<p><strong>ಅಮರಾವತಿ</strong>: ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಕಳೆದ 45 ದಿನಗಳಲ್ಲಿ ಸುಮಾರು 4 ಲಕ್ಷ ಕೋಳಿಗಳು ಮೃತಪಟ್ಟಿವೆ. ಕಾರಣ ಪತ್ತೆ ಹಚ್ಚುವ ನಿಟ್ಟಿನಲ್ಲಿ ಪಶುಸಂಗೋಪನಾ ಇಲಾಖೆಯು, ಸತ್ತ ಕೋಳಿಗಳ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಿದೆ.</p><p>ಭೋಪಾಲ್ ಹಾಗೂ ವಿಜಯವಾಡದ ಪ್ರಯೋಗಾಲಯಕ್ಕೆ ಮಾದರಿಯನ್ನು ರವಾನಿಸಲಾಗಿದೆ ಎಂದು ಪಶುಸಂಗೋಪನಾ ಇಲಾಖೆ ನಿರ್ದೇಶಕ ದಾಮೋದರ್ ನಾಯ್ಡು ಹೇಳಿದ್ದಾರೆ.</p><p>'ಸಾವು ಸಂಭವಿಸುತ್ತಿದೆಯಾದರೂ, ಅಷ್ಟೇನು ವ್ಯಾಪಕವಾಗಿಲ್ಲ ಎಂದು ರೈತರು ಹೇಳಿದ್ದಾರೆ. ಸುರಕ್ಷತಾ ಮಾನದಂಡಗಳನ್ನು ಜನರು ನಿರ್ಲಕ್ಷಿಸಿರುವುದು ರೋಗ ಹರಡುವಿಕೆಗೆ ಮುಖ್ಯ ಕಾರಣವಾಗಿದೆ' ಎಂದು ನಾಯ್ಡು ಪಿಟಿಐಗೆ ತಿಳಿಸಿದ್ದಾರೆ.</p><p>ಕೆಲವರು ಸತ್ತ ಕೋಳಿಗಳನ್ನು ಕಾಲುವೆಗಳು, ರಸ್ತೆ ಬದಿಯಲ್ಲಿ ಕಸಹಾಕುವ ಸ್ಥಳಗಳಲ್ಲಿ ಬಿಸಾಡುತ್ತಿದ್ದಾರೆ. ಇದು, ಸೋಂಕು ಹರಡಲು ಕಾರಣವಾಗಿದೆ ಎಂದಿರುವ ನಾಯ್ಡು, ಕೈಗೊಳ್ಳಬಹುದಾದ ಕನಿಷ್ಠ ಮುಂಜಾಗ್ರತೆಯನ್ನು ಕಡೆಗಣಿಸಲಾಗಿದೆ. ಇದರಿಂದ, ಸಾವು ಸಂಭವಿಸುತ್ತಿದೆ. ಪ್ರತಿವರ್ಷವೂ ಈ ರೀತಿ ಆಗುತ್ತಿರುತ್ತದೆ. ಆದರೆ, ವಲಸೆ ಪಕ್ಷಿಗಳ ಸಂಖ್ಯೆ ಏರಿಕೆಯಾಗಿರುವುದನ್ನು ಸಾಕಣೆದಾರರು ನಿರ್ಲಕ್ಷಿಸಿರುವುದರಿಂದ ಸಾವಿನ ಸಂಖ್ಯೆ ಏರಿಕೆಯಾಗಿದೆ ಎಂದು ವಿವರಿಸಿದ್ದಾರೆ.</p><p>'ಮುನ್ನೆಚ್ಚರಿಕೆಯ ಬಗ್ಗೆ ಸಾಕಣೆದಾರರು, ರೈತರಲ್ಲಿ ಅರಿವು ಮೂಡಿಸುವ ಸಲುವಾಗಿ ಸರಣಿ ಸಭೆಗಳನ್ನು ನಡೆಸಿದ್ದೇವೆ. ಆರೋಗ್ಯ ಮತ್ತು ಸುರಕ್ಷತೆ ಕಾಪಾಡಿಕೊಳ್ಳುವ ಕುರಿತು ರೈತರಿಗೆ ಸಲಹೆ ನೀಡಲು, ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿದ್ದಾರೆ. ಈ ವಾರಾಂತ್ಯದಲ್ಲಿ ಸಾವಿನ ಸಂಖ್ಯೆ ಇಳಿಕೆಯಾಗುವ ನಿರೀಕ್ಷೆ ಇದೆ' ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p><p>ಕೋಳಿಗಳು ಭಾರಿ ಸಂಖ್ಯೆಯಲ್ಲಿ ಮೃತಪಟ್ಟಿರುವುದಕ್ಕೆ ಹಕ್ಕಿ ಜ್ವರ ಕಾರಣವಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಆದರೆ, ಪ್ರಯೋಗಾಲಯದಲ್ಲಿ ಖಚಿತವಾಗಬೇಕಿದೆ.</p><p>ಜಿಲ್ಲೆಯಲ್ಲಿರುವ ಪೌಲ್ಟ್ರಿ ಫಾರ್ಮ್ಗಳಲ್ಲಿ ಸುಮಾರು 8 ಕೋಟಿ ಕೋಳಿಗಳಿವೆ. 