<p><strong>ನವದೆಹಲಿ</strong>: ಕದನ ವಿರಾಮದ ಮಧ್ಯೆಯೂ ಭಾರತೀಯ ಸೇನೆಯು ಯುದ್ಧ ಸನ್ನದ್ಧ ಸ್ಥಿತಿಯಲ್ಲಿದೆ. ಯಾವುದೇ ಸಂದರ್ಭ ಎದುರಾದರೂ ಅದನ್ನು ಎದುರಿಸಲು ಸೇನೆ ಸರ್ವ ಸನ್ನದ್ಧವಾಗಿವೆ ಎಂದು ಭಾರತ ಸೋಮವಾರ ಹೇಳಿದೆ.</p><p>ಭಾರತದ ವಿರುದ್ಧ ವಾಯು ದಾಳಿ ಮಾಡುವ ಪಾಕಿಸ್ತಾನದ ಯತ್ನವನ್ನು ನಮ್ಮ ರಕ್ಷಣಾ ವ್ಯವಸ್ಥೆ ಸಮರ್ಥವಾಗಿ ನಿಭಾಯಿಸಿದೆ. ಅದರಲ್ಲೂ ಸ್ವದೇಶಿ ನಿರ್ಮಿತ 'ಆಕಾಶ್'ನಂತಹ ರಕ್ಷಣಾ ವ್ಯವಸ್ಥೆಗಳು ಅದ್ಭುತ ಯಶಸ್ಸು ತಂದುಕೊಟ್ಟಿವೆ ಎಂದು ಏರ್ ಮಾರ್ಷಲ್ ಎ.ಕೆ. ಭಾರ್ತಿ ಹೇಳಿದರು.</p><p>ಭಾರತೀಯ ವಾಯುಪಡೆಯ ಇಂಟಿಗ್ರೇಟೆಡ್ ಏರ್ ಕಮಾಂಡ್ ಮತ್ತು ಕಂಟ್ರೋಲ್ ಸಿಸ್ಟಮ್, ಪಾಕಿಸ್ತಾನದ ಮಿಲಿಟರಿ ದಾಳಿಯನ್ನು ಸಮರ್ಥವಾಗಿ ಎದುರಿಸಿದೆ. </p><p>ನಮ್ಮ ಹೋರಾಟವು ಕೇವಲ ಉಗ್ರರ ಹಾಗೂ ಉಗ್ರರ ನೆಲೆಗಳನ್ನು ನಾಶಗೊಳಿಸುವ ಉದ್ದೇಶ ಹೊಂದಿತ್ತು. ಆದರೆ, ಪಾಕಿಸ್ತಾನಿ ಸೇನೆಯು ಉಗ್ರರಿಗೆ ಸಹಾಯ ಹಸ್ತ ಚಾಚಿದ್ದು, ಯುದ್ಧದ ಪರಿಸ್ಥಿತಿ ನಿರ್ಮಾಣವಾಗಲು ಕಾರಣವಾಯಿತು ಎಂದರು. </p><p>ಜಮ್ಮು ಮತ್ತು ಕಾಶ್ಮೀರ ಸೇರಿದಂತೆ, ಅಂತರರಾಷ್ಟ್ರೀಯ ಗಡಿಯಲ್ಲಿ ಯಾವುದೇ ಸಂಘರ್ಷದ ವರದಿ ದಾಖಲಾಗಿಲ್ಲ. ಇತ್ತೀಚಿನ ದಿನಗಳಲ್ಲಿ ಮೊದಲ ಬಾರಿಗೆ, ರಾತ್ರಿಯ ವೇಳೆ ಶಾಂತಿಯ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಇಂದು ಬೆಳಿಗ್ಗೆ ಭಾರತೀಯ ಸೇನೆ ತಿಳಿಸಿತ್ತು. </p><p>ಪಹಲ್ಗಾಮ್ ಉಗ್ರದಾಳಿಗೆ ಪ್ರತಿಕಾರವಾಗಿ, ಭಾರತೀಯ ಸೇನೆಯು 9 ಉಗ್ರ ನೆಲೆಗಳನ್ನು ಗುರಿಯಾಗಿಸಿಕೊಂಡು ಮೇ.7ರಂದು ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿತ್ತು. ಇದಾದ ನಂತರ, ಉಭಯ ದೇಶಗಳ ನಡುವೆ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿತ್ತು. ಶನಿವಾರವಷ್ಟೇ, ಎರಡು ದೇಶಗಳು ಕೂಡ ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕದನ ವಿರಾಮದ ಮಧ್ಯೆಯೂ ಭಾರತೀಯ ಸೇನೆಯು ಯುದ್ಧ ಸನ್ನದ್ಧ ಸ್ಥಿತಿಯಲ್ಲಿದೆ. ಯಾವುದೇ ಸಂದರ್ಭ ಎದುರಾದರೂ ಅದನ್ನು ಎದುರಿಸಲು ಸೇನೆ ಸರ್ವ ಸನ್ನದ್ಧವಾಗಿವೆ ಎಂದು ಭಾರತ ಸೋಮವಾರ ಹೇಳಿದೆ.