<p><strong>ನವದೆಹಲಿ:</strong> 'ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ಎಲ್ಲ ಮೂರು ಆಯಾಮಗಳಿಂದಲೂ ಸವಾಲುಗಳನ್ನು ಎದುರಿಸಲು ಸಿದ್ಧರಾಗಿದ್ದೆವು' ಎಂದು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ತಿಳಿಸಿದ್ದಾರೆ. </p><p>ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದ ಮೇಲೆ ಕಳೆದ ವರ್ಷದ ಮೇ 7ರ ಮುಂಜಾನೆ ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂರ ಹೆಸರಿನ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಕನಿಷ್ಠ 100 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿತ್ತು.</p>.ಭವಿಷ್ಯದ ಯುದ್ಧಗಳಿಗೆ ಭಾರತೀಯ ಸೇನೆ ಸನ್ನದ್ಧ: ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ.ಮಾಜಿ ಯೋಧರನ್ನು ತೊಡಗಿಸಿಕೊಳ್ಳಲಾಗುತ್ತಿದೆ: ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ.<p>ಎದುರಾಳಿಯಿಂದ ಎದುರಾಗುವ ಸವಾಲುಗಳನ್ನು ಎದುರಿಸಲು ಎಲ್ಲ ಮೂರು ಆಯಾಮಗಳಿಂದಲೂ ಸಿದ್ಧರಾಗಿದ್ದೆವು ಎಂದು 'ರೆಡ್ಲೈನ್ಸ್ ರಿಡ್ರಾನ್ - ಆಪರೇಷನ್ ಸಿಂಧೂರ ಅಂಡ್ ಇಂಡಿಯಾಸ್ ನ್ಯೂ ನಾರ್ಮಲ್' ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ಜನರಲ್ ದ್ವಿವೇದಿ ತಿಳಿಸಿದ್ದಾರೆ. </p><p>ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ಭಾರತ ದೃಢನಿಶ್ಚಯ ಮತ್ತು ಸಂಯಮ ಪ್ರದರ್ಶಿಸಿತ್ತು. ಎಲ್ಲ ಆಯಾಮಗಳಿಂದಲೂ ಎದುರಾದ ಒತ್ತಡವನ್ನು ನಿಭಾಯಿಸುವಲ್ಲಿ ಯಶಸ್ವಿಯಾಗಿತ್ತು. </p><p>'ಕಾರ್ಯಾಚರಣೆಯ ಸಂದರ್ಭದಲ್ಲಿ ಹಿನ್ನಡೆಗಳು ಎದುರಾಗಬಹುದು. ಆದರೆ ಎಲ್ಲ ಸವಾಲುಗಳನ್ನು ಎದುರಿಸಲಾಗಿತ್ತು. ನಾನು ಹೆಮ್ಮೆಯಿಂದಲೇ ಹೇಳಬಲ್ಲೆ, ಆಪರೇಷನ್ ಸಿಂಧೂರ ಅತ್ಯಂತ ಯಶಸ್ವಿ ಕಾರ್ಯಾಚರಣೆಯಾಗಿತ್ತು' ಎಂದು ಅವರು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 'ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ಎಲ್ಲ ಮೂರು ಆಯಾಮಗಳಿಂದಲೂ ಸವಾಲುಗಳನ್ನು ಎದುರಿಸಲು ಸಿದ್ಧರಾಗಿದ್ದೆವು' ಎಂದು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ತಿಳಿಸಿದ್ದಾರೆ. </p><p>ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದ ಮೇಲೆ ಕಳೆದ ವರ್ಷದ ಮೇ 7ರ ಮುಂಜಾನೆ ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂರ ಹೆಸರಿನ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಕನಿಷ್ಠ 100 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿತ್ತು.</p>.ಭವಿಷ್ಯದ ಯುದ್ಧಗಳಿಗೆ ಭಾರತೀಯ ಸೇನೆ ಸನ್ನದ್ಧ: ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ.ಮಾಜಿ ಯೋಧರನ್ನು ತೊಡಗಿಸಿಕೊಳ್ಳಲಾಗುತ್ತಿದೆ: ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ.<p>ಎದುರಾಳಿಯಿಂದ ಎದುರಾಗುವ ಸವಾಲುಗಳನ್ನು ಎದುರಿಸಲು ಎಲ್ಲ ಮೂರು ಆಯಾಮಗಳಿಂದಲೂ ಸಿದ್ಧರಾಗಿದ್ದೆವು ಎಂದು 'ರೆಡ್ಲೈನ್ಸ್ ರಿಡ್ರಾನ್ - ಆಪರೇಷನ್ ಸಿಂಧೂರ ಅಂಡ್ ಇಂಡಿಯಾಸ್ ನ್ಯೂ ನಾರ್ಮಲ್' ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ಜನರಲ್ ದ್ವಿವೇದಿ ತಿಳಿಸಿದ್ದಾರೆ. </p><p>ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ಭಾರತ ದೃಢನಿಶ್ಚಯ ಮತ್ತು ಸಂಯಮ ಪ್ರದರ್ಶಿಸಿತ್ತು. ಎಲ್ಲ ಆಯಾಮಗಳಿಂದಲೂ ಎದುರಾದ ಒತ್ತಡವನ್ನು ನಿಭಾಯಿಸುವಲ್ಲಿ ಯಶಸ್ವಿಯಾಗಿತ್ತು. </p><p>'ಕಾರ್ಯಾಚರಣೆಯ ಸಂದರ್ಭದಲ್ಲಿ ಹಿನ್ನಡೆಗಳು ಎದುರಾಗಬಹುದು. ಆದರೆ ಎಲ್ಲ ಸವಾಲುಗಳನ್ನು ಎದುರಿಸಲಾಗಿತ್ತು. ನಾನು ಹೆಮ್ಮೆಯಿಂದಲೇ ಹೇಳಬಲ್ಲೆ, ಆಪರೇಷನ್ ಸಿಂಧೂರ ಅತ್ಯಂತ ಯಶಸ್ವಿ ಕಾರ್ಯಾಚರಣೆಯಾಗಿತ್ತು' ಎಂದು ಅವರು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>