<p><strong>ನವದೆಹಲಿ</strong>: ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್, ಕೋಟ್ಯಧಿಪತಿಗಳ ಸಾಲ ಮನ್ನಾ ಮಾಡುವುದನ್ನು ನಿಷೇಧಿಸಲು ರಾಷ್ಟ್ರವ್ಯಾಪಿ ಕಾನೂನು ರೂಪಿಸುವಂತೆ ಒತ್ತಾಯಿಸಿದರು.</p><p>ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್, ಸಾವಿರಾರು ಕೋಟಿ ಮೌಲ್ಯದ ಕಾರ್ಪೋರೇಟ್ ಸಾಲಗಳನ್ನು ಮನ್ನಾ ಮಾಡುವ ಮೂಲಕ ಕೇಂದ್ರ ಸರ್ಕಾರವು ಶ್ರೀಮಂತರ ಪರ ನಿಂತಿದೆ ಎಂದು ಆರೋಪಿಸಿದರು.</p><p>‘ಕಾರ್ಪೋರೇಟ್ ಸಾಲ ಮನ್ನಾದಿಂದ ತೆರಿಗೆ ಹೊರೆಯು ಸಾಮಾನ್ಯ ಜನರ ಮೇಲೆ ಬೀಳುತ್ತಿದ್ದು, ಇದರ ಲಾಭವನ್ನು ಶ್ರೀಮಂತರು ಪಡೆಯುತ್ತಿದ್ದಾರೆ’ ಎಂದು ಕಿಡಿಕಾರಿದರು.</p><p>‘ಸಾಮಾನ್ಯ ಜನರು ತಮ್ಮ ಅರ್ಧದಷ್ಟು ಸಂಬಳವನ್ನು ತೆರಿಗೆ ಪಾವತಿಸುತ್ತಿದ್ದಾರೆ. ಆದರೆ, ಶ್ರೀಮಂತರ ಸಾಲಗಳು ಮನ್ನಾ ಆಗುತ್ತಿವೆ. ಕೇಂದ್ರ ಸರ್ಕಾರವು ಸಾಮಾನ್ಯ ಜನರ ಗೃಹ ಸಾಲ, ವಾಹನ ಸಾಲ ಮತ್ತು ಇತರ ಆರ್ಥಿಕ ಹೊರೆಯನ್ನು ಮನ್ನಾ ಮಾಡುವುದಿಲ್ಲ ಏಕೆ’ ಎಂದು ಪ್ರಶ್ನಿಸಿದ್ದಾರೆ.</p><p>ಕೋಟ್ಯಧಿಪತಿಗಳ ಸಾಲ ಮನ್ನಾ ಮಾಡುವುದನ್ನು ನಿಲ್ಲಿಸುವುದರಿಂದ ಆದಾಯ ತೆರಿಗೆ ಮತ್ತು ಜಿಎಸ್ಟಿ ದರಗಳನ್ನು ಅರ್ಧದಷ್ಟು ಕಡಿಮೆ ಮಾಡಲು, ತೆರಿಗೆ ವಿಧಿಸಬಹುದಾದ ಆದಾಯ ಮಿತಿಯನ್ನು ದ್ವಿಗುಣಗೊಳಿಸಲು, ಅಗತ್ಯ ವಸ್ತುಗಳ ಮೇಲಿನ ಜಿಎಸ್ಟಿಯನ್ನು ತೆಗೆದುಹಾಕಲು ಸರ್ಕಾರಕ್ಕೆ ಅವಕಾಶ ಮಾಡಿಕೊಡುತ್ತದೆ ಎಂದು ಹೇಳಿದರು.</p><p>ಇದೊಂದು ದೊಡ್ಡ ಹಗರಣವಾಗಿದ್ದು, ಇದಕ್ಕೆ ಕಡಿವಾಣ ಹಾಕಲು ಸಮಯ ಬಂದಿದೆ ಎಂದೂ ಹೇಳಿದರು.