ನವದೆಹಲಿ: ಕೊರೊನಾ ಹರಡುತ್ತಿರುವ ಕಾರಣ ದೇಶದಾದ್ಯಂತ ಇರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ವ್ಯಾಪ್ತಿಯ ಸಂರಕ್ಷಿತ ಸ್ಮಾರಕಗಳು, ಐತಿಹಾಸಿಕ ತಾಣಗಳು ಮತ್ತು ವಸ್ತು ಸಂಗ್ರಹಾಲಯಗಳಿಗೆ ಸಾರ್ವಜನಿಕರ ಪ್ರವೇಶವನ್ನು ಮೇ 15ರವರೆಗೆ ನಿರ್ಬಂಧಿಸಲು ಕೇಂದ್ರ ನಿರ್ಧರಿಸಿದೆ.
ಸಂಬಂಧಿಸಿದ ಪ್ರಾಧಿಕಾರದ ಅನುಮೋದನೆಯೊಂದಿಗೆ ಹೊರಡಿಸಲಾದ ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಎಎಸ್ಐ ನಿರ್ದೇಶಕ (ಸ್ಮಾರಕಗಳು) ಎನ್.ಕೆ. ಪಾಠಕ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ.