ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ ಸರಣಿ ಬಾಂಬ್‌ ಸ್ಫೋಟ: ಎಸ್‌ಪಿಪಿ ನೇಮಿಸದ ಸರ್ಕಾರ

Published 6 ಸೆಪ್ಟೆಂಬರ್ 2023, 16:14 IST
Last Updated 6 ಸೆಪ್ಟೆಂಬರ್ 2023, 16:14 IST
ಅಕ್ಷರ ಗಾತ್ರ

ಮುಂಬೈ: 2006ರಲ್ಲಿ ನಡೆದಿದ್ದ ಮುಂಬೈ ಸರಣಿ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿರುದ್ಧ ಸರ್ಕಾರವನ್ನು ಪ್ರತಿನಿಧಿಸಲು ಸರ್ಕಾರ ಪರ ವಿಶೇಷ ವಕೀಲರನ್ನು (ಎಸ್‌ಪಿಪಿ) ನೇಮಿಸದಿರುವ ಕುರಿತು ಬಾಂಬೆ ಹೈಕೋರ್ಟ್‌ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಬುಧವಾರ ಹರಿಹಾಯ್ದಿದೆ. 

ಸರ್ಕಾರವು ಈ ಮೊಕದ್ದಮೆಯನ್ನು ಗಂಭೀರವಾಗಿ ನಡೆಸುತ್ತಿಲ್ಲ ಎಂದು ನ್ಯಾಯಮೂರ್ತಿಗಳಾದ ನಿತಿನ್‌ ಸಾಂಬ್ರೆ ಮತ್ತು ರಾಜೇಶ್‌ ಪಾಟೀಲ್‌ ಅವರಿದ್ದ ವಿಭಾಗೀಯ ಪೀಠವು ಅಸಮಾಧಾನ ವ್ಯಕ್ತಪಡಿಸಿದೆ. 

ಈ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣಾ ನ್ಯಾಯಾಲಯವು ಐವರು ಆರೋಪಿಗಳಿಗೆ 2015ರಲ್ಲಿ ಮರಣ ದಂಡನೆ ವಿಧಿಸಿ ಆದೇಶ ನೀಡಿತ್ತು. ಈ ಆದೇಶದ ದೃಢೀಕರಣ ಮತ್ತು ಆರೋಪಿಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯು ಹೈಕೋರ್ಟ್‌ನಲ್ಲಿ ಇನ್ನಷ್ಟೇ ಆರಂಭವಾಗಬೇಕಿದೆ. ಅರ್ಜಿಗಳ ವಿಚಾರಣೆಯು ಬುಧವಾರ ಆರಂಭವಾದ ಬಳಿಕ ಸರ್ಕಾರವು ಎಸ್‌ಪಿಪಿಯನ್ನು ನೇಮಿಸಿಲ್ಲ ಎಂದು ಹೈಕೋರ್ಟ್‌ಗೆ ತಿಳಿಸಲಾಯಿತು.

2006ರ ಜುಲೈ 11ರಂದು ಮುಂಬೈ ಸ್ಥಳೀಯ ರೈಲುಗಳಲ್ಲಿ ಸರಣಿ ಸ್ಫೋಟ ನಡೆಸಲಾಗಿತ್ತು. ಈ ವೇಳೆ 180ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT