<p><strong>ಕಾಸರಗೋಡು</strong>: ಬೀದಿ ನಾಯಿಗಳ ಉಪಟಳದಿಂದ ಬೇಸತ್ತು ಶಾಲಾ ಮಕ್ಕಳಿಗೆ ರಕ್ಷಣೆ ನೀಡಲುಇಲ್ಲಿನ ಬೇಕಲ ನಿವಾಸಿಸಮೀರ್ ಎಂಬುವವರು ಏರ್ಗನ್ ಮೊರೆ ಹೋಗಿದ್ದಾರೆ.</p>.<p>ಕೇರಳದಾದ್ಯಂತ ಬೀದಿನಾಯಿಗಳ ಹಾವಳಿ ಹೆಚ್ಚಾಗುತ್ತಿರುವ ಬಗ್ಗೆ ಚರ್ಚೆ ನಡೆಯುತ್ತಿರುವ ನಡುವೆಯೇ ಸಮೀರ್ ಅವರು ಏರ್ಗನ್ ಹಿಡಿದು ವಿದ್ಯಾರ್ಥಿಗಳ ಗುಂಪೊಂದನ್ನು ಶಾಲೆಗೆ ಕರೆದೊಯ್ಯುತ್ತಿರುವ ದೃಶ್ಯದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.</p>.<p>‘ನಾವು ವಾಸಿಸುವ ಪ್ರದೇಶದಲ್ಲಿ ಬೀದಿ ನಾಯಿಗಳ ಉಪಟಳ ವಿಪರೀತವಾಗಿದೆ. ಈಚೆಗೆ ಮದರಸಾ ವಿದ್ಯಾರ್ಥಿಗೆ ನಾಯಿ ಕಚ್ಚಿತ್ತು. ಬಳಿಕ ಅವುಗಳ ಭೀತಿಯಿಂದ ನನ್ನ ಮಕ್ಕಳು ಸೇರಿದಂತೆ ಈ ಪ್ರದೇಶದ ಮಕ್ಕಳು ಶಾಲೆಗೆ ಹೋಗುವುದನ್ನೇ ನಿಲ್ಲಿಸಿದ್ದರು. ಈ ಕಾರಣಕ್ಕೆ ಅನಿವಾರ್ಯವಾಗಿ ಏರ್ಗನ್ನ ಮೊರೆ ಹೋಗಬೇಕಾಯಿತು. ಮಕ್ಕಳ ಮೇಲೆ ದಾಳಿ ಮಾಡಲು ಬಂದರೆ ನಾಯಿಗಳಿಗೆ ಶೂಟ್ ಮಾಡುತ್ತೇನೆ’ ಎಂದು ಸಮೀರ್ ತಿಳಿಸಿದ್ದಾರೆ.</p>.<p>‘ಏರ್ಗನ್ ಇಟ್ಟುಕೊಳ್ಳಲು ಪರವಾನಗಿ ಅಗತ್ಯವಿಲ್ಲ. ನಾನು ಯಾವುದೇ ನಾಯಿಯನ್ನು ಸಾಯಿಸಿಲ್ಲ, ಆದ್ದರಿಂದ ಕಾನೂನು ಕ್ರಮಕ್ಕೆ ಭಯಪಡುವುದಿಲ್ಲ. ಆತ್ಮರಕ್ಷಣೆಗಾಗಿ ಏರ್ಗನ್ ಇಟ್ಟುಕೊಂಡಿದ್ದೇನೆ’ ಎಂದೂ ಸಮೀರ್ ಹೇಳಿದ್ದಾರೆ.</p>.<p>ಸಮೀರ್ ಅವರು ಏರ್ಗನ್ ಹಿಡಿದು ವಿದ್ಯಾರ್ಥಿಗಳೊಂದಿಗೆ ತೆರಳುತ್ತಿರುವ ದೃಶ್ಯವನ್ನು ಅವರ ಮಗ ಚಿತ್ರೀಕರಿಸಿದ್ದು, ಬಳಿಕ ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಲಾಗಿತ್ತು.</p>.<p>ಈ ಕುರಿತು ಯಾವುದೇ ದೂರು ಲಭಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಸರಗೋಡು</strong>: ಬೀದಿ ನಾಯಿಗಳ ಉಪಟಳದಿಂದ ಬೇಸತ್ತು ಶಾಲಾ ಮಕ್ಕಳಿಗೆ ರಕ್ಷಣೆ ನೀಡಲುಇಲ್ಲಿನ ಬೇಕಲ ನಿವಾಸಿಸಮೀರ್ ಎಂಬುವವರು ಏರ್ಗನ್ ಮೊರೆ ಹೋಗಿದ್ದಾರೆ.</p>.<p>ಕೇರಳದಾದ್ಯಂತ ಬೀದಿನಾಯಿಗಳ ಹಾವಳಿ ಹೆಚ್ಚಾಗುತ್ತಿರುವ ಬಗ್ಗೆ ಚರ್ಚೆ ನಡೆಯುತ್ತಿರುವ ನಡುವೆಯೇ ಸಮೀರ್ ಅವರು ಏರ್ಗನ್ ಹಿಡಿದು ವಿದ್ಯಾರ್ಥಿಗಳ ಗುಂಪೊಂದನ್ನು ಶಾಲೆಗೆ ಕರೆದೊಯ್ಯುತ್ತಿರುವ ದೃಶ್ಯದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.</p>.<p>‘ನಾವು ವಾಸಿಸುವ ಪ್ರದೇಶದಲ್ಲಿ ಬೀದಿ ನಾಯಿಗಳ ಉಪಟಳ ವಿಪರೀತವಾಗಿದೆ. ಈಚೆಗೆ ಮದರಸಾ ವಿದ್ಯಾರ್ಥಿಗೆ ನಾಯಿ ಕಚ್ಚಿತ್ತು. ಬಳಿಕ ಅವುಗಳ ಭೀತಿಯಿಂದ ನನ್ನ ಮಕ್ಕಳು ಸೇರಿದಂತೆ ಈ ಪ್ರದೇಶದ ಮಕ್ಕಳು ಶಾಲೆಗೆ ಹೋಗುವುದನ್ನೇ ನಿಲ್ಲಿಸಿದ್ದರು. ಈ ಕಾರಣಕ್ಕೆ ಅನಿವಾರ್ಯವಾಗಿ ಏರ್ಗನ್ನ ಮೊರೆ ಹೋಗಬೇಕಾಯಿತು. ಮಕ್ಕಳ ಮೇಲೆ ದಾಳಿ ಮಾಡಲು ಬಂದರೆ ನಾಯಿಗಳಿಗೆ ಶೂಟ್ ಮಾಡುತ್ತೇನೆ’ ಎಂದು ಸಮೀರ್ ತಿಳಿಸಿದ್ದಾರೆ.</p>.<p>‘ಏರ್ಗನ್ ಇಟ್ಟುಕೊಳ್ಳಲು ಪರವಾನಗಿ ಅಗತ್ಯವಿಲ್ಲ. ನಾನು ಯಾವುದೇ ನಾಯಿಯನ್ನು ಸಾಯಿಸಿಲ್ಲ, ಆದ್ದರಿಂದ ಕಾನೂನು ಕ್ರಮಕ್ಕೆ ಭಯಪಡುವುದಿಲ್ಲ. ಆತ್ಮರಕ್ಷಣೆಗಾಗಿ ಏರ್ಗನ್ ಇಟ್ಟುಕೊಂಡಿದ್ದೇನೆ’ ಎಂದೂ ಸಮೀರ್ ಹೇಳಿದ್ದಾರೆ.</p>.<p>ಸಮೀರ್ ಅವರು ಏರ್ಗನ್ ಹಿಡಿದು ವಿದ್ಯಾರ್ಥಿಗಳೊಂದಿಗೆ ತೆರಳುತ್ತಿರುವ ದೃಶ್ಯವನ್ನು ಅವರ ಮಗ ಚಿತ್ರೀಕರಿಸಿದ್ದು, ಬಳಿಕ ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಲಾಗಿತ್ತು.</p>.<p>ಈ ಕುರಿತು ಯಾವುದೇ ದೂರು ಲಭಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>