ಚೌಬೆ ಅವರು ಈ ಹಿಂದೆ ಇಂತಹದೇ ಕಾರಣಕ್ಕೆ ಸುದ್ದಿಯಾಗಿದ್ದರು. ಗ್ರಾಮವೊಂದರಲ್ಲಿ ಚುನಾವಣಾ ಪ್ರಚಾರ ಸಭೆಯ ವೇದಿಕೆ ಮೇಲೆ ಅವರು ಬಸ್ಕಿ ಹೊಡೆದಿದ್ದರು. ಇದನ್ನು ಸಮರ್ಥಿಸಿಕೊಂಡಿದ್ದ ಅವರು, ಕಳೆದ ಐದು ವರ್ಷಗಳಲ್ಲಿ ತನಗೆ ತಿಳಿಯದಂತೆ ಏನಾದರೂ ತಪ್ಪುಗಳು ಮಾಡಿದ್ದರೆ ಕ್ಷಮಿಸಿ ಎಂದು ಜನರನ್ನು ಕೇಳಿಕೊಳ್ಳುವುದರಲ್ಲಿ ತಪ್ಪೇನಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.