<p><strong>ಚೆನ್ನೈ:</strong>ಹಾಡಹಗಲೇ ಶಸ್ತ್ರಸಜ್ಜಿತ ಆರು ಜನರ ಗುಂಪೊಂದು ತಮಿಳುನಾಡಿನ ಹೊಸೂರಿನಲ್ಲಿರುವ ಮುತ್ತೂಟ್ ಫೈನಾನ್ಸ್ ಶಾಖೆಗೆ ನುಗ್ಗಿ, ₹ 7 ಕೋಟಿ ಮೌಲ್ಯದ 25 ಕೆ.ಜಿ ಚಿನ್ನವನ್ನು ದರೋಡೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ.</p>.<p>ಕರ್ನಾಟಕ ಗಡಿಗೆ ಹೊಂದಿಕೊಂಡಿರುವ ಹೊಸೂರು, ಕೃಷ್ಣಗಿರಿ ಜಿಲ್ಲೆಯಲ್ಲಿದೆ. ಬೆಂಗಳೂರಿನಿಂದ 40 ಕಿ.ಮೀ ದೂರದಲ್ಲಿದೆ. ಮುತ್ತೂಟ್ ಫೈನಾನ್ಸ್ ಚಿನ್ನ ಅಡವಿಟ್ಟುಕೊಂಡು ಸಾಲ ನೀಡುವ ಕಂಪನಿ.</p>.<p>ಹೊಸೂರು– ಬಾಗಲೂರು ರಸ್ತೆಯಲ್ಲಿ ಸಂಸ್ಥೆಯ ಶಾಖೆ ಇದೆ. ಶುಕ್ರವಾರ ಬೆಳಿಗ್ಗೆ 9.30ರ ವೇಳೆಗೆ ಶಾಖೆಯನ್ನು ತೆರೆದ ಸಿಬ್ಬಂದಿ, ದಿನದ ಕರ್ತವ್ಯಕ್ಕೆ ಅಣಿಯಾಗುತ್ತಿದ್ದ ವೇಳೆ ಶಸ್ತ್ರಸಜ್ಜಿತ ಆರು ಜನರು ಶಾಖೆ ಒಳಗೆ ನುಗ್ಗಿದ್ದಾರೆ.</p>.<p>ಮುಖಗವುಸು ಧರಿಸಿದ್ದ ಅವರು, ಮೊದಲು ಕಾವಲುಗಾರನ ಮೇಲೆ ಹಲ್ಲೆ ನಡೆಸಿ, ಒಳ ನುಗ್ಗಿದ್ದಾರೆ. ಗನ್ ತೋರಿಸಿ ಶಾಖೆಯ ಸಿಬ್ಬಂದಿಗೆ ಬೆದರಿಕೆವೊಡ್ಡಿದ ದರೋಡೆಕೋರರು, ಲಾಕರ್ಗಳಲ್ಲಿದ್ದ 25 ಕೆ.ಜಿ ಚಿನ್ನ, ₹ 96,000 ನಗದು ಲೂಟಿ ಮಾಡಿ ಪರಾರಿಯಾಗಿದ್ದಾರೆ.</p>.<p>ಈ ಕೃತ್ಯದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ.</p>.<p>‘ದರೋಡೆಕೋರರ ಪತ್ತೆಗಾಗಿ 10 ವಿಶೇಷ ತಂಡಗಳನ್ನು ರಚಿಸಲಾಗಿದೆ. ಬೆಂಗಳೂರು ಹಾಗೂ ತಮಿಳುನಾಡಿನ ವಿವಿಧ ಸ್ಥಳಗಳಿಗೆ ತೆರಳಿರುವ ತಂಡಗಳು ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿವೆ’ ಎಂದು ಕೃಷ್ಣಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಂಡಿ ಗಂಗಾಧರ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಎಲ್ಲ ಆಯಾಮಗಳಲ್ಲಿಯೂ ತನಿಖೆಯನ್ನು ಆರಂಭಿಸಿದ್ದೇವೆ. ಬೆಂಗಳೂರು ರಾಜ್ಯದ ಗಡಿಗೆ ಸಮೀಪದಲ್ಲಿದ್ದು, ದರೋಡೆಕೋರರು ಅಲ್ಲಿ ಅಡಗಿರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಹೀಗಾಗಿ ಆರೋಪಿಗಳ ಪತ್ತೆಗಾಗಿ ಕರ್ನಾಟಕ ಪೊಲೀಸರ ನೆರವು ಕೇಳಿದ್ದೇವೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong>ಹಾಡಹಗಲೇ ಶಸ್ತ್ರಸಜ್ಜಿತ ಆರು ಜನರ ಗುಂಪೊಂದು ತಮಿಳುನಾಡಿನ ಹೊಸೂರಿನಲ್ಲಿರುವ ಮುತ್ತೂಟ್ ಫೈನಾನ್ಸ್ ಶಾಖೆಗೆ ನುಗ್ಗಿ, ₹ 7 ಕೋಟಿ ಮೌಲ್ಯದ 25 ಕೆ.