<p class="title"><strong>ನವದೆಹಲಿ (ಪಿಟಿಐ): </strong>ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಪುಣ್ಯತಿಥಿ ದಿನವಾದ ಗುರುವಾರ ಅವರಿಗೆ ಕಾಂಗ್ರೆಸ್ ಮುಖಂಡರು ಶ್ರದ್ಧಾಂಜಲಿ ಸಲ್ಲಿಸಿದರು.</p>.<p class="title">ಇಲ್ಲಿಯ ಶಾಂತಿವನದಲ್ಲಿರುವ ನೆಹರೂ ಸ್ಮಾರಕಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುಷ್ಪನಮನ ಸಲ್ಲಿಸಿದರು.</p>.<p class="title">’ನಾವು ಪಂಡಿತ್ ಜವಾಹರಲಾಲ್ ನೆಹರೂ ಅವರಿಗೆ ಗೌರವ ಸಲ್ಲಿಸಿದೆವು. ಅವರು ಭಾರತ ಸೇರಿದಂತೆ ಇಡೀ ಪ್ರಪಂಚಕ್ಕೆ ಅವಿಸ್ಮರಣೀಯ ಕೊಡುಗೆ ನೀಡಿದ್ದಾರೆ. ಅತ್ಯುನ್ನತ ಬುದ್ಧಿಶಕ್ತಿ ಹೊಂದಿದ್ದ ಅವರು ನಿಜವಾದ ದೇಶಭಕ್ತರಾಗಿದ್ದರು. ಅವರು ಆಧುನಿಕ ಭಾರತದ ಶಿಲ್ಪಿ‘ ಎಂದು ಕಾಂಗ್ರೆಸ್ ಅಧಿಕೃತ ಟ್ವಿಟರ್ನಲ್ಲಿ ಹೇಳಿದೆ.</p>.<p class="title">’ನೆಹರೂ ಅವರು ಭಾರತದ ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಮತ್ತು ಅಭಿವೃದ್ಧಿಗೆ ಉತ್ಸಾಹದಿಂದ ಅವಿರತವಾಗಿ ಶ್ರಮಿಸಿದರು‘ ಎಂದು ’ನೆಹರೂ ಸ್ಮರಣೆ‘ ಎಂದು ಹ್ಯಾಶ್ಟ್ಯಾಗ್ ಬಳಸಿ ಟ್ವೀಟ್ ಮಾಡಿದೆ.</p>.<p class="title">ನೆಹರೂ ಹೇಳಿಕೆಯನ್ನು ಪೋಸ್ಟ್ ಮಾಡಿರುವ ರಾಹುಲ್, ’ಅವರ ಪುಣ್ಯಸ್ಮರಣೆಯ ದಿನ ಅವರ ತಿಳುವಳಿಕೆಯ ಮಾತುಗಳು ನೆನಪಾಗುತ್ತಿವೆ‘ ಎಂದಿದ್ದಾರೆ.</p>.<p class="title">ಭಾರತದ ಮೊದಲ ಪ್ರಧಾನಿಯಾದ ನೆಹರೂ ಆಗಸ್ಟ್ 1947ರಿಂದ ಮೇ 1964 ರವರೆಗೆ ಅಧಿಕಾರ ನಿರ್ವಹಿಸಿದ್ದರು. 1964ರಲ್ಲಿ ನಿಧನ ಹೊಂದಿದರು.</p>.<p class="bodytext"><a href="https://www.prajavani.net/karnataka-news/farmers-protest-crossed-60-days-siddaramaiah-suggestions-to-central-government-farm-bills-833766.html" itemprop="url">ಪ್ರತಿಭಟನೆಯಲ್ಲಿ ಮಡಿದ ರೈತರನ್ನು ಹುತಾತ್ಮರೆಂದು ಘೋಷಿಸಿ: ಸಿದ್ದರಾಮಯ್ಯ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ (ಪಿಟಿಐ): </strong>ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಪುಣ್ಯತಿಥಿ ದಿನವಾದ ಗುರುವಾರ ಅವರಿಗೆ ಕಾಂಗ್ರೆಸ್ ಮುಖಂಡರು ಶ್ರದ್ಧಾಂಜಲಿ ಸಲ್ಲಿಸಿದರು.</p>.<p class="title">ಇಲ್ಲಿಯ ಶಾಂತಿವನದಲ್ಲಿರುವ ನೆಹರೂ ಸ್ಮಾರಕಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುಷ್ಪನಮನ ಸಲ್ಲಿಸಿದರು.</p>.<p class="title">’ನಾವು ಪಂಡಿತ್ ಜವಾಹರಲಾಲ್ ನೆಹರೂ ಅವರಿಗೆ ಗೌರವ ಸಲ್ಲಿಸಿದೆವು. ಅವರು ಭಾರತ ಸೇರಿದಂತೆ ಇಡೀ ಪ್ರಪಂಚಕ್ಕೆ ಅವಿಸ್ಮರಣೀಯ ಕೊಡುಗೆ ನೀಡಿದ್ದಾರೆ. ಅತ್ಯುನ್ನತ ಬುದ್ಧಿಶಕ್ತಿ ಹೊಂದಿದ್ದ ಅವರು ನಿಜವಾದ ದೇಶಭಕ್ತರಾಗಿದ್ದರು. ಅವರು ಆಧುನಿಕ ಭಾರತದ ಶಿಲ್ಪಿ‘ ಎಂದು ಕಾಂಗ್ರೆಸ್ ಅಧಿಕೃತ ಟ್ವಿಟರ್ನಲ್ಲಿ ಹೇಳಿದೆ.</p>.<p class="title">’ನೆಹರೂ ಅವರು ಭಾರತದ ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಮತ್ತು ಅಭಿವೃದ್ಧಿಗೆ ಉತ್ಸಾಹದಿಂದ ಅವಿರತವಾಗಿ ಶ್ರಮಿಸಿದರು‘ ಎಂದು ’ನೆಹರೂ ಸ್ಮರಣೆ‘ ಎಂದು ಹ್ಯಾಶ್ಟ್ಯಾಗ್ ಬಳಸಿ ಟ್ವೀಟ್ ಮಾಡಿದೆ.</p>.<p class="title">ನೆಹರೂ ಹೇಳಿಕೆಯನ್ನು ಪೋಸ್ಟ್ ಮಾಡಿರುವ ರಾಹುಲ್, ’ಅವರ ಪುಣ್ಯಸ್ಮರಣೆಯ ದಿನ ಅವರ ತಿಳುವಳಿಕೆಯ ಮಾತುಗಳು ನೆನಪಾಗುತ್ತಿವೆ‘ ಎಂದಿದ್ದಾರೆ.</p>.<p class="title">ಭಾರತದ ಮೊದಲ ಪ್ರಧಾನಿಯಾದ ನೆಹರೂ ಆಗಸ್ಟ್ 1947ರಿಂದ ಮೇ 1964 ರವರೆಗೆ ಅಧಿಕಾರ ನಿರ್ವಹಿಸಿದ್ದರು. 1964ರಲ್ಲಿ ನಿಧನ ಹೊಂದಿದರು.</p>.<p class="bodytext"><a href="https://www.prajavani.net/karnataka-news/farmers-protest-crossed-60-days-siddaramaiah-suggestions-to-central-government-farm-bills-833766.html" itemprop="url">ಪ್ರತಿಭಟನೆಯಲ್ಲಿ ಮಡಿದ ರೈತರನ್ನು ಹುತಾತ್ಮರೆಂದು ಘೋಷಿಸಿ: ಸಿದ್ದರಾಮಯ್ಯ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>