<p class="title"><strong>ಮುಂಬೈ:</strong> 2018ರಲ್ಲಿ ಅನ್ವಯ್ನಾಯಕ್ಆತ್ಮಹತ್ಯೆಪ್ರಕರಣಕ್ಕೆಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಮಧ್ಯಂತರ ಜಾಮೀನು ಕೋರಿ ಬಾಂಬೆ ಹೈಕೋರ್ಟ್ನಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ (ಇಂದು) ಶುಕ್ರವಾರ ನಡೆಯಲಿದೆ.</p>.<p class="title">‘ನನ್ನನ್ನು ಅಕ್ರಮವಾಗಿ ಬಂಧಿಸಲಾಗಿದೆ’ ಎಂದು ಆರೋಪಿಸಿರುವ ಅರ್ನಬ್, ಎಫ್ಐಆರ್ ರದ್ದು ಪಡಿಸುವ ಜೊತೆಗೆ ತನಿಖೆಗೆ ತಡೆ ನೀಡಬೇಕು. ತಮ್ಮನ್ನು ಬಿಡುಗಡೆ ಮಾಡಲು ಪೊಲೀಸರಿಗೆ ನಿರ್ದೇಶಿಸಬೇಕು ಎಂದು ಹೈಕೋರ್ಟ್ಗೆ ಮನವಿ ಮಾಡಿದ್ದಾರೆ.</p>.<p>ರಾಜ್ಯ ಸರ್ಕಾರ ಮತ್ತು ಇತರೆ ಪ್ರತಿವಾದಿಗಳ ವಾದ ಕೇಳದೆಯೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ಎಸ್.ಎಸ್.ಶಿಂಧೆ ಮತ್ತು ಎಂ.ಎಸ್.ಕರ್ಣಿಕ್ ಅವರನ್ನು ಒಳಗೊಂಡ ನ್ಯಾಯಪೀಠವು ಗುರುವಾರ ಹೇಳಿದೆ.</p>.<p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಲಿಬಾಗ್ ನ್ಯಾಯಾಲಯದಲ್ಲೂ ಮಧ್ಯಂತರ ಜಾಮೀನು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹಿಂಪಡೆಯಲಾಗಿದೆ ಎಂದು ಅರ್ನಬ್ ಪರ ವಕೀಲ ಆಬಾದ್ ಪೊಂಡಾ ತಿಳಿಸಿದ್ದಾರೆ.</p>.<p>‘ಬಂಧನ: ಮೇಲ್ನೋಟಕ್ಕೆ ಕಾನೂನು ಬಾಹಿರ’</p>.<p>‘ಅರ್ನಬ್ ಗೋಸ್ವಾಮಿ ಅವರ ಬಂಧನ ಮೇಲ್ನೋಟಕ್ಕೆ ಕಾನೂನು ಬಾಹಿರದ್ದಂತೆ ತೋರುತ್ತಿದೆ’ ಎಂದು ಅಲಿಬಾಗ್ ನ್ಯಾಯಾಲಯ ಅಭಿಪ್ರಾಯಪಟ್ಟಿದ್ದು, ಅರ್ನಬ್ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲು ನಿರಾಕರಿಸಿದೆ.</p>.<p>ಮೃತರು ಮತ್ತು ಆರೋಪಿಗಳ ನಡುವಿನ ಸಂಬಂಧವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಸುನೈನಾ ಪಿಂಗಲ್ ತಿಳಿಸಿದ್ದಾರೆ.</p>.<p>ಮುಂಬೈನಲ್ಲಿರುವ ಅರ್ನಬ್ ಅವರ ನಿವಾಸದಲ್ಲಿ ಕಳೆದ ಬುಧವಾರ ಅವರನ್ನು ವಶಕ್ಕೆ ಪಡೆಯಲಾಗಿತ್ತು. ಅಲಿಬಾಗ್ ನ್ಯಾಯಾಲಯವು ಗೋಸ್ವಾಮಿ ಅವರನ್ನು ನವೆಂಬರ್ 18ರವರೆಗೆ ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ.</p>.<p><strong>ಕೋವಿಡ್ ಕೇಂದ್ರದಲ್ಲಿ ಅರ್ನಬ್</strong></p>.