ತೆರವು ಕಾರ್ಯಾಚರಣೆಗೆ ಅಡ್ಡಿಪಡಿಸಿದ ಶಾಸಕ ಅಮಾನುತುಲ್ಲಾ ಮತ್ತು ಇತರ ನಾಯಕರ ವಿರುದ್ಧ ದೂರು ದಾಖಲಿಸುವಂತೆ ಎಸ್ಡಿಎಂಸಿ ಮೇಯರ್ ಮುಖೇಶ್ ಸೂರ್ಯನ್, ಪಾಲಿಕೆ ಆಯುಕ್ತರಿಗೆ ಪತ್ರ ಬರೆದು ಸೂಚಿಸಿದ ಬಳಿಕ ಈ ದೂರು ದಾಖಲಿಸಲಾಗಿದೆ.
ಇಂದು ಬೆಳಗ್ಗೆ ಶಾಹೀನ್ ಬಾಗ್ನಲ್ಲಿ ಅಕ್ರಮ ಕಟ್ಟಡಗಳ ನೆಲಸಮ ಕಾರ್ಯಾಚರಣೆಗೆ ದಕ್ಷಿಣ ದೆಹಲಿ ಮಹಾನಗರ ಪಾಲಿಕೆ(ಎಸ್ಡಿಎಂಸಿ) ಮುಂದಾಗಿತ್ತು. ಈ ಸಂದರ್ಭ ಮಹಿಳೆಯರು, ಮಕ್ಕಳು ಸೇರಿದಂತೆ ನೂರಾರು ಜನರು ವಿರೋಧ ವ್ಯಕ್ತಪಡಿಸಿದರು. ಹೀಗಾಗಿ, ಬುಲ್ಡೋಜರ್ ಜೊತೆ ಬಂದಿದ್ದ ತೆರವು ಕಾರ್ಯಾಚರಣೆ ತಂಡದ ಅಧಿಕಾರಿಗಳು ಯಾವುದೇ ಕ್ರಮ ಜರುಗಿಸದೆ ವಾಪಸ್ ಆದರು.