<p><strong>ರಜೌರಿ/ಜಮ್ಮು</strong> : ಜಮ್ಮ ಕಾಶ್ಮೀರದ ರಜೌರಿ ಜಿಲ್ಲೆಯ ಸೇನಾ ಶಿಬಿರದ ಬಳಿ ಶನಿವಾರ ಮಂಜಾನೆ ಸಂಶಯಾಸ್ಪದ ಚಟುವಟಿಕೆ ಕಂಡುಬಂದದ್ದರಿಂದ ಭದ್ರತಾ ಪಡೆಯು ಗುಂಡಿನ ದಾಳಿ ನಡೆಸಿ, ಶೋಧ ಕಾರ್ಯಾಚರಣೆಯನ್ನು ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ದರ್ಹಾಲ್ ಪ್ರದೇಶದ ಶ್ರೋತ ಮೊರ್ಹಾ ಗ್ರಾಮದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಯಾವುದೇ ಸಾವು–ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಕತ್ತಲೆಯ ಸಮಯದಲ್ಲಿ ಅಪರಿಚಿತ ವ್ಯಕ್ತಿಗಳ ಗುಂಪೊಂದು ಶಿಬಿರದ ಕಡೆಗೆ ಚಲಿಸುತ್ತಿರುವುದನ್ನು ಗಮನಿಸಿದ ಕಾವಲುಗಾರನು ಕೆಲವು ಸುತ್ತು ಗುಂಡು ಹಾರಿಸಿದ್ದಾನೆ ಎಂದು ಅವರು ಹೇಳಿದರು.</p>.<p>ಹತ್ತಿರದ ಹಳ್ಳಿಗೆ ಗುಂಪು ಸ್ಥಳಾಂತರಗೊಂಡಿದ್ದು, ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಇನ್ನೂ ಶೋಧ ಕಾರ್ಯ ಮುಂದುವರೆಯುತ್ತಿದ್ದು, ಇಲ್ಲಿವರೆಗೆ ಶಂಕಿತ ಗುಂಪಿನ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ರಜೌರಿ ಜಿಲ್ಲೆಯ ಶಾರದಾ ಷರೀಫ್ ಪ್ರದೇಶದಲ್ಲಿ ಭದ್ರತಾ ಪಡೆ ಶೋಧ ಕಾರ್ಯಾಚರಣೆ ನಡೆಸಿದ್ದು, ಯಾರನ್ನೂ ಬಂಧಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಜೌರಿ/ಜಮ್ಮು</strong> : ಜಮ್ಮ ಕಾಶ್ಮೀರದ ರಜೌರಿ ಜಿಲ್ಲೆಯ ಸೇನಾ ಶಿಬಿರದ ಬಳಿ ಶನಿವಾರ ಮಂಜಾನೆ ಸಂಶಯಾಸ್ಪದ ಚಟುವಟಿಕೆ ಕಂಡುಬಂದದ್ದರಿಂದ ಭದ್ರತಾ ಪಡೆಯು ಗುಂಡಿನ ದಾಳಿ ನಡೆಸಿ, ಶೋಧ ಕಾರ್ಯಾಚರಣೆಯನ್ನು ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ದರ್ಹಾಲ್ ಪ್ರದೇಶದ ಶ್ರೋತ ಮೊರ್ಹಾ ಗ್ರಾಮದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಯಾವುದೇ ಸಾವು–ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಕತ್ತಲೆಯ ಸಮಯದಲ್ಲಿ ಅಪರಿಚಿತ ವ್ಯಕ್ತಿಗಳ ಗುಂಪೊಂದು ಶಿಬಿರದ ಕಡೆಗೆ ಚಲಿಸುತ್ತಿರುವುದನ್ನು ಗಮನಿಸಿದ ಕಾವಲುಗಾರನು ಕೆಲವು ಸುತ್ತು ಗುಂಡು ಹಾರಿಸಿದ್ದಾನೆ ಎಂದು ಅವರು ಹೇಳಿದರು.</p>.<p>ಹತ್ತಿರದ ಹಳ್ಳಿಗೆ ಗುಂಪು ಸ್ಥಳಾಂತರಗೊಂಡಿದ್ದು, ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಇನ್ನೂ ಶೋಧ ಕಾರ್ಯ ಮುಂದುವರೆಯುತ್ತಿದ್ದು, ಇಲ್ಲಿವರೆಗೆ ಶಂಕಿತ ಗುಂಪಿನ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ರಜೌರಿ ಜಿಲ್ಲೆಯ ಶಾರದಾ ಷರೀಫ್ ಪ್ರದೇಶದಲ್ಲಿ ಭದ್ರತಾ ಪಡೆ ಶೋಧ ಕಾರ್ಯಾಚರಣೆ ನಡೆಸಿದ್ದು, ಯಾರನ್ನೂ ಬಂಧಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>