನವದೆಹಲಿ:</strong> ಕರ್ನಾಟಕ ಸೇರಿ ದೇಶದ ವಿವಿಧ ಭಾಗಗಳಲ್ಲಿ ಜಾರಿ ಮಾಡಲಾಗಿರುವ ಮತಾಂತರ ನಿಷೇಧ ಕಾಯ್ದೆಗೆ ತಡೆ ನೀಡಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಗಳ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.</p>.ಪಾಕಿಸ್ತಾನ | ಹಿಂದೂ ಬಾಲಕಿಯ ಅಪಹರಣ; ಮತಾಂತರ, ವೃದ್ಧನೊಂದಿಗೆ ಬಲವಂತದ ಮದುವೆ.<p>ಸಿಜೆಐ ಬಿ.ಆರ್ ಗವಾಯಿ, ನ್ಯಾಯಮೂರ್ತಿಗಳಾದ ವಿನೋದ್ ಚಂದ್ರನ್ ಹಾಗೂ ಎನ್.ವಿ ಅಂಜಾರಿಯಾ ಅವರಿದ್ದ ಪೀಠ ಅರ್ಜಿಯ ವಿಚಾರಣೆಯನ್ನು ಡಿಸೆಂಬರ್ಗೆ ನಿಗದಿ ಪಡಿಸಿತು.</p><p>ಅರ್ಜಿಯ ವಿಚಾರಣೆಯನ್ನು ಮುಂದಿನ ವಾರಕ್ಕೆ ಪಟ್ಟಿ ಮಾಡಿ ಎಂದು ಅರ್ಜಿದಾರರ ಪರ ವಕೀಲರು ವಿನಂತಿಸಿದರು. ‘ಅದು ಸಾಧ್ಯವಿಲ್ಲ, ನನಗೆ ತೀರ್ಪುಗಳನ್ನು ಬರೆಯಬೇಕಿದೆ’ ಎಂದು ನವೆಂಬರ್ 23ರಂದು ನಿವೃತ್ತಿಯಾಗಲಿರುವ ಸಿಜೆಐ ಹೇಳಿದರು.</p><p>ಸೆಪ್ಟೆಂಬರ್ 16 ರಂದು, ಮತಾಂತರ ವಿರೋಧಿ ಕಾನೂನುಗಳ ಮೇಲೆ ತಡೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಹಲವಾರು ರಾಜ್ಯಗಳ ನಿಲುವನ್ನು ಪೀಠವು ಕೋರಿತ್ತು.</p>.ಮತಾಂತರ ವಿರೋಧಿ ಕಾಯ್ದೆ ತಡೆ ಕೋರಿ ಅರ್ಜಿ ವಿಚಾರಣೆ: ‘ಸುಪ್ರೀಂ’ ನಡೆಗೆ ಸಂತರ ಟೀಕೆ.<p>ರಾಜ್ಯಗಳು ಉತ್ತರ ಸಲ್ಲಿಸಿದ ನಂತರ ಅಂತಹ ಕಾನೂನುಗಳಿಗೆ ತಡೆ ನೀಡುವ ಮನವಿಯನ್ನು ಪರಿಗಣಿಸುವುದಾಗಿ ಸಿಜೆಐ ನೇತೃತ್ವದ ಪೀಠ ಸ್ಪಷ್ಟಪಡಿಸಿತು.</p><p>ರಾಜ್ಯಗಳಿಗೆ ತಮ್ಮ ಪ್ರತಿಕ್ರಿಯೆ ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡಿ, ಎರಡು ವಾರಗಳ ನಂತರ ಹೆಚ್ಚುವರಿ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಿತ್ತು.</p><p>ಉತ್ತರ ಪ್ರದೇಶ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಉತ್ತರಾಖಂಡ, ಛತ್ತೀಸಗಢ, ಗುಜರಾತ್, ಹರಿಯಾಣ, ಜಾರ್ಖಂಡ್ ಮತ್ತು ಕರ್ನಾಟಕ ಸೇರಿದಂತೆ ಹಲವಾರು ರಾಜ್ಯಗಳು ಜಾರಿಗೆ ತಂದಿರುವ ಮತಾಂತರ ವಿರೋಧಿ ಕಾನೂನುಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ಪೀಠವು ವಿಚಾರಣೆ ನಡೆಸುತ್ತಿದೆ.</p> .