<p><strong>ನವದೆಹಲಿ</strong>: ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಭೂತಾನ್ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಬಟೂ ತ್ಶೇರಿಂಗ್ ಅವರನ್ನು ಮಂಗಳವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಭಾರತ ಹಾಗೂ ಭೂತಾನ್ ನಡುವಿನ ರಕ್ಷಣಾ ಸಂಬಂಧವನ್ನು ವೃದ್ಧಿಸುವಲ್ಲಿ ಈ ಮಾತುಕತೆ ಸಹಕಾರಿಯಾಗಲಿದೆ ಎಂದು ಭಾರತೀಯ ಸೇನೆ ತಿಳಿಸಿದೆ.</p>.<p>ಪ್ರಾದೇಶಿಕ ಭದ್ರತೆ ಕುರಿತಂತೆ ಗಡಿ ರಾಷ್ಟ್ರಗಳಲ್ಲಿ ಆದ್ಯತೆ ಹೆಚ್ಚಾಗಿದ್ದು, ಭಾರತ ಪಾಕಿಸ್ತಾನದ ನಡುವೆ ಸೇನಾ ಸಂಘರ್ಷ ಆಪರೇಷನ್ ಸಿಂಧೂರ ನಡೆದ ಬೆನ್ನಲ್ಲೇ ದ್ವಿವೇದಿ ಅವರು ಭೂತಾನ್ಗೆ 4 ದಿನಗಳ ಪ್ರವಾಸ ಕೈಗೊಂಡಿರುವುದು ಮಹತ್ವ ಪಡೆದಿದೆ. ಉಭಯ ಅಧಿಕಾರಿಗಳು ಪರಸ್ಪರ ರಕ್ಷಣಾ ಸಹಕಾರ ವೃದ್ಧಿಸುವುದು ಮಾತ್ರವಲ್ಲದೇ, ಡೋಕ್ಲಾಂ ಪ್ರದೇಶದಲ್ಲಿ ಚೀನಾದ ಚಟುವಟಿಕೆ ಕುರಿತಂತೆಯೂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. </p>.<p class="bodytext">ಸೇನಾ ಮುಖ್ಯಸ್ಥರೊಂದಿಗೆ ಮಾತ್ರವಲ್ಲದೇ, ಭೂತಾನ್ನ ಸೇನಾ ಸಾಮರ್ಥ್ಯ ಹೆಚ್ಚಿಸಲು ಸಹಕಾರಿಯಾಗಿರುವ ಭೂತಾನ್ನಲ್ಲಿರುವ ಭಾರತೀಯ ಸೇನಾ ತರಬೇತಿ ತಂಡದ (ಐಎಂಟಿಆರ್ಎಟಿ) ಹಿರಿಯ ಅಧಿಕಾರಿಗಳೊಂದಿಗೂ ದ್ವಿವೇದಿ ಮಾತುಕತೆ ನಡೆಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಭೂತಾನ್ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಬಟೂ ತ್ಶೇರಿಂಗ್ ಅವರನ್ನು ಮಂಗಳವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಭಾರತ ಹಾಗೂ ಭೂತಾನ್ ನಡುವಿನ ರಕ್ಷಣಾ ಸಂಬಂಧವನ್ನು ವೃದ್ಧಿಸುವಲ್ಲಿ ಈ ಮಾತುಕತೆ ಸಹಕಾರಿಯಾಗಲಿದೆ ಎಂದು ಭಾರತೀಯ ಸೇನೆ ತಿಳಿಸಿದೆ.</p>.<p>ಪ್ರಾದೇಶಿಕ ಭದ್ರತೆ ಕುರಿತಂತೆ ಗಡಿ ರಾಷ್ಟ್ರಗಳಲ್ಲಿ ಆದ್ಯತೆ ಹೆಚ್ಚಾಗಿದ್ದು, ಭಾರತ ಪಾಕಿಸ್ತಾನದ ನಡುವೆ ಸೇನಾ ಸಂಘರ್ಷ ಆಪರೇಷನ್ ಸಿಂಧೂರ ನಡೆದ ಬೆನ್ನಲ್ಲೇ ದ್ವಿವೇದಿ ಅವರು ಭೂತಾನ್ಗೆ 4 ದಿನಗಳ ಪ್ರವಾಸ ಕೈಗೊಂಡಿರುವುದು ಮಹತ್ವ ಪಡೆದಿದೆ. ಉಭಯ ಅಧಿಕಾರಿಗಳು ಪರಸ್ಪರ ರಕ್ಷಣಾ ಸಹಕಾರ ವೃದ್ಧಿಸುವುದು ಮಾತ್ರವಲ್ಲದೇ, ಡೋಕ್ಲಾಂ ಪ್ರದೇಶದಲ್ಲಿ ಚೀನಾದ ಚಟುವಟಿಕೆ ಕುರಿತಂತೆಯೂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. </p>.<p class="bodytext">ಸೇನಾ ಮುಖ್ಯಸ್ಥರೊಂದಿಗೆ ಮಾತ್ರವಲ್ಲದೇ, ಭೂತಾನ್ನ ಸೇನಾ ಸಾಮರ್ಥ್ಯ ಹೆಚ್ಚಿಸಲು ಸಹಕಾರಿಯಾಗಿರುವ ಭೂತಾನ್ನಲ್ಲಿರುವ ಭಾರತೀಯ ಸೇನಾ ತರಬೇತಿ ತಂಡದ (ಐಎಂಟಿಆರ್ಎಟಿ) ಹಿರಿಯ ಅಧಿಕಾರಿಗಳೊಂದಿಗೂ ದ್ವಿವೇದಿ ಮಾತುಕತೆ ನಡೆಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>