<p><strong>ಪಟ್ನಾ:</strong>‘ವೈಮಾನಿಕ ದಾಳಿಯ ಸಾಕ್ಷ್ಯಗಳನ್ನು ಕೇಳುವ ಮೂಲಕ ವಿರೋಧಪಕ್ಷಗಳು ದೇಶಕ್ಕೆ ದ್ರೋಹ ಬಗೆಯುತ್ತಿವೆ. ಇಂತಹ ಹೇಳಿಕೆಗಳಿಂದ ಸೇನಾಪಡೆಗಳ ಸ್ಥೈರ್ಯ ಕುಗ್ಗುತ್ತಿದೆ. ಆದರೆ ಪಾಕಿಸ್ತಾನಕ್ಕೆ ಖುಷಿಯಾಗುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಎನ್ಡಿಎ ಮೈತ್ರಿಕೂಟವು ಇಲ್ಲಿ ಆಯೋಜಿಸಿದ್ದ ‘ಸಂಕಲ್ಪ ಯಾತ್ರೆ’ಯಲ್ಲಿ ಅವರು ಮಾತನಾಡಿದರು.</p>.<p>‘ಒಂದೆಡೆ ಸೈನಿಕರು ಉಗ್ರರ ವಿರುದ್ಧ ಹೋರಾಡುತ್ತಿದ್ದರು. ಆಗ ದೇಶವು ಒಗ್ಗಟ್ಟಿನಿಂದ ನಿಲ್ಲಬೇಕಿತ್ತು. ಆದರೆ ಈ 21 ವಿರೋಧ ಪಕ್ಷಗಳು ದೆಹಲಿಯಲ್ಲಿ ಗುಂಪುಗೂಡಿ, ನಮ್ಮ ಕ್ರಮಗಳನ್ನು ಖಂಡಿಸುತ್ತಿದ್ದವು. ಸೇನಾಪಡೆಗಳ ಕಾರ್ಯಾಚರಣೆಯ ಸಾಕ್ಷ್ಯ ಕೇಳುತ್ತಿದ್ದವು. ಈ ಹಿಂದೆ ನಿರ್ದಿಷ್ಟ ದಾಳಿ ನಡೆಸಿದಾಗಲೂ ಈ ಪಕ್ಷಗಳು ಹೀಗೆಯೇ ಸಾಕ್ಷ್ಯ ಕೇಳಿದ್ದವು’ ಎಂದು ಮೋದಿ ಹರಿಹಾಯ್ದರು.</p>.<p>‘ನಾನು ಬಡತನವನ್ನು ನಿರ್ಮೂಲನೆ ಮಾಡಲು ಹೋರಾಡುತ್ತಿದ್ದೇನೆ. ಆದರೆ ವಿಪಕ್ಷಗಳು ನನ್ನನ್ನೇ ನಿರ್ಮೂಲನೆ ಮಾಡಲು ಬಯಸುತ್ತಿವೆ. ನಾನು ಭ್ರಷ್ಟಾಚಾರ ನಿರ್ಮೂಲನೆಗೆ ಹೋರಾಡುತ್ತಿದ್ದೇನೆ. ಆದರೆ ಇವರು ನನ್ನನ್ನೇ ನಿರ್ಮೂಲನೆ ಮಾಡಲು ಒಂದಾಗಿದ್ದಾರೆ’ ಎಂದು ಮೋದಿ ಆರೋಪಿಸಿದರು.</p>.<p>‘ಬಡವರ ಹೆಸರಿನಲ್ಲಿ ತಮ್ಮ ರಾಜಕೀಯದ ವ್ಯಾಪಾರ ನಡೆಸುತ್ತಿರುವವರು ತಮ್ಮ ಲಾಭವನ್ನು ಬಿಟ್ಟು ಬೇರೇನೂ ಯೋಚಿಸುತ್ತಿಲ್ಲ. ಹೀಗಾಗಿಯೇ ಅವರಿಗೆ ಕಾವಲುಗಾರ ಎಂದರೆ ಸಮಸ್ಯೆ. ಆದರೆ ಕಾವಲುಗಾರ ಎಚ್ಚರವಾಗಿದ್ದಾನೆ ಮತ್ತು ತನ್ನ ಕರ್ತವ್ಯ ನಿರ್ವಹಿಸುತ್ತಿದ್ದಾನೆ’ ಎಂದು ಅವರು ಹೇಳಿದರು.</p>.