ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂದ್ರಬಾಬು ನಾಯ್ಡುಗೆ ಜಾಮೀನು: ಸುಪ್ರೀಂಕೋರ್ಟ್‌ಗೆ ಆಂಧ್ರಪ್ರದೇಶ ಸರ್ಕಾರ ಅರ್ಜಿ

Published 21 ನವೆಂಬರ್ 2023, 14:45 IST
Last Updated 21 ನವೆಂಬರ್ 2023, 14:45 IST
ಅಕ್ಷರ ಗಾತ್ರ

ನವದೆಹಲಿ: ಕೌಶಲಾಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡುಗೆ ಜಾಮೀನು ನೀಡಿರುವ ಹೈಕೋರ್ಟ್‌ ಆದೇಶದ ವಿರುದ್ಧ, ಆಂಧ್ರಪ್ರದೇಶ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಆಂಧ್ರಪ್ರದೇಶ ಹೈಕೋರ್ಟ್ ನ.20ರಂದು ನಾಯ್ಡುಗೆ ಜಾಮೀನು ಮಂಜೂರು ಮಾಡಿತ್ತು.

ನಾಲ್ಕು ವಾರದ ಮಧ್ಯಂತರ ವೈದ್ಯಕೀಯ ಜಾಮೀನನ್ನು ಪೂರ್ಣ ಪ್ರಮಾಣದ ಜಾಮೀನಾಗಿ ಪರಿವರ್ತಿಸಿದ್ದ ಹೈಕೋರ್ಟ್‌, ನಾಯ್ಡು ಅನಾರೋಗ್ಯವನ್ನು ಪರಿಗಣಿಸಿ ಬಿಡುಗಡೆಗೆ ಆದೇಶಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT