<p><strong>ಭಡೆರ್ವಾಹ್/ಜಮ್ಮು</strong>: ಸೇನಾ ವಾಹನವು ರಸ್ತೆಯಿಂದ ಜಾರಿ ಕಣಿವೆಗೆ ಉರುಳಿದ ಪರಿಣಾಮ 10 ಮಂದಿ ಯೋಧರು ಮೃತಪಟ್ಟಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಭಡೆರ್ವಾಹ್–ಚಂಬಾ ನಡುವಿನ ಅಂತರರಾಜ್ಯ ರಸ್ತೆಯ 9000 ಅಡಿ ಎತ್ತರದ ಖನ್ನಿ ಟಾಪ್ ಬಳಿ ಈ ಅವಘಡ ಸಂಭವಿಸಿದೆ.</p><p>ಬುಲೆಟ್ ಪ್ರೂಫ್ ಸೇನಾ ವಾಹನದಲ್ಲಿ 17 ಮಂದಿ ಪ್ರಯಾಣಿಸುತ್ತಿದ್ದರು. ಎತ್ತರಕ್ಕೆ ಹೋದಂತೆ ಚಾಲಕನ ನಿಯಂತ್ರಣ ಕಳೆದುಕೊಂಡ ವಾಹನವು ರಸ್ತೆಯಿಂದ ಜಾರಿ 200 ಅಡಿಯ ಪ್ರಪಾತಕ್ಕೆ ಬಿದ್ದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p><p>ಸೇನೆ ಮತ್ತು ಪೊಲೀಸರು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, 4 ಮಂದಿ ಸೇನಾಧಿಕಾರಿಗಳು ಸ್ಥಳದಲ್ಲೇ ಮೃತಪಟ್ಟರೆ. ತೀವ್ರವಾಗಿ ಗಾಯಗೊಂಡಿದ್ದ 6 ಮಂದಿ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.</p><p>ಗಾಯಾಳುಗಳನ್ನು ಉಧಮಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.</p><p>‘ದುರಾದೃಷ್ಟಕರ ಸೇನಾ ವಾಹನದ ಅಪಘಾತದಲ್ಲಿ ನಾವು 10 ಮಂದಿ ಯೋಧರನ್ನು ಕಳೆದುಕೊಂಡಿದ್ದೇವೆ. ಇನ್ನೂ 11 ಮಂದಿ ಗಾಯಗೊಂಡಿದ್ದಾರೆ’ ಎಂದು ಭಡೆರ್ವಾಲ್ನ ಹೆಚ್ಚುವರಿ ಜಿಲ್ಲಾಧಿಕಾರಿ ಸುಮಿತ್ ಕುಮಾರ್ ಭೂತ್ಯಾಳ್ ಹೇಳಿದ್ದಾರೆ.</p><p>ಅಪಘಾತ ಕುರಿತಂತೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಮುಖ್ಯಮತ್ರಿ ಒಮರ್ ಅಬ್ದುಲ್ಲಾ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ, ಗಾಯಾಳುಗಳ ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ.</p><p>ಈ ಕುರಿತಂತೆ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮನೋಜ್ ಸಿನ್ಹಾ, ನಮ್ಮ ಭಾರತದ ಧೈರ್ಯಶಾಲಿ 10 ಯೋಧರನ್ನು ಕಳೆದುಕೊಂಡು ಬಹಳ ನೋವಾಗಿದೆ. ನಮ್ಮ ಯೋಧರ ಸೇವೆ ಮತ್ತು ತ್ಯಾಗವನ್ನು ನಾವು ಸದಾ ಸ್ಮರಿಸುತ್ತೇವೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಡೆರ್ವಾಹ್/ಜಮ್ಮು</strong>: ಸೇನಾ ವಾಹನವು ರಸ್ತೆಯಿಂದ ಜಾರಿ ಕಣಿವೆಗೆ ಉರುಳಿದ ಪರಿಣಾಮ 10 ಮಂದಿ ಯೋಧರು ಮೃತಪಟ್ಟಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಭಡೆರ್ವಾಹ್–ಚಂಬಾ ನಡುವಿನ ಅಂತರರಾಜ್ಯ ರಸ್ತೆಯ 9000 ಅಡಿ ಎತ್ತರದ ಖನ್ನಿ ಟಾಪ್ ಬಳಿ ಈ ಅವಘಡ ಸಂಭವಿಸಿದೆ.</p><p>ಬುಲೆಟ್ ಪ್ರೂಫ್ ಸೇನಾ ವಾಹನದಲ್ಲಿ 17 ಮಂದಿ ಪ್ರಯಾಣಿಸುತ್ತಿದ್ದರು. ಎತ್ತರಕ್ಕೆ ಹೋದಂತೆ ಚಾಲಕನ ನಿಯಂತ್ರಣ ಕಳೆದುಕೊಂಡ ವಾಹನವು ರಸ್ತೆಯಿಂದ ಜಾರಿ 200 ಅಡಿಯ ಪ್ರಪಾತಕ್ಕೆ ಬಿದ್ದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p><p>ಸೇನೆ ಮತ್ತು ಪೊಲೀಸರು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, 4 ಮಂದಿ ಸೇನಾಧಿಕಾರಿಗಳು ಸ್ಥಳದಲ್ಲೇ ಮೃತಪಟ್ಟರೆ. ತೀವ್ರವಾಗಿ ಗಾಯಗೊಂಡಿದ್ದ 6 ಮಂದಿ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.</p><p>ಗಾಯಾಳುಗಳನ್ನು ಉಧಮಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.</p><p>‘ದುರಾದೃಷ್ಟಕರ ಸೇನಾ ವಾಹನದ ಅಪಘಾತದಲ್ಲಿ ನಾವು 10 ಮಂದಿ ಯೋಧರನ್ನು ಕಳೆದುಕೊಂಡಿದ್ದೇವೆ. ಇನ್ನೂ 11 ಮಂದಿ ಗಾಯಗೊಂಡಿದ್ದಾರೆ’ ಎಂದು ಭಡೆರ್ವಾಲ್ನ ಹೆಚ್ಚುವರಿ ಜಿಲ್ಲಾಧಿಕಾರಿ ಸುಮಿತ್ ಕುಮಾರ್ ಭೂತ್ಯಾಳ್ ಹೇಳಿದ್ದಾರೆ.</p><p>ಅಪಘಾತ ಕುರಿತಂತೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಮುಖ್ಯಮತ್ರಿ ಒಮರ್ ಅಬ್ದುಲ್ಲಾ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ, ಗಾಯಾಳುಗಳ ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ.</p><p>ಈ ಕುರಿತಂತೆ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮನೋಜ್ ಸಿನ್ಹಾ, ನಮ್ಮ ಭಾರತದ ಧೈರ್ಯಶಾಲಿ 10 ಯೋಧರನ್ನು ಕಳೆದುಕೊಂಡು ಬಹಳ ನೋವಾಗಿದೆ. ನಮ್ಮ ಯೋಧರ ಸೇವೆ ಮತ್ತು ತ್ಯಾಗವನ್ನು ನಾವು ಸದಾ ಸ್ಮರಿಸುತ್ತೇವೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>