<p><strong>ನವದೆಹಲಿ:</strong> ಪರಿಶಿಷ್ಟ ಜಾತಿ ರಾಷ್ಟ್ರೀಯ ಆಯೋಗದಲ್ಲಿ (ಎನ್ಸಿಎಸ್ಸಿ) ಹುದ್ದೆಗಳು ಖಾಲಿಯಿರುವುದಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರವನ್ನು ಶುಕ್ರವಾರ ತರಾಟೆಗೆ ತೆಗೆದುಕೊಂಡಿದ್ದಾರೆ.</p>.<p>ದಲಿತರ ಹಕ್ಕುಗಳು ಮತ್ತು ಹಿತಾಸಕ್ತಿಗಳ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.</p>.<p>ಎಸ್.ಸಿ ರಾಷ್ಟ್ರೀಯ ಆಯೋಗವು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಅದನ್ನು ದುರ್ಬಲಗೊಳಿಸುವುದು ದಲಿತರ ಸಾಂವಿಧಾನಿಕ ಮತ್ತು ಸಾಮಾಜಿಕ ಹಕ್ಕುಗಳ ಮೇಲಿನ ನೇರ ದಾಳಿಯಾಗಿದೆ ಎಂದು ಟೀಕಿಸಿದ್ದಾರೆ.</p>.<p>‘ಬಿಜೆಪಿ ಸರ್ಕಾರದ ದಲಿತ ವಿರೋಧಿ ಮನಃಸ್ಥಿತಿಗೆ ಮತ್ತೊಂದು ಪುರಾವೆ. ದಲಿತರ ಹಕ್ಕುಗಳನ್ನು ರಕ್ಷಿಸುವ ಪರಿಶಿಷ್ಟ ಜಾತಿ ರಾಷ್ಟ್ರೀಯ ಆಯೋಗವನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಲಾಗಿದೆ. ಆಯೋಗದ ಎರಡು ಪ್ರಮುಖ ಹುದ್ದೆಗಳು ಕಳೆದ ಒಂದು ವರ್ಷದಿಂದ ಖಾಲಿಯಾಗಿವೆ’ ಎಂದು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p>‘ಅಯೋಗವು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸದಿದ್ದರೆ, ದಲಿತರ ಧ್ವನಿಯನ್ನು ಕೇಳುವವರು ಯಾರು? ಅವರ ದೂರುಗಳಿಗೆ ಸ್ಪಂದಿಸುವವರು ಯಾರು? ಪ್ರಧಾನಿ ಮೋದಿ ಅವರೇ, ಆಯೋಗದ ಖಾಲಿ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿಗೊಳಿಸಲು ಕ್ರಮ ಕೈಗೊಳ್ಳಿ’ ಎಂದು ಮನವಿ ಮಾಡಿದ್ದಾರೆ.</p>.<p>ಕಿಶೋರ್ ಮಖ್ವಾನಾ ನೇತೃತ್ವದ ಆಯೋಗದಲ್ಲಿ ಎರಡು ಹುದ್ದೆಗಳು (ಉಪಾಧ್ಯಕ್ಷ ಮತ್ತು ಒಬ್ಬ ಸದಸ್ಯ) ಖಾಲಿಯಿವೆ ಎಂಬ ಮಾಹಿತಿ ಎನ್ಸಿಎಸ್ಸಿ ವೆಬ್ಸೈಟ್ನಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪರಿಶಿಷ್ಟ ಜಾತಿ ರಾಷ್ಟ್ರೀಯ ಆಯೋಗದಲ್ಲಿ (ಎನ್ಸಿಎಸ್ಸಿ) ಹುದ್ದೆಗಳು ಖಾಲಿಯಿರುವುದಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರವನ್ನು ಶುಕ್ರವಾರ ತರಾಟೆಗೆ ತೆಗೆದುಕೊಂಡಿದ್ದಾರೆ.</p>.<p>ದಲಿತರ ಹಕ್ಕುಗಳು ಮತ್ತು ಹಿತಾಸಕ್ತಿಗಳ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.</p>.<p>ಎಸ್.ಸಿ ರಾಷ್ಟ್ರೀಯ ಆಯೋಗವು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಅದನ್ನು ದುರ್ಬಲಗೊಳಿಸುವುದು ದಲಿತರ ಸಾಂವಿಧಾನಿಕ ಮತ್ತು ಸಾಮಾಜಿಕ ಹಕ್ಕುಗಳ ಮೇಲಿನ ನೇರ ದಾಳಿಯಾಗಿದೆ ಎಂದು ಟೀಕಿಸಿದ್ದಾರೆ.</p>.<p>‘ಬಿಜೆಪಿ ಸರ್ಕಾರದ ದಲಿತ ವಿರೋಧಿ ಮನಃಸ್ಥಿತಿಗೆ ಮತ್ತೊಂದು ಪುರಾವೆ. ದಲಿತರ ಹಕ್ಕುಗಳನ್ನು ರಕ್ಷಿಸುವ ಪರಿಶಿಷ್ಟ ಜಾತಿ ರಾಷ್ಟ್ರೀಯ ಆಯೋಗವನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಲಾಗಿದೆ. ಆಯೋಗದ ಎರಡು ಪ್ರಮುಖ ಹುದ್ದೆಗಳು ಕಳೆದ ಒಂದು ವರ್ಷದಿಂದ ಖಾಲಿಯಾಗಿವೆ’ ಎಂದು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p>‘ಅಯೋಗವು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸದಿದ್ದರೆ, ದಲಿತರ ಧ್ವನಿಯನ್ನು ಕೇಳುವವರು ಯಾರು? ಅವರ ದೂರುಗಳಿಗೆ ಸ್ಪಂದಿಸುವವರು ಯಾರು? ಪ್ರಧಾನಿ ಮೋದಿ ಅವರೇ, ಆಯೋಗದ ಖಾಲಿ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿಗೊಳಿಸಲು ಕ್ರಮ ಕೈಗೊಳ್ಳಿ’ ಎಂದು ಮನವಿ ಮಾಡಿದ್ದಾರೆ.</p>.<p>ಕಿಶೋರ್ ಮಖ್ವಾನಾ ನೇತೃತ್ವದ ಆಯೋಗದಲ್ಲಿ ಎರಡು ಹುದ್ದೆಗಳು (ಉಪಾಧ್ಯಕ್ಷ ಮತ್ತು ಒಬ್ಬ ಸದಸ್ಯ) ಖಾಲಿಯಿವೆ ಎಂಬ ಮಾಹಿತಿ ಎನ್ಸಿಎಸ್ಸಿ ವೆಬ್ಸೈಟ್ನಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>