ಜಿ ಚಿನ್ನವನ್ನು ದರೋಡೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ.</p>.<p>ಕರ್ನಾಟಕ ಗಡಿಗೆ ಹೊಂದಿಕೊಂಡಿರುವ ಹೊಸೂರು, ಕೃಷ್ಣಗಿರಿ ಜಿಲ್ಲೆಯಲ್ಲಿದೆ. ಬೆಂಗಳೂರಿನಿಂದ 40 ಕಿ.ಮೀ ದೂರದಲ್ಲಿದೆ. ಮುತ್ತೂಟ್ ಫೈನಾನ್ಸ್ ಚಿನ್ನ ಅಡವಿಟ್ಟುಕೊಂಡು ಸಾಲ ನೀಡುವ ಕಂಪನಿ.</p>.<p>ಹೊಸೂರು– ಬಾಗಲೂರು ರಸ್ತೆಯಲ್ಲಿ ಸಂಸ್ಥೆಯ ಶಾಖೆ ಇದೆ. ಶುಕ್ರವಾರ ಬೆಳಿಗ್ಗೆ 9.30ರ ವೇಳೆಗೆ ಶಾಖೆಯನ್ನು ತೆರೆದ ಸಿಬ್ಬಂದಿ, ದಿನದ ಕರ್ತವ್ಯಕ್ಕೆ ಅಣಿಯಾಗುತ್ತಿದ್ದ ವೇಳೆ ಶಸ್ತ್ರಸಜ್ಜಿತ ಆರು ಜನರು ಶಾಖೆ ಒಳಗೆ ನುಗ್ಗಿದ್ದಾರೆ.</p>.<p>ಮುಖಗವುಸು ಧರಿಸಿದ್ದ ಅವರು, ಮೊದಲು ಕಾವಲುಗಾರನ ಮೇಲೆ ಹಲ್ಲೆ ನಡೆಸಿ, ಒಳ ನುಗ್ಗಿದ್ದಾರೆ. ಗನ್ ತೋರಿಸಿ ಶಾಖೆಯ ಸಿಬ್ಬಂದಿಗೆ ಬೆದರಿಕೆವೊಡ್ಡಿದ ದರೋಡೆಕೋರರು, ಲಾಕರ್ಗಳಲ್ಲಿದ್ದ 25 ಕೆ.ಜಿ ಚಿನ್ನ, ₹ 96,000 ನಗದು ಲೂಟಿ ಮಾಡಿ ಪರಾರಿಯಾಗಿದ್ದಾರೆ.</p>.<p>ಈ ಕೃತ್ಯದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ.</p>.<p>‘ದರೋಡೆಕೋರರ ಪತ್ತೆಗಾಗಿ 10 ವಿಶೇಷ ತಂಡಗಳನ್ನು ರಚಿಸಲಾಗಿದೆ. ಬೆಂಗಳೂರು ಹಾಗೂ ತಮಿಳುನಾಡಿನ ವಿವಿಧ ಸ್ಥಳಗಳಿಗೆ ತೆರಳಿರುವ ತಂಡಗಳು ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿವೆ’ ಎಂದು ಕೃಷ್ಣಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಂಡಿ ಗಂಗಾಧರ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಎಲ್ಲ ಆಯಾಮಗಳಲ್ಲಿಯೂ ತನಿಖೆಯನ್ನು ಆರಂಭಿಸಿದ್ದೇವೆ. ಬೆಂಗಳೂರು ರಾಜ್ಯದ ಗಡಿಗೆ ಸಮೀಪದಲ್ಲಿದ್ದು, ದರೋಡೆಕೋರರು ಅಲ್ಲಿ ಅಡಗಿರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಹೀಗಾಗಿ ಆರೋಪಿಗಳ ಪತ್ತೆಗಾಗಿ ಕರ್ನಾಟಕ ಪೊಲೀಸರ ನೆರವು ಕೇಳಿದ್ದೇವೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>