‘‘ಸರ್ಕಾರಿ ಪ್ರಾಯೋಜಿತ ದಾಳಿಕೋರರು’ ಐಫೋನ್ಗಳನ್ನು ಹ್ಯಾಕ್ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಕುರಿತು ವಿಪಕ್ಷಗಳ ಹಲವು ನಾಯಕರಿಗೆ ಎಚ್ಚರಿಕೆ ಸಂದೇಶ ಬಂದಿರುವುದನ್ನು ನಿರಾಕರಿಸುವಂತಿಲ್ಲ. ಆದರೆ, ವಿರೋಧ ಪಕ್ಷಗಳ ನಾಯಕರನ್ನೇ ಗುರಿಯಾಗಿಸಿದ್ದೇಕೆ? ವಿರೋಧ ಪಕ್ಷಗಳ ನಾಯಕರ ಫೋನ್ಗಳಲ್ಲಿನ ಮಾಹಿತಿ ಕಳ್ಳತನ ಮಾಡಲು ಯಾರು ಆಸಕ್ತಿ ಹೊಂದಿದ್ದಾರೆ’ ಎಂದು ಚಿದಂಬರಂ ಪ್ರಶ್ನೆ ಮಾಡಿದ್ದಾರೆ.