<p>ಅರ್ನಬ್ ಗೋಸ್ವಾಮಿ ಅವರು ಬುಧವಾರ ರಾತ್ರಿ ಅಲೀಭಾಗ್ ಜೈಲಿನ ಕೋವಿಡ್–19 ಕೇಂದ್ರವಾದ ಸ್ಥಳೀಯ ಶಾಲೆಯಲ್ಲಿ ರಾತ್ರಿ ಕಳೆದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಬುಧವಾರ ರಾತ್ರಿ ಗೋಸ್ವಾಮಿ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆರೋಗ್ಯ ತಪಾಸಣೆ ಬಳಿಕ ಅಲಿಭಾಗ್ ಜೈಲಿನ ಕೋವಿಡ್ –19 ಕೇಂದ್ರವಾದ ಅಲಿಬಾಗ್ ನಗರ ಪರಿಷತ್ ಶಾಲೆಗೆ ಕರೆದೊಯ್ಯಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಈ ಪ್ರಕರಣದ ಮತ್ತಿಬ್ಬರು ಆರೋಪಿಗಳಾದ ಫಿರೋಜ್ ಮಹಮ್ಮದ್ ಶೇಖ್ ಹಾಗೂ ನಿತೀಶ್ ಸರ್ದಾ ಅವರನ್ನೂ ನವೆಂಬರ್ 18ರವರೆಗೆ ಕೋರ್ಟ್ ನ್ಯಾಯಾಂಗ ವಶಕ್ಕೆ ನೀಡಿದೆ.</p>.<p><strong>ಕ್ರಮಕ್ಕೆ ಆಗ್ರಹ: </strong>ಮಹಾರಾಷ್ಟ್ರ ಬಿಜೆಪಿ ಶಾಸಕ ರಾಮ್ ಕದಮ್ ಅವರು ಗುರುವಾರ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರನ್ನು ಭೇಟಿಯಾಗಿ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮುಂಬೈ:</strong> 2018ರಲ್ಲಿ ಅನ್ವಯ್ನಾಯಕ್ಆತ್ಮಹತ್ಯೆಪ್ರಕರಣಕ್ಕೆಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಮಧ್ಯಂತರ ಜಾಮೀನು ಕೋರಿ ಬಾಂಬೆ ಹೈಕೋರ್ಟ್ನಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ (ಇಂದು) ಶುಕ್ರವಾರ ನಡೆಯಲಿದೆ.</p>.<p class="title">‘ನನ್ನನ್ನು ಅಕ್ರಮವಾಗಿ ಬಂಧಿಸಲಾಗಿದೆ’ ಎಂದು ಆರೋಪಿಸಿರುವ ಅರ್ನಬ್, ಎಫ್ಐಆರ್ ರದ್ದು ಪಡಿಸುವ ಜೊತೆಗೆ ತನಿಖೆಗೆ ತಡೆ ನೀಡಬೇಕು. ತಮ್ಮನ್ನು ಬಿಡುಗಡೆ ಮಾಡಲು ಪೊಲೀಸರಿಗೆ ನಿರ್ದೇಶಿಸಬೇಕು ಎಂದು ಹೈಕೋರ್ಟ್ಗೆ ಮನವಿ ಮಾಡಿದ್ದಾರೆ.</p>.<p>ರಾಜ್ಯ ಸರ್ಕಾರ ಮತ್ತು ಇತರೆ ಪ್ರತಿವಾದಿಗಳ ವಾದ ಕೇಳದೆಯೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ಎಸ್.ಎಸ್.ಶಿಂಧೆ ಮತ್ತು ಎಂ.ಎಸ್.ಕರ್ಣಿಕ್ ಅವರನ್ನು ಒಳಗೊಂಡ ನ್ಯಾಯಪೀಠವು ಗುರುವಾರ ಹೇಳಿದೆ.</p>.