<p>‘ಸೌದಿ ಅರೇಬಿಯಾದ ಯುವರಾಜನ ಜತೆ ಮಾತನಾಡಿದ ನಂತರ ಹಜ್ ಯಾತ್ರೆಯಲ್ಲಿ ಭಾರತೀಯರ ಕೋಟಾ ಹೆಚ್ಚಾಗಿದೆ. ಬೇರೆ-ಬೇರೆ ಕಾರಣಗಳಿಗೆ ಸೌದಿಯಲ್ಲಿ ಬಂಧನದಲ್ಲಿರುವ 850 ಭಾರತೀಯರನ್ನು ಬಿಡುಗಡೆ ಮಾಡಲು ಅವರು ಒಪ್ಪಿಕೊಂಡಿದ್ದಾರೆ. ಜಾಗತಿಕವಾಗಿ ಭಾರತದ ಸ್ಥಾನ ಬದಲಾಗಿದೆ ಎಂಬುದನ್ನು ಇದು ಸೂಚಿಸುತ್ತದೆ. ಈ ಹಿಂದೆ ಅಧಿಕಾರದಲ್ಲಿದ್ದ ಕಾಂಗ್ರೆಸ್ ತನ್ನ ಲಾಭವನ್ನಷ್ಟೇ ಯೋಚಿಸುತ್ತಿತ್ತು ಎಂಬುದನ್ನೂ ಇದು ಸೂಚಿಸುತ್ತದೆ’ ಎಂದು ಅವರು ಆರೋಪಿಸಿದರು.</p>.<p>*ನಾನು ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಹೋರಾಡುತ್ತಿದ್ದೇನೆ. ಆದರೆ ವಿರೋಧ ಪಕ್ಷಗಳು ಗುಂಪುಗೂಡಿ ನನ್ನನ್ನೇ ಮುಗಿಸಲು ಸಂಚು ಹೂಡುತ್ತಿವೆ</p>.<p><em><strong>-ನರೇಂದ್ರ ಮೋದಿ, ಪ್ರಧಾನಿ</strong></em></p>.<p>*ಕಾವಲುಗಾರ ಜಾಗೃತನಾಗಿ ಇದ್ದಿದ್ದರೆ ಪಠಾಣ್ಕೋಟ್ ವಾಯುನೆಲೆ ಮೇಲೆ, ಗುರುದಾಸಪುರದಲ್ಲಿ, ಉರಿ ಸೇನಾನೆಲೆ ಮೇಲೆ ಮತ್ತು ಪುಲ್ವಾಮಾದಲ್ಲಿ ದಾಳಿ ನಡೆಯುತ್ತಿರಲಿಲ್ಲ</p>.<p><em><strong>-ಮನೀಷ್ ತಿವಾರಿ, ಕಾಂಗ್ರೆಸ್ ವಕ್ತಾರ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong>‘ವೈಮಾನಿಕ ದಾಳಿಯ ಸಾಕ್ಷ್ಯಗಳನ್ನು ಕೇಳುವ ಮೂಲಕ ವಿರೋಧಪಕ್ಷಗಳು ದೇಶಕ್ಕೆ ದ್ರೋಹ ಬಗೆಯುತ್ತಿವೆ. ಇಂತಹ ಹೇಳಿಕೆಗಳಿಂದ ಸೇನಾಪಡೆಗಳ ಸ್ಥೈರ್ಯ ಕುಗ್ಗುತ್ತಿದೆ. ಆದರೆ ಪಾಕಿಸ್ತಾನಕ್ಕೆ ಖುಷಿಯಾಗುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಎನ್ಡಿಎ ಮೈತ್ರಿಕೂಟವು ಇಲ್ಲಿ ಆಯೋಜಿಸಿದ್ದ ‘ಸಂಕಲ್ಪ ಯಾತ್ರೆ’ಯಲ್ಲಿ ಅವರು ಮಾತನಾಡಿದರು.</p>.<p>‘ಒಂದೆಡೆ ಸೈನಿಕರು ಉಗ್ರರ ವಿರುದ್ಧ ಹೋರಾಡುತ್ತಿದ್ದರು. ಆಗ ದೇಶವು ಒಗ್ಗಟ್ಟಿನಿಂದ ನಿಲ್ಲಬೇಕಿತ್ತು. ಆದರೆ ಈ 21 ವಿರೋಧ ಪಕ್ಷಗಳು ದೆಹಲಿಯಲ್ಲಿ ಗುಂಪುಗೂಡಿ, ನಮ್ಮ ಕ್ರಮಗಳನ್ನು ಖಂಡಿಸುತ್ತಿದ್ದವು. ಸೇನಾಪಡೆಗಳ ಕಾರ್ಯಾಚರಣೆಯ ಸಾಕ್ಷ್ಯ ಕೇಳುತ್ತಿದ್ದವು. ಈ ಹಿಂದೆ ನಿರ್ದಿಷ್ಟ ದಾಳಿ ನಡೆಸಿದಾಗಲೂ ಈ ಪಕ್ಷಗಳು ಹೀಗೆಯೇ ಸಾಕ್ಷ್ಯ ಕೇಳಿದ್ದವು’ ಎಂದು ಮೋದಿ ಹರಿಹಾಯ್ದರು.</p>.<p>‘ನಾನು ಬಡತನವನ್ನು ನಿರ್ಮೂಲನೆ ಮಾಡಲು ಹೋರಾಡುತ್ತಿದ್ದೇನೆ. ಆದರೆ ವಿಪಕ್ಷಗಳು ನನ್ನನ್ನೇ ನಿರ್ಮೂಲನೆ ಮಾಡಲು ಬಯಸುತ್ತಿವೆ. ನಾನು ಭ್ರಷ್ಟಾಚಾರ ನಿರ್ಮೂಲನೆಗೆ ಹೋರಾಡುತ್ತಿದ್ದೇನೆ. ಆದರೆ ಇವರು ನನ್ನನ್ನೇ ನಿರ್ಮೂಲನೆ ಮಾಡಲು ಒಂದಾಗಿದ್ದಾರೆ’ ಎಂದು ಮೋದಿ ಆರೋಪಿಸಿದರು.</p>.<p>‘ಬಡವರ ಹೆಸರಿನಲ್ಲಿ ತಮ್ಮ ರಾಜಕೀಯದ ವ್ಯಾಪಾರ ನಡೆಸುತ್ತಿರುವವರು ತಮ್ಮ ಲಾಭವನ್ನು ಬಿಟ್ಟು ಬೇರೇನೂ ಯೋಚಿಸುತ್ತಿಲ್ಲ. ಹೀಗಾಗಿಯೇ ಅವರಿಗೆ ಕಾವಲುಗಾರ ಎಂದರೆ ಸಮಸ್ಯೆ. ಆದರೆ ಕಾವಲುಗಾರ ಎಚ್ಚರವಾಗಿದ್ದಾನೆ ಮತ್ತು ತನ್ನ ಕರ್ತವ್ಯ ನಿರ್ವಹಿಸುತ್ತಿದ್ದಾನೆ’ ಎಂದು ಅವರು ಹೇಳಿದರು.</p>.<p>‘ಸೌದಿ ಅರೇಬಿಯಾದ ಯುವರಾಜನ ಜತೆ ಮಾತನಾಡಿದ ನಂತರ ಹಜ್ ಯಾತ್ರೆಯಲ್ಲಿ ಭಾರತೀಯರ ಕೋಟಾ ಹೆಚ್ಚಾಗಿದೆ. ಬೇರೆ-ಬೇರೆ ಕಾರಣಗಳಿಗೆ ಸೌದಿಯಲ್ಲಿ ಬಂಧನದಲ್ಲಿರುವ 850 ಭಾರತೀಯರನ್ನು ಬಿಡುಗಡೆ ಮಾಡಲು ಅವರು ಒಪ್ಪಿಕೊಂಡಿದ್ದಾರೆ. ಜಾಗತಿಕವಾಗಿ ಭಾರತದ ಸ್ಥಾನ ಬದಲಾಗಿದೆ ಎಂಬುದನ್ನು ಇದು ಸೂಚಿಸುತ್ತದೆ. ಈ ಹಿಂದೆ ಅಧಿಕಾರದಲ್ಲಿದ್ದ ಕಾಂಗ್ರೆಸ್ ತನ್ನ ಲಾಭವನ್ನಷ್ಟೇ ಯೋಚಿಸುತ್ತಿತ್ತು ಎಂಬುದನ್ನೂ ಇದು ಸೂಚಿಸುತ್ತದೆ’ ಎಂದು ಅವರು ಆರೋಪಿಸಿದರು.</p>.<p>*ನಾನು ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಹೋರಾಡುತ್ತಿದ್ದೇನೆ. ಆದರೆ ವಿರೋಧ ಪಕ್ಷಗಳು ಗುಂಪುಗೂಡಿ ನನ್ನನ್ನೇ ಮುಗಿಸಲು ಸಂಚು ಹೂಡುತ್ತಿವೆ</p>.<p><em><strong>-ನರೇಂದ್ರ ಮೋದಿ, ಪ್ರಧಾನಿ</strong></em></p>.<p>*ಕಾವಲುಗಾರ ಜಾಗೃತನಾಗಿ ಇದ್ದಿದ್ದರೆ ಪಠಾಣ್ಕೋಟ್ ವಾಯುನೆಲೆ ಮೇಲೆ, ಗುರುದಾಸಪುರದಲ್ಲಿ, ಉರಿ ಸೇನಾನೆಲೆ ಮೇಲೆ ಮತ್ತು ಪುಲ್ವಾಮಾದಲ್ಲಿ ದಾಳಿ ನಡೆಯುತ್ತಿರಲಿಲ್ಲ</p>.<p><em><strong>-ಮನೀಷ್ ತಿವಾರಿ, ಕಾಂಗ್ರೆಸ್ ವಕ್ತಾರ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>