ಈ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣಾ ನ್ಯಾಯಾಲಯವು ಐವರು ಆರೋಪಿಗಳಿಗೆ 2015ರಲ್ಲಿ ಮರಣ ದಂಡನೆ ವಿಧಿಸಿ ಆದೇಶ ನೀಡಿತ್ತು. ಈ ಆದೇಶದ ದೃಢೀಕರಣ ಮತ್ತು ಆರೋಪಿಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯು ಹೈಕೋರ್ಟ್ನಲ್ಲಿ ಇನ್ನಷ್ಟೇ ಆರಂಭವಾಗಬೇಕಿದೆ. ಅರ್ಜಿಗಳ ವಿಚಾರಣೆಯು ಬುಧವಾರ ಆರಂಭವಾದ ಬಳಿಕ ಸರ್ಕಾರವು ಎಸ್ಪಿಪಿಯನ್ನು ನೇಮಿಸಿಲ್ಲ ಎಂದು ಹೈಕೋರ್ಟ್ಗೆ ತಿಳಿಸಲಾಯಿತು.