<p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಲಿಬಾಗ್ ನ್ಯಾಯಾಲಯದಲ್ಲೂ ಮಧ್ಯಂತರ ಜಾಮೀನು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹಿಂಪಡೆಯಲಾಗಿದೆ ಎಂದು ಅರ್ನಬ್ ಪರ ವಕೀಲ ಆಬಾದ್ ಪೊಂಡಾ ತಿಳಿಸಿದ್ದಾರೆ.</p>.<p>‘ಬಂಧನ: ಮೇಲ್ನೋಟಕ್ಕೆ ಕಾನೂನು ಬಾಹಿರ’</p>.<p>‘ಅರ್ನಬ್ ಗೋಸ್ವಾಮಿ ಅವರ ಬಂಧನ ಮೇಲ್ನೋಟಕ್ಕೆ ಕಾನೂನು ಬಾಹಿರದ್ದಂತೆ ತೋರುತ್ತಿದೆ’ ಎಂದು ಅಲಿಬಾಗ್ ನ್ಯಾಯಾಲಯ ಅಭಿಪ್ರಾಯಪಟ್ಟಿದ್ದು, ಅರ್ನಬ್ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲು ನಿರಾಕರಿಸಿದೆ.</p>.<p>ಮೃತರು ಮತ್ತು ಆರೋಪಿಗಳ ನಡುವಿನ ಸಂಬಂಧವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಸುನೈನಾ ಪಿಂಗಲ್ ತಿಳಿಸಿದ್ದಾರೆ.</p>.<p>ಮುಂಬೈನಲ್ಲಿರುವ ಅರ್ನಬ್ ಅವರ ನಿವಾಸದಲ್ಲಿ ಕಳೆದ ಬುಧವಾರ ಅವರನ್ನು ವಶಕ್ಕೆ ಪಡೆಯಲಾಗಿತ್ತು. ಅಲಿಬಾಗ್ ನ್ಯಾಯಾಲಯವು ಗೋಸ್ವಾಮಿ ಅವರನ್ನು ನವೆಂಬರ್ 18ರವರೆಗೆ ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ.</p>.<p><strong>ಕೋವಿಡ್ ಕೇಂದ್ರದಲ್ಲಿ ಅರ್ನಬ್</strong></p>.<p>ಅರ್ನಬ್ ಗೋಸ್ವಾಮಿ ಅವರು ಬುಧವಾರ ರಾತ್ರಿ ಅಲೀಭಾಗ್ ಜೈಲಿನ ಕೋವಿಡ್–19 ಕೇಂದ್ರವಾದ ಸ್ಥಳೀಯ ಶಾಲೆಯಲ್ಲಿ ರಾತ್ರಿ ಕಳೆದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಬುಧವಾರ ರಾತ್ರಿ ಗೋಸ್ವಾಮಿ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆರೋಗ್ಯ ತಪಾಸಣೆ ಬಳಿಕ ಅಲಿಭಾಗ್ ಜೈಲಿನ ಕೋವಿಡ್ –19 ಕೇಂದ್ರವಾದ ಅಲಿಬಾಗ್ ನಗರ ಪರಿಷತ್ ಶಾಲೆಗೆ ಕರೆದೊಯ್ಯಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಈ ಪ್ರಕರಣದ ಮತ್ತಿಬ್ಬರು ಆರೋಪಿಗಳಾದ ಫಿರೋಜ್ ಮಹಮ್ಮದ್ ಶೇಖ್ ಹಾಗೂ ನಿತೀಶ್ ಸರ್ದಾ ಅವರನ್ನೂ ನವೆಂಬರ್ 18ರವರೆಗೆ ಕೋರ್ಟ್ ನ್ಯಾಯಾಂಗ ವಶಕ್ಕೆ ನೀಡಿದೆ.</p>.<p><strong>ಕ್ರಮಕ್ಕೆ ಆಗ್ರಹ: </strong>ಮಹಾರಾಷ್ಟ್ರ ಬಿಜೆಪಿ ಶಾಸಕ ರಾಮ್ ಕದಮ್ ಅವರು ಗುರುವಾರ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರನ್ನು ಭೇಟಿಯಾಗಿ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>