ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವದೆಹಲಿ: ಪಿಸ್ತೂಲ್ ಹಿಡಿದು ಕೇಕ್ ಕತ್ತರಿಸಿದ ಯುವಕನ ಬಂಧನ

Last Updated 1 ಏಪ್ರಿಲ್ 2023, 11:38 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ನೆಬ್‌ ಸರೈ ಪ್ರದೇಶದಲ್ಲಿ ಯುವಕನೊಬ್ಬ ಪಿಸ್ತೂಲ್ ಹಿಡಿದು ಕೇಕ್ ಕತ್ತರಿಸಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಈ ಸಂಬಂಧ 21 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಅಂಕಿತ್ ಅಲಿಯಾಸ್ ಅನೀಶ್ ಎಂದು ಗುರುತಿಸಲಾಗಿದ್ದು, ಸಂಗಮ್ ವಿಹಾರ್ ನಿವಾಸಿ ಎನ್ನಲಾಗಿದೆ.

ಆತನ ವಿರುದ್ಧ ಈ ಹಿಂದೆಯೂ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದೆ. ಅಕ್ರಮವಾಗಿ ಶಸ್ತ್ರಾಸ್ತ್ರ ಹಿಡಿದು ಸಂಗಮ್ ವಿಹಾರ್ ಪ್ರದೇಶದಲ್ಲಿ ತಿರುಗಾಡುತ್ತಿರುವ ಹಾಗೂ ಪಿಸ್ತೂಲ್ ಹಿಡಿದು ಕೇಕ್ ಕತ್ತರಿಸಿರುವ ಅನೀಶ್ ವಿಡಿಯೊ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆತನನ್ನು ಬಂಧಿಸಿ, ಶಸ್ತ್ರಾಸ್ತ್ರ ವಶಪಡಿಸಿಕೊಂಡಿದ್ದೇವೆ ಎಂದು ಪೊಲೀಸ್‌ ಅಧಿಕಾರಿ ಚಂದನ್ ಚೌಧರಿ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಪ್ರಚಾರ ಪಡೆಯಲು ಈ ರೀತಿ ಮಾಡಿದ್ದಾನೆ ಎಂದು ಚೌಧರಿ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT