<p><strong>ಶ್ರೀನಗರ:</strong> ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಸೇನೆಯ ಕಿರಿಯ ಅಧಿಕಾರಿ (ಜೆಸಿಒ) ಮತ್ತು ಮೂವರು ಭಯೋತ್ಪಾದಕರು ಹತರಾಗಿದ್ದಾರೆ.</p> <p>ಜಮ್ಮುವಿನ ಅಖ್ನೂರ್ ವಲಯದಲ್ಲಿ ನಡೆದ ಗುಂಡಿನ ಚಕಮಕಿ ಸಂದರ್ಭದಲ್ಲಿ, ಸೇನೆಯ ಅಧಿಕಾರಿ ಹುತಾತ್ಮರಾಗಿದ್ದಾರೆ. ಗಡಿ ನಿಯಂತ್ರಣ ರೇಖೆ ಬಳಿ ಭಾರಿ ಶಸ್ತ್ರಾಸ್ತ್ರ ಹೊಂದಿದ್ದ ಭಯೋತ್ಪಾದಕರ ತಂಡವನ್ನು ಸೇನಾ ಸಿಬ್ಬಂದಿ ಗಮನಿಸಿದರು. ಅವರ ಮೇಲೆ ಗುಂಡು ಹಾರಿಸಿದಾಗ, ಚಕಮಕಿ ಆರಂಭವಾಯಿತು.</p> <p>ಈ ಸಂದರ್ಭದಲ್ಲಿ ಗಂಭೀರವಾಗಿ ಗಾಯಗೊಂಡ ಅಧಿಕಾರಿ, ಹುತಾತ್ಮರಾಗಿದ್ದಾರೆ ಎಂದು ಮೂಲಗಳು ಹೇಳಿವೆ. ಭಯೋತ್ಪಾದಕರಿಗಾಗಿ ಸ್ಥಳದಲ್ಲಿ ಹುಡುಕಾಟ ನಡೆದಿದೆ.</p> <p>ಇನ್ನೊಂದು ಘಟನೆಯಲ್ಲಿ, ಪಾಕಿಸ್ತಾನ ಮೂಲದ ಜೈಷ್–ಎ–ಮೊಹಮ್ಮದ್ ಭಯೋತ್ಪಾದಕ ಸಂಘಟನೆಗೆ ಸೇರಿದ ಮೂವರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ. ಕಿಶ್ತ್ವಾರ್ ಜಿಲ್ಲೆಯಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಸಂದರ್ಭದಲ್ಲಿ ಇವರನ್ನು ಹತ್ಯೆ ಮಾಡಲಾಗಿದೆ. ಹತ್ಯೆಯಾದವರಲ್ಲಿ ಸಂಘಟನೆಯ ಮುಖ್ಯ ಕಮಾಂಡರ್ ಸೈಫುಲ್ಲಾ ಕೂಡ ಸೇರಿದ್ದಾನೆ.</p> <p>ಒಬ್ಬ ಭಯೋತ್ಪಾದಕನನ್ನು ಶುಕ್ರವಾರವೇ ಹತ್ಯೆ ಮಾಡಲಾಗಿತ್ತು. ಇನ್ನಿಬ್ಬರನ್ನು ಶನಿವಾರ ಬೆಳಿಗ್ಗೆ ಪ್ರತಿಕೂಲ ಹವಾಮಾನದ ನಡುವೆಯೂ ಹತ್ಯೆ ಮಾಡಲಾಗಿದೆ.</p> <p>ಉಧಂಪುರ ಜಿಲ್ಲೆಯ ಬಸಂತಗಢ ಮತ್ತು ರಾಮನಗರ ಪ್ರದೇಶದಲ್ಲಿ ಮೂವರು ಭಯೋತ್ಪಾದಕರಿಗಾಗಿ ಭದ್ರತಾ ಪಡೆಗಳು ಶೋಧ ಕಾರ್ಯ ಮುಂದುವರಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಸೇನೆಯ ಕಿರಿಯ ಅಧಿಕಾರಿ (ಜೆಸಿಒ) ಮತ್ತು ಮೂವರು ಭಯೋತ್ಪಾದಕರು ಹತರಾಗಿದ್ದಾರೆ.</p> <p>ಜಮ್ಮುವಿನ ಅಖ್ನೂರ್ ವಲಯದಲ್ಲಿ ನಡೆದ ಗುಂಡಿನ ಚಕಮಕಿ ಸಂದರ್ಭದಲ್ಲಿ, ಸೇನೆಯ ಅಧಿಕಾರಿ ಹುತಾತ್ಮರಾಗಿದ್ದಾರೆ. ಗಡಿ ನಿಯಂತ್ರಣ ರೇಖೆ ಬಳಿ ಭಾರಿ ಶಸ್ತ್ರಾಸ್ತ್ರ ಹೊಂದಿದ್ದ ಭಯೋತ್ಪಾದಕರ ತಂಡವನ್ನು ಸೇನಾ ಸಿಬ್ಬಂದಿ ಗಮನಿಸಿದರು. ಅವರ ಮೇಲೆ ಗುಂಡು ಹಾರಿಸಿದಾಗ, ಚಕಮಕಿ ಆರಂಭವಾಯಿತು.</p> <p>ಈ ಸಂದರ್ಭದಲ್ಲಿ ಗಂಭೀರವಾಗಿ ಗಾಯಗೊಂಡ ಅಧಿಕಾರಿ, ಹುತಾತ್ಮರಾಗಿದ್ದಾರೆ ಎಂದು ಮೂಲಗಳು ಹೇಳಿವೆ. ಭಯೋತ್ಪಾದಕರಿಗಾಗಿ ಸ್ಥಳದಲ್ಲಿ ಹುಡುಕಾಟ ನಡೆದಿದೆ.</p> <p>ಇನ್ನೊಂದು ಘಟನೆಯಲ್ಲಿ, ಪಾಕಿಸ್ತಾನ ಮೂಲದ ಜೈಷ್–ಎ–ಮೊಹಮ್ಮದ್ ಭಯೋತ್ಪಾದಕ ಸಂಘಟನೆಗೆ ಸೇರಿದ ಮೂವರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ. ಕಿಶ್ತ್ವಾರ್ ಜಿಲ್ಲೆಯಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಸಂದರ್ಭದಲ್ಲಿ ಇವರನ್ನು ಹತ್ಯೆ ಮಾಡಲಾಗಿದೆ. ಹತ್ಯೆಯಾದವರಲ್ಲಿ ಸಂಘಟನೆಯ ಮುಖ್ಯ ಕಮಾಂಡರ್ ಸೈಫುಲ್ಲಾ ಕೂಡ ಸೇರಿದ್ದಾನೆ.</p> <p>ಒಬ್ಬ ಭಯೋತ್ಪಾದಕನನ್ನು ಶುಕ್ರವಾರವೇ ಹತ್ಯೆ ಮಾಡಲಾಗಿತ್ತು. ಇನ್ನಿಬ್ಬರನ್ನು ಶನಿವಾರ ಬೆಳಿಗ್ಗೆ ಪ್ರತಿಕೂಲ ಹವಾಮಾನದ ನಡುವೆಯೂ ಹತ್ಯೆ ಮಾಡಲಾಗಿದೆ.</p> <p>ಉಧಂಪುರ ಜಿಲ್ಲೆಯ ಬಸಂತಗಢ ಮತ್ತು ರಾಮನಗರ ಪ್ರದೇಶದಲ್ಲಿ ಮೂವರು ಭಯೋತ್ಪಾದಕರಿಗಾಗಿ ಭದ್ರತಾ ಪಡೆಗಳು ಶೋಧ ಕಾರ್ಯ ಮುಂದುವರಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>