‘ನಾವು ವಾಸಿಸುವ ಪ್ರದೇಶದಲ್ಲಿ ಬೀದಿ ನಾಯಿಗಳ ಉಪಟಳ ವಿಪರೀತವಾಗಿದೆ. ಈಚೆಗೆ ಮದರಸಾ ವಿದ್ಯಾರ್ಥಿಗೆ ನಾಯಿ ಕಚ್ಚಿತ್ತು. ಬಳಿಕ ಅವುಗಳ ಭೀತಿಯಿಂದ ನನ್ನ ಮಕ್ಕಳು ಸೇರಿದಂತೆ ಈ ಪ್ರದೇಶದ ಮಕ್ಕಳು ಶಾಲೆಗೆ ಹೋಗುವುದನ್ನೇ ನಿಲ್ಲಿಸಿದ್ದರು. ಈ ಕಾರಣಕ್ಕೆ ಅನಿವಾರ್ಯವಾಗಿ ಏರ್ಗನ್ನ ಮೊರೆ ಹೋಗಬೇಕಾಯಿತು. ಮಕ್ಕಳ ಮೇಲೆ ದಾಳಿ ಮಾಡಲು ಬಂದರೆ ನಾಯಿಗಳಿಗೆ ಶೂಟ್ ಮಾಡುತ್ತೇನೆ’ ಎಂದು ಸಮೀರ್ ತಿಳಿಸಿದ್ದಾರೆ.