2 ಕೋಟಿಯಷ್ಟು ಕೋಳಿಗಳನ್ನು ಜನರು ತಮ್ಮ ಮನೆಗಳಲ್ಲಿ ಸಾಕಿದ್ದಾರೆ ಎಂದು ಇಲಾಖೆ ಅಂದಾಜಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ</strong>: ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಕಳೆದ 45 ದಿನಗಳಲ್ಲಿ ಸುಮಾರು 4 ಲಕ್ಷ ಕೋಳಿಗಳು ಮೃತಪಟ್ಟಿವೆ. ಕಾರಣ ಪತ್ತೆ ಹಚ್ಚುವ ನಿಟ್ಟಿನಲ್ಲಿ ಪಶುಸಂಗೋಪನಾ ಇಲಾಖೆಯು, ಸತ್ತ ಕೋಳಿಗಳ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಿದೆ.</p><p>ಭೋಪಾಲ್ ಹಾಗೂ ವಿಜಯವಾಡದ ಪ್ರಯೋಗಾಲಯಕ್ಕೆ ಮಾದರಿಯನ್ನು ರವಾನಿಸಲಾಗಿದೆ ಎಂದು ಪಶುಸಂಗೋಪನಾ ಇಲಾಖೆ ನಿರ್ದೇಶಕ ದಾಮೋದರ್ ನಾಯ್ಡು ಹೇಳಿದ್ದಾರೆ.</p><p>'ಸಾವು ಸಂಭವಿಸುತ್ತಿದೆಯಾದರೂ, ಅಷ್ಟೇನು ವ್ಯಾಪಕವಾಗಿಲ್ಲ ಎಂದು ರೈತರು ಹೇಳಿದ್ದಾರೆ. ಸುರಕ್ಷತಾ ಮಾನದಂಡಗಳನ್ನು ಜನರು ನಿರ್ಲಕ್ಷಿಸಿರುವುದು ರೋಗ ಹರಡುವಿಕೆಗೆ ಮುಖ್ಯ ಕಾರಣವಾಗಿದೆ' ಎಂದು ನಾಯ್ಡು ಪಿಟಿಐಗೆ ತಿಳಿಸಿದ್ದಾರೆ.</p><p>ಕೆಲವರು ಸತ್ತ ಕೋಳಿಗಳನ್ನು ಕಾಲುವೆಗಳು, ರಸ್ತೆ ಬದಿಯಲ್ಲಿ ಕಸಹಾಕುವ ಸ್ಥಳಗಳಲ್ಲಿ ಬಿಸಾಡುತ್ತಿದ್ದಾರೆ. ಇದು, ಸೋಂಕು ಹರಡಲು ಕಾರಣವಾಗಿದೆ ಎಂದಿರುವ ನಾಯ್ಡು, ಕೈಗೊಳ್ಳಬಹುದಾದ ಕನಿಷ್ಠ ಮುಂಜಾಗ್ರತೆಯನ್ನು ಕಡೆಗಣಿಸಲಾಗಿದೆ. ಇದರಿಂದ, ಸಾವು ಸಂಭವಿಸುತ್ತಿದೆ. ಪ್ರತಿವರ್ಷವೂ ಈ ರೀತಿ ಆಗುತ್ತಿರುತ್ತದೆ. ಆದರೆ, ವಲಸೆ ಪಕ್ಷಿಗಳ ಸಂಖ್ಯೆ ಏರಿಕೆಯಾಗಿರುವುದನ್ನು ಸಾಕಣೆದಾರರು ನಿರ್ಲಕ್ಷಿಸಿರುವುದರಿಂದ ಸಾವಿನ ಸಂಖ್ಯೆ ಏರಿಕೆಯಾಗಿದೆ ಎಂದು ವಿವರಿಸಿದ್ದಾರೆ.</p><p>'ಮುನ್ನೆಚ್ಚರಿಕೆಯ ಬಗ್ಗೆ ಸಾಕಣೆದಾರರು, ರೈತರಲ್ಲಿ ಅರಿವು ಮೂಡಿಸುವ ಸಲುವಾಗಿ ಸರಣಿ ಸಭೆಗಳನ್ನು ನಡೆಸಿದ್ದೇವೆ. ಆರೋಗ್ಯ ಮತ್ತು ಸುರಕ್ಷತೆ ಕಾಪಾಡಿಕೊಳ್ಳುವ ಕುರಿತು ರೈತರಿಗೆ ಸಲಹೆ ನೀಡಲು, ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿದ್ದಾರೆ. ಈ ವಾರಾಂತ್ಯದಲ್ಲಿ ಸಾವಿನ ಸಂಖ್ಯೆ ಇಳಿಕೆಯಾಗುವ ನಿರೀಕ್ಷೆ ಇದೆ' ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p><p>ಕೋಳಿಗಳು ಭಾರಿ ಸಂಖ್ಯೆಯಲ್ಲಿ ಮೃತಪಟ್ಟಿರುವುದಕ್ಕೆ ಹಕ್ಕಿ ಜ್ವರ ಕಾರಣವಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಆದರೆ, ಪ್ರಯೋಗಾಲಯದಲ್ಲಿ ಖಚಿತವಾಗಬೇಕಿದೆ.</p><p>ಜಿಲ್ಲೆಯಲ್ಲಿರುವ ಪೌಲ್ಟ್ರಿ ಫಾರ್ಮ್ಗಳಲ್ಲಿ ಸುಮಾರು 8 ಕೋಟಿ ಕೋಳಿಗಳಿವೆ. 2 ಕೋಟಿಯಷ್ಟು ಕೋಳಿಗಳನ್ನು ಜನರು ತಮ್ಮ ಮನೆಗಳಲ್ಲಿ ಸಾಕಿದ್ದಾರೆ ಎಂದು ಇಲಾಖೆ ಅಂದಾಜಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>