<p class="title"><strong>ಅಮರಾವತಿ</strong>: ಇದೇ 27ರಿಂದ ಚಿತ್ತೂರು ಜಿಲ್ಲೆಯ ಕುಪ್ಪಂನಿಂದ ಆರಂಭವಾಗಲಿರುವ ತೆಲುಗು ದೇಶಂ ಪಕ್ಷದ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಅವರ ಪುತ್ರ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಅವರ 4 ಸಾವಿರ ಕಿ.ಮೀ ಉದ್ದದ ಪಾದಯಾತ್ರೆಗೆ ಆಂಧ್ರಪ್ರದೇಶದ ಪೊಲೀಸರು ಮಂಗಳವಾರ ಅನುಮತಿ ನೀಡಿದ್ದಾರೆ.</p>.<p class="bodytext">‘ಯಾತ್ರೆಯ ಭಾಗವಾಗಿ ನಡೆಯಲಿರುವ ಎಲ್ಲಾ ಸಾರ್ವಜನಿಕ ಸಭೆಗಳಿಗೆ ಪೊಲೀಸರು ಸಾಮಾನ್ಯವಾದ ಕೆಲವು ಷರತ್ತುಗಳನ್ನು ವಿಧಿಸಿದ್ದಾರೆ. ಆದರೆ, ಪಾದಯಾತ್ರೆಗೆ ಯಾವುದೇ ನಿರ್ದಿಷ್ಟ ಷರತ್ತು ವಿಧಿಸಲಾಗಿಲ್ಲ’ ಎಂದು ಚಿತ್ತೂರಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಶಾಂತ್ ರೆಡ್ಡಿ ತಿಳಿಸಿದ್ದಾರೆ.</p>.<p>‘ಪಾದಯಾತ್ರೆಯು ಹೊಸ ಕ್ಷೇತ್ರಕ್ಕೆ ಬಂದಾಗಲೆಲ್ಲಾ ಸಂಘಟಕರು ಸಂಬಂಧಪಟ್ಟ ಜಿಲ್ಲೆಯ ಪೊಲೀಸರಿಂದ ಅನುಮತಿ ಪಡೆಯಬೇಕು’ ಎಂದೂ ಅವರು ಹೇಳಿದ್ದಾರೆ. </p>.<p>‘ಪಾದಯಾತ್ರೆಗೆ ‘ಯುವ ಗಲಂ’ (ಯುವಜನರ ಧ್ವನಿ) ಎಂದು ಹೆಸರಿಡಲಾಗಿದ್ದು, ಲೋಕೇಶ್ ಅವರು ಕುಪ್ಪಂನಿಂದ ಇಚ್ಚಾಪುರದವರೆಗೆ 400 ದಿನಗಳಲ್ಲಿ ಸುಮಾರು 125 ಕ್ಷೇತ್ರಗಳಲ್ಲಿ ಸಂಚರಿಸುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ’ ಎಂದು ಟಿಡಿಪಿ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಅಮರಾವತಿ</strong>: ಇದೇ 27ರಿಂದ ಚಿತ್ತೂರು ಜಿಲ್ಲೆಯ ಕುಪ್ಪಂನಿಂದ ಆರಂಭವಾಗಲಿರುವ ತೆಲುಗು ದೇಶಂ ಪಕ್ಷದ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಅವರ ಪುತ್ರ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಅವರ 4 ಸಾವಿರ ಕಿ.ಮೀ ಉದ್ದದ ಪಾದಯಾತ್ರೆಗೆ ಆಂಧ್ರಪ್ರದೇಶದ ಪೊಲೀಸರು ಮಂಗಳವಾರ ಅನುಮತಿ ನೀಡಿದ್ದಾರೆ.</p>.<p class="bodytext">‘ಯಾತ್ರೆಯ ಭಾಗವಾಗಿ ನಡೆಯಲಿರುವ ಎಲ್ಲಾ ಸಾರ್ವಜನಿಕ ಸಭೆಗಳಿಗೆ ಪೊಲೀಸರು ಸಾಮಾನ್ಯವಾದ ಕೆಲವು ಷರತ್ತುಗಳನ್ನು ವಿಧಿಸಿದ್ದಾರೆ. ಆದರೆ, ಪಾದಯಾತ್ರೆಗೆ ಯಾವುದೇ ನಿರ್ದಿಷ್ಟ ಷರತ್ತು ವಿಧಿಸಲಾಗಿಲ್ಲ’ ಎಂದು ಚಿತ್ತೂರಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಶಾಂತ್ ರೆಡ್ಡಿ ತಿಳಿಸಿದ್ದಾರೆ.</p>.<p>‘ಪಾದಯಾತ್ರೆಯು ಹೊಸ ಕ್ಷೇತ್ರಕ್ಕೆ ಬಂದಾಗಲೆಲ್ಲಾ ಸಂಘಟಕರು ಸಂಬಂಧಪಟ್ಟ ಜಿಲ್ಲೆಯ ಪೊಲೀಸರಿಂದ ಅನುಮತಿ ಪಡೆಯಬೇಕು’ ಎಂದೂ ಅವರು ಹೇಳಿದ್ದಾರೆ. </p>.<p>‘ಪಾದಯಾತ್ರೆಗೆ ‘ಯುವ ಗಲಂ’ (ಯುವಜನರ ಧ್ವನಿ) ಎಂದು ಹೆಸರಿಡಲಾಗಿದ್ದು, ಲೋಕೇಶ್ ಅವರು ಕುಪ್ಪಂನಿಂದ ಇಚ್ಚಾಪುರದವರೆಗೆ 400 ದಿನಗಳಲ್ಲಿ ಸುಮಾರು 125 ಕ್ಷೇತ್ರಗಳಲ್ಲಿ ಸಂಚರಿಸುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ’ ಎಂದು ಟಿಡಿಪಿ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>