<p><strong>ನವದೆಹಲಿ</strong>: ‘ಪಾಕಿಸ್ತಾನವು ಭಯೋತ್ಪಾದಕರಿಗೆ ಆಶ್ರಯ ನೀಡಿ, ಭಾರತದ ವಿರುದ್ಧ ಕಾರ್ಯಾಚರಣೆ ನಡೆಸುವುದನ್ನು ಮುಂದುವರಿಸಿದರೆ, ಅದು ಭೂಗೋಳದ ಭಾಗವಾಗಿರಬೇಕೆ ಅಥವಾ ಇತಿಹಾಸದಲ್ಲಿ ಉಳಿಯಬೇಕೆ? ಬೇಡವೇ ಎಂಬುದನ್ನು ನಿರ್ಧರಿಸಲಿದ್ದೇವೆ’ ಎಂದು ಭಾರತೀಯ ಸೇನಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಕಠಿಣ ಎಚ್ಚರಿಕೆ ನೀಡಿದ್ದಾರೆ.</p>.<p>ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಮೊದಲನೇ ವರ್ಷಾಚರಣೆ ಕಾರ್ಯಕ್ರಮದ ಅಂಗವಾಗಿ ಇಲ್ಲಿನ ಮಾಣಿಕ್ಶಾ ಕೇಂದ್ರದಲ್ಲಿ ಶನಿವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಈ ಸಂದೇಶ ನೀಡಿದ್ದಾರೆ.</p>.<p>ಕಳೆದ ವರ್ಷ ನಡೆದ ‘ಆಪರೇಷನ್ ಸಿಂಧೂರ’ದಂತಹ ಸಂದರ್ಭಗಳು ಮತ್ತೆ ಎದುರಾದರೆ ಸೇನೆ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆಯ ಸಂದೇಶ ನೀಡಿದರು. ಅಂತಹ ಸಂದರ್ಭ ಮರುಕಳಿಸಿದರೆ ಪಾಕಿಸ್ತಾನವನ್ನು ನಿರ್ನಾಮ ಮಾಡಲಾಗುವುದು ಎಂಬರ್ಥದಲ್ಲಿ ಮಾತನಾಡಿದರು. </p>.<p>ದ್ವಿವೇದಿ ಹೇಳಿಕೆಯು ಚಿಕ್ಕದಾಗಿದ್ದರೂ, ಭಯೋತ್ಪಾದನೆಯ ವಿರುದ್ಧ ಭಾರತದ ನಿಲುವನ್ನು ಪಾಕಿಸ್ತಾನಕ್ಕೆ ಸ್ಪಷ್ಟವಾಗಿ ರವಾನಿಸಲಾಗಿದೆ ಎಂದು ವಿಶ್ಲೇಷಿಸಲಾಗಿದೆ.</p>.<p><strong>ಅಹಿಸ್ತಾ ಜಿಂದಗಿ ಕೆಫೆ ತೆರೆಯುವ ಬಯಕೆ</strong></p><p><strong>ನವದೆಹಲಿ</strong>: ಯುವಕರ ಜೊತೆ ಮುಕ್ತ ಸಂವಾದದಲ್ಲಿ ತೊಡಗಿಸಿಕೊಂಡ ಉಪೇಂದ್ರ ದ್ವಿವೇದಿ ಅವರು ನಾಯಕತ್ವದ ಪಾಠಗಳನ್ನು ಮಾಡುವ ಜೊತೆಗೆ ಒತ್ತಡದ ಜೀವನದಿಂದ ಹೊರಬರುವ ನಿಟ್ಟಿನಲ್ಲಿ ಇಂದ್ರಿಯಗಳಿಗೆ ವಿಶ್ರಾಂತಿ ನೀಡುವ ತಾಣವಾಗಿ ‘ಅಹಿಸ್ತಾ ಜಿಂದಗಿ’ ಹೆಸರಿನಲ್ಲಿ ಕೆಫೆ ತೆರೆಯುವ ಬಯಕೆ ವ್ಯಕ್ತಪಡಿಸಿದ್ದಾರೆ.</p><p>ತವರು ರಾಜ್ಯವಾದ ಮಧ್ಯಪ್ರದೇಶದಲ್ಲಿಯೇ ಕೆಫೆ ತೆರೆಯುವ ಯೋಚನೆ ಹೊಂದಿದ್ದು ಈ ತಾಣವನ್ನು ಅಸಂಖ್ಯಾತ ವಿಚಾರ ವಿನಿಮಯಗಳ ಜೊತೆಗೆ ವಿಚಾರ ಸಭೆಗಳ ಕೇಂದ್ರಬಿಂದುವಾಗಿ ಸ್ಥಾಪಿಸುವ ಗುರಿ ಹೊಂದಿರುವುದಾಗಿ ತಿಳಿಸಿದ್ದಾರೆ.</p><p>ಯುವಕರು ಸದೃಢವಾಗಿರುವ ಜೊತೆಗೆ ಕಠಿಣವಾಗಿ ಕೆಲಸ ಮಾಡಲು ಹಿಂಜರಿಯಬಾರದು. ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವ ಜೊತೆಗೆ ದೈಹಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.</p><p>ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ನೋಡುವುದನ್ನು ಬಿಟ್ಟು ಬದಲಾಗುತ್ತಿರುವ ಜಗತ್ತಿನಲ್ಲಿ ಕಾಲಮಾನಕ್ಕೆ ತಕ್ಕಂತೆ ತಂತ್ರಜ್ಞಾನಕ್ಕೆ ಹೊಂದಿಕೊಳ್ಳಬೇಕು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಪಾಕಿಸ್ತಾನವು ಭಯೋತ್ಪಾದಕರಿಗೆ ಆಶ್ರಯ ನೀಡಿ, ಭಾರತದ ವಿರುದ್ಧ ಕಾರ್ಯಾಚರಣೆ ನಡೆಸುವುದನ್ನು ಮುಂದುವರಿಸಿದರೆ, ಅದು ಭೂಗೋಳದ ಭಾಗವಾಗಿರಬೇಕೆ ಅಥವಾ ಇತಿಹಾಸದಲ್ಲಿ ಉಳಿಯಬೇಕೆ? ಬೇಡವೇ ಎಂಬುದನ್ನು ನಿರ್ಧರಿಸಲಿದ್ದೇವೆ’ ಎಂದು ಭಾರತೀಯ ಸೇನಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಕಠಿಣ ಎಚ್ಚರಿಕೆ ನೀಡಿದ್ದಾರೆ.</p>.<p>ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಮೊದಲನೇ ವರ್ಷಾಚರಣೆ ಕಾರ್ಯಕ್ರಮದ ಅಂಗವಾಗಿ ಇಲ್ಲಿನ ಮಾಣಿಕ್ಶಾ ಕೇಂದ್ರದಲ್ಲಿ ಶನಿವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಈ ಸಂದೇಶ ನೀಡಿದ್ದಾರೆ.</p>.<p>ಕಳೆದ ವರ್ಷ ನಡೆದ ‘ಆಪರೇಷನ್ ಸಿಂಧೂರ’ದಂತಹ ಸಂದರ್ಭಗಳು ಮತ್ತೆ ಎದುರಾದರೆ ಸೇನೆ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆಯ ಸಂದೇಶ ನೀಡಿದರು. ಅಂತಹ ಸಂದರ್ಭ ಮರುಕಳಿಸಿದರೆ ಪಾಕಿಸ್ತಾನವನ್ನು ನಿರ್ನಾಮ ಮಾಡಲಾಗುವುದು ಎಂಬರ್ಥದಲ್ಲಿ ಮಾತನಾಡಿದರು. </p>.<p>ದ್ವಿವೇದಿ ಹೇಳಿಕೆಯು ಚಿಕ್ಕದಾಗಿದ್ದರೂ, ಭಯೋತ್ಪಾದನೆಯ ವಿರುದ್ಧ ಭಾರತದ ನಿಲುವನ್ನು ಪಾಕಿಸ್ತಾನಕ್ಕೆ ಸ್ಪಷ್ಟವಾಗಿ ರವಾನಿಸಲಾಗಿದೆ ಎಂದು ವಿಶ್ಲೇಷಿಸಲಾಗಿದೆ.</p>.<p><strong>ಅಹಿಸ್ತಾ ಜಿಂದಗಿ ಕೆಫೆ ತೆರೆಯುವ ಬಯಕೆ</strong></p><p><strong>ನವದೆಹಲಿ</strong>: ಯುವಕರ ಜೊತೆ ಮುಕ್ತ ಸಂವಾದದಲ್ಲಿ ತೊಡಗಿಸಿಕೊಂಡ ಉಪೇಂದ್ರ ದ್ವಿವೇದಿ ಅವರು ನಾಯಕತ್ವದ ಪಾಠಗಳನ್ನು ಮಾಡುವ ಜೊತೆಗೆ ಒತ್ತಡದ ಜೀವನದಿಂದ ಹೊರಬರುವ ನಿಟ್ಟಿನಲ್ಲಿ ಇಂದ್ರಿಯಗಳಿಗೆ ವಿಶ್ರಾಂತಿ ನೀಡುವ ತಾಣವಾಗಿ ‘ಅಹಿಸ್ತಾ ಜಿಂದಗಿ’ ಹೆಸರಿನಲ್ಲಿ ಕೆಫೆ ತೆರೆಯುವ ಬಯಕೆ ವ್ಯಕ್ತಪಡಿಸಿದ್ದಾರೆ.</p><p>ತವರು ರಾಜ್ಯವಾದ ಮಧ್ಯಪ್ರದೇಶದಲ್ಲಿಯೇ ಕೆಫೆ ತೆರೆಯುವ ಯೋಚನೆ ಹೊಂದಿದ್ದು ಈ ತಾಣವನ್ನು ಅಸಂಖ್ಯಾತ ವಿಚಾರ ವಿನಿಮಯಗಳ ಜೊತೆಗೆ ವಿಚಾರ ಸಭೆಗಳ ಕೇಂದ್ರಬಿಂದುವಾಗಿ ಸ್ಥಾಪಿಸುವ ಗುರಿ ಹೊಂದಿರುವುದಾಗಿ ತಿಳಿಸಿದ್ದಾರೆ.</p><p>ಯುವಕರು ಸದೃಢವಾಗಿರುವ ಜೊತೆಗೆ ಕಠಿಣವಾಗಿ ಕೆಲಸ ಮಾಡಲು ಹಿಂಜರಿಯಬಾರದು. ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವ ಜೊತೆಗೆ ದೈಹಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.</p><p>ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ನೋಡುವುದನ್ನು ಬಿಟ್ಟು ಬದಲಾಗುತ್ತಿರುವ ಜಗತ್ತಿನಲ್ಲಿ ಕಾಲಮಾನಕ್ಕೆ ತಕ್ಕಂತೆ ತಂತ್ರಜ್ಞಾನಕ್ಕೆ ಹೊಂದಿಕೊಳ್ಳಬೇಕು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>