ಛತ್ತೀಸಗಢ | ಬಲವಂತದ ಮತಾಂತರ ಆರೋಪ: ಕೇರಳದ ಕ್ರೈಸ್ತ ಸನ್ಯಾಸಿನಿಯರಿಗೆ ಜಾಮೀನು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕರ್ನಾಟಕ ಸೇರಿ ದೇಶದ ವಿವಿಧ ಭಾಗಗಳಲ್ಲಿ ಜಾರಿ ಮಾಡಲಾಗಿರುವ ಮತಾಂತರ ನಿಷೇಧ ಕಾಯ್ದೆಗೆ ತಡೆ ನೀಡಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಗಳ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.</p>.ಪಾಕಿಸ್ತಾನ | ಹಿಂದೂ ಬಾಲಕಿಯ ಅಪಹರಣ; ಮತಾಂತರ, ವೃದ್ಧನೊಂದಿಗೆ ಬಲವಂತದ ಮದುವೆ.<p>ಸಿಜೆಐ ಬಿ.ಆರ್ ಗವಾಯಿ, ನ್ಯಾಯಮೂರ್ತಿಗಳಾದ ವಿನೋದ್ ಚಂದ್ರನ್ ಹಾಗೂ ಎನ್.ವಿ ಅಂಜಾರಿಯಾ ಅವರಿದ್ದ ಪೀಠ ಅರ್ಜಿಯ ವಿಚಾರಣೆಯನ್ನು ಡಿಸೆಂಬರ್ಗೆ ನಿಗದಿ ಪಡಿಸಿತು.</p><p>ಅರ್ಜಿಯ ವಿಚಾರಣೆಯನ್ನು ಮುಂದಿನ ವಾರಕ್ಕೆ ಪಟ್ಟಿ ಮಾಡಿ ಎಂದು ಅರ್ಜಿದಾರರ ಪರ ವಕೀಲರು ವಿನಂತಿಸಿದರು. ‘ಅದು ಸಾಧ್ಯವಿಲ್ಲ, ನನಗೆ ತೀರ್ಪುಗಳನ್ನು ಬರೆಯಬೇಕಿದೆ’ ಎಂದು ನವೆಂಬರ್ 23ರಂದು ನಿವೃತ್ತಿಯಾಗಲಿರುವ ಸಿಜೆಐ ಹೇಳಿದರು.</p><p>ಸೆಪ್ಟೆಂಬರ್ 16 ರಂದು, ಮತಾಂತರ ವಿರೋಧಿ ಕಾನೂನುಗಳ ಮೇಲೆ ತಡೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಹಲವಾರು ರಾಜ್ಯಗಳ ನಿಲುವನ್ನು ಪೀಠವು ಕೋರಿತ್ತು.</p>.ಮತಾಂತರ ವಿರೋಧಿ ಕಾಯ್ದೆ ತಡೆ ಕೋರಿ ಅರ್ಜಿ ವಿಚಾರಣೆ: ‘ಸುಪ್ರೀಂ’ ನಡೆಗೆ ಸಂತರ ಟೀಕೆ.<p>ರಾಜ್ಯಗಳು ಉತ್ತರ ಸಲ್ಲಿಸಿದ ನಂತರ ಅಂತಹ ಕಾನೂನುಗಳಿಗೆ ತಡೆ ನೀಡುವ ಮನವಿಯನ್ನು ಪರಿಗಣಿಸುವುದಾಗಿ ಸಿಜೆಐ ನೇತೃತ್ವದ ಪೀಠ ಸ್ಪಷ್ಟಪಡಿಸಿತು.</p><p>ರಾಜ್ಯಗಳಿಗೆ ತಮ್ಮ ಪ್ರತಿಕ್ರಿಯೆ ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡಿ, ಎರಡು ವಾರಗಳ ನಂತರ ಹೆಚ್ಚುವರಿ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಿತ್ತು.</p><p>ಉತ್ತರ ಪ್ರದೇಶ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಉತ್ತರಾಖಂಡ, ಛತ್ತೀಸಗಢ, ಗುಜರಾತ್, ಹರಿಯಾಣ, ಜಾರ್ಖಂಡ್ ಮತ್ತು ಕರ್ನಾಟಕ ಸೇರಿದಂತೆ ಹಲವಾರು ರಾಜ್ಯಗಳು ಜಾರಿಗೆ ತಂದಿರುವ ಮತಾಂತರ ವಿರೋಧಿ ಕಾನೂನುಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ಪೀಠವು ವಿಚಾರಣೆ ನಡೆಸುತ್ತಿದೆ.</p> .ಛತ್ತೀಸಗಢ | ಬಲವಂತದ ಮತಾಂತರ ಆರೋಪ: ಕೇರಳದ ಕ್ರೈಸ್ತ ಸನ್ಯಾಸಿನಿಯರಿಗೆ ಜಾಮೀನು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>