</p><p>70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ಚುನಾವಣೆ ನಡೆಯಲಿದ್ದು, ಫೆಬ್ರುವರಿ 8ಕ್ಕೆ ಮತ ಎಣಿಕೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್, ಕೋಟ್ಯಧಿಪತಿಗಳ ಸಾಲ ಮನ್ನಾ ಮಾಡುವುದನ್ನು ನಿಷೇಧಿಸಲು ರಾಷ್ಟ್ರವ್ಯಾಪಿ ಕಾನೂನು ರೂಪಿಸುವಂತೆ ಒತ್ತಾಯಿಸಿದರು.</p><p>ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್, ಸಾವಿರಾರು ಕೋಟಿ ಮೌಲ್ಯದ ಕಾರ್ಪೋರೇಟ್ ಸಾಲಗಳನ್ನು ಮನ್ನಾ ಮಾಡುವ ಮೂಲಕ ಕೇಂದ್ರ ಸರ್ಕಾರವು ಶ್ರೀಮಂತರ ಪರ ನಿಂತಿದೆ ಎಂದು ಆರೋಪಿಸಿದರು.</p><p>‘ಕಾರ್ಪೋರೇಟ್ ಸಾಲ ಮನ್ನಾದಿಂದ ತೆರಿಗೆ ಹೊರೆಯು ಸಾಮಾನ್ಯ ಜನರ ಮೇಲೆ ಬೀಳುತ್ತಿದ್ದು, ಇದರ ಲಾಭವನ್ನು ಶ್ರೀಮಂತರು ಪಡೆಯುತ್ತಿದ್ದಾರೆ’ ಎಂದು ಕಿಡಿಕಾರಿದರು.</p><p>‘ಸಾಮಾನ್ಯ ಜನರು ತಮ್ಮ ಅರ್ಧದಷ್ಟು ಸಂಬಳವನ್ನು ತೆರಿಗೆ ಪಾವತಿಸುತ್ತಿದ್ದಾರೆ. ಆದರೆ, ಶ್ರೀಮಂತರ ಸಾಲಗಳು ಮನ್ನಾ ಆಗುತ್ತಿವೆ. ಕೇಂದ್ರ ಸರ್ಕಾರವು ಸಾಮಾನ್ಯ ಜನರ ಗೃಹ ಸಾಲ, ವಾಹನ ಸಾಲ ಮತ್ತು ಇತರ ಆರ್ಥಿಕ ಹೊರೆಯನ್ನು ಮನ್ನಾ ಮಾಡುವುದಿಲ್ಲ ಏಕೆ’ ಎಂದು ಪ್ರಶ್ನಿಸಿದ್ದಾರೆ.</p><p>ಕೋಟ್ಯಧಿಪತಿಗಳ ಸಾಲ ಮನ್ನಾ ಮಾಡುವುದನ್ನು ನಿಲ್ಲಿಸುವುದರಿಂದ ಆದಾಯ ತೆರಿಗೆ ಮತ್ತು ಜಿಎಸ್ಟಿ ದರಗಳನ್ನು ಅರ್ಧದಷ್ಟು ಕಡಿಮೆ ಮಾಡಲು, ತೆರಿಗೆ ವಿಧಿಸಬಹುದಾದ ಆದಾಯ ಮಿತಿಯನ್ನು ದ್ವಿಗುಣಗೊಳಿಸಲು, ಅಗತ್ಯ ವಸ್ತುಗಳ ಮೇಲಿನ ಜಿಎಸ್ಟಿಯನ್ನು ತೆಗೆದುಹಾಕಲು ಸರ್ಕಾರಕ್ಕೆ ಅವಕಾಶ ಮಾಡಿಕೊಡುತ್ತದೆ ಎಂದು ಹೇಳಿದರು.</p><p>ಇದೊಂದು ದೊಡ್ಡ ಹಗರಣವಾಗಿದ್ದು, ಇದಕ್ಕೆ ಕಡಿವಾಣ ಹಾಕಲು ಸಮಯ ಬಂದಿದೆ ಎಂದೂ ಹೇಳಿದರು.</p><p>70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ಚುನಾವಣೆ ನಡೆಯಲಿದ್ದು, ಫೆಬ್ರುವರಿ 8ಕ್ಕೆ ಮತ ಎಣಿಕೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>