ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ನಾಯಕ ರಾಜೀವ್ ಶುಕ್ಲಾ ಅವರು ಆರು ಬಾರಿ ನಿರ್ದಿಷ್ಟ ದಾಳಿ ನಡೆಸಲಾಗಿತ್ತು ಎಂದು ಹೇಳಿಕೊಂಡಿದ್ದರು. ‘ಸುಳ್ಳು ಹೇಳುವ ಹವ್ಯಾಸ’ ಕಾಂಗ್ರೆಸ್ಗೆ ಇದೆ ಎಂದು ಬಿಜೆಪಿ ಟೀಕಿಸಿತ್ತು. ಸೇನೆಯ ಮಾಜಿ ಮುಖ್ಯಸ್ಥ ಹಾಗೂ ಕೇಂದ್ರ ಸಚಿವ ವಿ.ಕೆ.ಸಿಂಗ್ ಸಹ ಯುಪಿಎ ಅವಧಿಯಲ್ಲಿ ನಿರ್ದಿಷ್ಟ ದಾಳಿ ನಡೆದಿರಲಿಲ್ಲ ಎಂದರು.