<p><strong>ನವದೆಹಲಿ:</strong> ಪೂರ್ವ ಲಡಾಖ್ ವಲಯದಲ್ಲಿ ಚೀನಾದೊಂದಿಗೆ ಹಂಚಿಕೆಯಾಗಿರುವ ವಾಸ್ತವಿಕ ನಿಯಂತ್ರಣ ರೇಖೆ (ಎಲ್ಎಸಿ) ಸಮೀಪದಲ್ಲಿರುವ ಪಾಂಗಾಂಗ್ ಸರೋವರದ ದಡದಲ್ಲಿ ಛತ್ರಪತಿ ಶಿವಾಜಿ ಪ್ರತಿಮೆಯನ್ನು ಭಾರತೀಯ ಸೇನೆ ಅನಾವರಣಗೊಳಿಸಿದೆ.</p><p>'ಫೈರ್ ಅಂಡ್ ಫ್ಯೂರಿ ಕಾರ್ಪ್ಸ್' ಎಂದೇ ಹೆಸರುವಾಸಿಯಾದ ಲೇಹ್ ನೆಲೆಯ '14 ಕಾರ್ಪ್ಸ್' ಈ ಮಾಹಿತಿಯನ್ನು ಎಕ್ಸ್/ಟ್ವಿಟರ್ನಲ್ಲಿ ಹಂಚಿಕೊಂಡಿದೆ.</p><p>ಪ್ರತಿಮೆಯನ್ನು ಸಮುದ್ರ ಮಟ್ಟದಿಂದ 14,300 ಅಡಿ ಎತ್ತರದಲ್ಲಿ ಸ್ಥಾಪಿಸಲಾಗಿದೆ. ಶೌರ್ಯ, ದೂರದೃಷ್ಟಿ ಹಾಗೂ ಅಚಲ ನ್ಯಾಯದ ಸಂಕೇತವಾಗಿರುವ ಶಿವಾಜಿಯ ಮೂರ್ತಿಯನ್ನು ಲೆಫ್ಟಿನೆಂಟ್ ಜನರಲ್ ಹಿತೇಶ್ ಭಲ್ಲಾ ಅವರು ಗುರುವಾರ ಅನಾವರಣಗೊಳಿಸಿದ್ದಾರೆ ಎಂದು ತಿಳಿಸಿದೆ.</p><p>ತಲೆಮಾರುಗಳಿಗೆ ಸ್ಫೂರ್ತಿಯ ಸೆಲೆಯಾಗಿ ಉಳಿದಿರುವ ಭಾರತೀಯ ಆಡಳಿತಗಾರನ ಅಚಲ ಸ್ಥೈರ್ಯವನ್ನು ಈ ಕಾರ್ಯಕ್ರಮವು ಆಚರಿಸುತ್ತದೆ ಎಂದೂ ಹೇಳಿದೆ.</p>.ಪೂರ್ವ ಲಡಾಖ್ನಲ್ಲಿ ಸೇನೆ ಹಿಂಪಡೆಯುವಿಕೆ ಪ್ರಕ್ರಿಯೆ ಪೂರ್ಣ: ರಾಜನಾಥ್ ಸಿಂಗ್.<p>ಪೂರ್ವ ಲಡಾಖ್ನ ಡೆಪ್ಸಾಂಗ್ ಮತ್ತು ಡೆಮ್ಚೋಕ್ ಪ್ರದೇಶಗಳಲ್ಲಿ ನಿಯೋಜಿಸಿದ್ದ ಸೇನಾ ಪಡೆಗಳನ್ನು ಭಾರತ ಮತ್ತು ಚೀನಾ ಇದೇ ವರ್ಷ ಅಕ್ಟೋಬರ್ನಲ್ಲಿ ವಾಪಸ್ ಕರೆಸಿಕೊಂಡಿದ್ದವು. ಈ ಪ್ರಕ್ರಿಯೆ ಪೂರ್ಣಗೊಂಡ ಕೆಲವೇ ವಾರಗಳಲ್ಲಿ ಶಿವಾಜಿ ಪ್ರತಿಮೆ ಅನಾವರಣಗೊಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪೂರ್ವ ಲಡಾಖ್ ವಲಯದಲ್ಲಿ ಚೀನಾದೊಂದಿಗೆ ಹಂಚಿಕೆಯಾಗಿರುವ ವಾಸ್ತವಿಕ ನಿಯಂತ್ರಣ ರೇಖೆ (ಎಲ್ಎಸಿ) ಸಮೀಪದಲ್ಲಿರುವ ಪಾಂಗಾಂಗ್ ಸರೋವರದ ದಡದಲ್ಲಿ ಛತ್ರಪತಿ ಶಿವಾಜಿ ಪ್ರತಿಮೆಯನ್ನು ಭಾರತೀಯ ಸೇನೆ ಅನಾವರಣಗೊಳಿಸಿದೆ.</p><p>'ಫೈರ್ ಅಂಡ್ ಫ್ಯೂರಿ ಕಾರ್ಪ್ಸ್' ಎಂದೇ ಹೆಸರುವಾಸಿಯಾದ ಲೇಹ್ ನೆಲೆಯ '14 ಕಾರ್ಪ್ಸ್' ಈ ಮಾಹಿತಿಯನ್ನು ಎಕ್ಸ್/ಟ್ವಿಟರ್ನಲ್ಲಿ ಹಂಚಿಕೊಂಡಿದೆ.</p><p>ಪ್ರತಿಮೆಯನ್ನು ಸಮುದ್ರ ಮಟ್ಟದಿಂದ 14,300 ಅಡಿ ಎತ್ತರದಲ್ಲಿ ಸ್ಥಾಪಿಸಲಾಗಿದೆ. ಶೌರ್ಯ, ದೂರದೃಷ್ಟಿ ಹಾಗೂ ಅಚಲ ನ್ಯಾಯದ ಸಂಕೇತವಾಗಿರುವ ಶಿವಾಜಿಯ ಮೂರ್ತಿಯನ್ನು ಲೆಫ್ಟಿನೆಂಟ್ ಜನರಲ್ ಹಿತೇಶ್ ಭಲ್ಲಾ ಅವರು ಗುರುವಾರ ಅನಾವರಣಗೊಳಿಸಿದ್ದಾರೆ ಎಂದು ತಿಳಿಸಿದೆ.</p><p>ತಲೆಮಾರುಗಳಿಗೆ ಸ್ಫೂರ್ತಿಯ ಸೆಲೆಯಾಗಿ ಉಳಿದಿರುವ ಭಾರತೀಯ ಆಡಳಿತಗಾರನ ಅಚಲ ಸ್ಥೈರ್ಯವನ್ನು ಈ ಕಾರ್ಯಕ್ರಮವು ಆಚರಿಸುತ್ತದೆ ಎಂದೂ ಹೇಳಿದೆ.</p>.ಪೂರ್ವ ಲಡಾಖ್ನಲ್ಲಿ ಸೇನೆ ಹಿಂಪಡೆಯುವಿಕೆ ಪ್ರಕ್ರಿಯೆ ಪೂರ್ಣ: ರಾಜನಾಥ್ ಸಿಂಗ್.<p>ಪೂರ್ವ ಲಡಾಖ್ನ ಡೆಪ್ಸಾಂಗ್ ಮತ್ತು ಡೆಮ್ಚೋಕ್ ಪ್ರದೇಶಗಳಲ್ಲಿ ನಿಯೋಜಿಸಿದ್ದ ಸೇನಾ ಪಡೆಗಳನ್ನು ಭಾರತ ಮತ್ತು ಚೀನಾ ಇದೇ ವರ್ಷ ಅಕ್ಟೋಬರ್ನಲ್ಲಿ ವಾಪಸ್ ಕರೆಸಿಕೊಂಡಿದ್ದವು. ಈ ಪ್ರಕ್ರಿಯೆ ಪೂರ್ಣಗೊಂಡ ಕೆಲವೇ ವಾರಗಳಲ್ಲಿ ಶಿವಾಜಿ ಪ್ರತಿಮೆ ಅನಾವರಣಗೊಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>