</p><p>ಭಾರತದ ವಿರುದ್ಧ ವಾಯು ದಾಳಿ ಮಾಡುವ ಪಾಕಿಸ್ತಾನದ ಯತ್ನವನ್ನು ನಮ್ಮ ರಕ್ಷಣಾ ವ್ಯವಸ್ಥೆ ಸಮರ್ಥವಾಗಿ ನಿಭಾಯಿಸಿದೆ. ಅದರಲ್ಲೂ ಸ್ವದೇಶಿ ನಿರ್ಮಿತ 'ಆಕಾಶ್'ನಂತಹ ರಕ್ಷಣಾ ವ್ಯವಸ್ಥೆಗಳು ಅದ್ಭುತ ಯಶಸ್ಸು ತಂದುಕೊಟ್ಟಿವೆ ಎಂದು ಏರ್ ಮಾರ್ಷಲ್ ಎ.ಕೆ. ಭಾರ್ತಿ ಹೇಳಿದರು.</p><p>ಭಾರತೀಯ ವಾಯುಪಡೆಯ ಇಂಟಿಗ್ರೇಟೆಡ್ ಏರ್ ಕಮಾಂಡ್ ಮತ್ತು ಕಂಟ್ರೋಲ್ ಸಿಸ್ಟಮ್, ಪಾಕಿಸ್ತಾನದ ಮಿಲಿಟರಿ ದಾಳಿಯನ್ನು ಸಮರ್ಥವಾಗಿ ಎದುರಿಸಿದೆ. </p><p>ನಮ್ಮ ಹೋರಾಟವು ಕೇವಲ ಉಗ್ರರ ಹಾಗೂ ಉಗ್ರರ ನೆಲೆಗಳನ್ನು ನಾಶಗೊಳಿಸುವ ಉದ್ದೇಶ ಹೊಂದಿತ್ತು. ಆದರೆ, ಪಾಕಿಸ್ತಾನಿ ಸೇನೆಯು ಉಗ್ರರಿಗೆ ಸಹಾಯ ಹಸ್ತ ಚಾಚಿದ್ದು, ಯುದ್ಧದ ಪರಿಸ್ಥಿತಿ ನಿರ್ಮಾಣವಾಗಲು ಕಾರಣವಾಯಿತು ಎಂದರು. </p><p>ಜಮ್ಮು ಮತ್ತು ಕಾಶ್ಮೀರ ಸೇರಿದಂತೆ, ಅಂತರರಾಷ್ಟ್ರೀಯ ಗಡಿಯಲ್ಲಿ ಯಾವುದೇ ಸಂಘರ್ಷದ ವರದಿ ದಾಖಲಾಗಿಲ್ಲ. ಇತ್ತೀಚಿನ ದಿನಗಳಲ್ಲಿ ಮೊದಲ ಬಾರಿಗೆ, ರಾತ್ರಿಯ ವೇಳೆ ಶಾಂತಿಯ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಇಂದು ಬೆಳಿಗ್ಗೆ ಭಾರತೀಯ ಸೇನೆ ತಿಳಿಸಿತ್ತು. </p><p>ಪಹಲ್ಗಾಮ್ ಉಗ್ರದಾಳಿಗೆ ಪ್ರತಿಕಾರವಾಗಿ, ಭಾರತೀಯ ಸೇನೆಯು 9 ಉಗ್ರ ನೆಲೆಗಳನ್ನು ಗುರಿಯಾಗಿಸಿಕೊಂಡು ಮೇ.7ರಂದು ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿತ್ತು. ಇದಾದ ನಂತರ, ಉಭಯ ದೇಶಗಳ ನಡುವೆ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿತ್ತು. ಶನಿವಾರವಷ್ಟೇ, ಎರಡು ದೇಶಗಳು ಕೂಡ ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>