‘ಭೋಜಶಾಲದಲ್ಲಿ ಸಮೀಕ್ಷೆ ಆರಂಭವಾಗಿದೆ. ಸಮೀಕ್ಷೆ ನಡೆಸಲು ಪುರಾತತ್ವ ಇಲಾಖೆಗೆ ಬೇಕಾದ ಎಲ್ಲಾ ಸಹಕಾರವನ್ನು ನಾವು ನೀಡಿದ್ದೇವೆ. ಸ್ಥಳದಲ್ಲಿ ಶಾಂತಿ ಭಂಗವಾಗದಂತೆ ಅಗತ್ಯ ಭದ್ರತೆಯನ್ನೂ ಕಲ್ಪಿಸಲಾಗಿದೆ’ ಎಂದು ಧಾರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಸಿಂಗ್ ಪಿಟಿಐಗೆ ತಿಳಿಸಿದರು.
ಸ್ಥಳದಲ್ಲಿ ಭಾರಿ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದರು.
ಆರು ವಾರದೊಳಗೆ ಭೋಜಶಾಲ ಅವರಣದಲ್ಲಿ ವೈಜ್ಞಾನಿಕ ಸಮೀಕ್ಷೆ ನಡೆಸಬೇಕು ಎಂದು ಮಾರ್ಚ್ 11ರಂದು ಮಧ್ಯ ಪ್ರದೇಶ ಹೈಕೋರ್ಟ್ ಆದೇಶಿಸಿತ್ತು.