ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅವಳಿ ಕೊಲೆ: ಮಹಾರಾಷ್ಟ್ರದ ಕಲಾವಿದ ಚಿಂತನ್‌ ಉಪಾಧ್ಯಾಯಗೆ ಜೀವಾವಧಿ ಶಿಕ್ಷೆ

Published 10 ಅಕ್ಟೋಬರ್ 2023, 9:55 IST
Last Updated 10 ಅಕ್ಟೋಬರ್ 2023, 9:55 IST
ಅಕ್ಷರ ಗಾತ್ರ

ಮುಂಬೈ: ಅವಳಿ ಕೊಲೆ ಮಾಡಲು ಸಂಚು ರೂಪಿಸಿದ್ದ ಆರೋಪ ಎದುರಿಸುತ್ತಿದ್ದ ಕಲಾವಿದ ಚಿಂತನ್‌ ಉಪಾಧ್ಯಾಯ ಅಪರಾಧಿ ಎಂದು ಪರಿಗಣಿಸಿದ ಮುಂಬೈನ ದಿಂಡೋಶಿ ನ್ಯಾಯಾಲಯ ಮಂಗಳವಾರ ಕಠಿಣ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ.

ಚಿಂತನ್, ಪತ್ನಿ ಹಾಗೂ ಆಕೆಯ ವಕೀಲರನ್ನು ಕೊಲ್ಲಲು ಕುಮ್ಮಕ್ಕು ನೀಡಿದ ಮತ್ತು ಸಂಚು ರೂಪಿಸಿದ ಪ್ರಕರಣದಲ್ಲಿ ತಪ್ಪಿತಸ್ಥ ಎಂದು ಅಕ್ಟೋಬರ್ 5 ರಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎಸ್. ವೈ ಭೋಸಲೆ ತೀರ್ಪು ನೀಡಿದ್ದರು. ಶಿಕ್ಷೆಯ ಪ್ರಮಾಣದ ಬಗ್ಗೆ ಇಂದು ಆದೇಶ ಹೊರಡಿಸಲಾಗಿದೆ.

2015ರ ಡಿ.11 ರಂದು ಚಿಂತನ್‌ ಪತ್ನಿ ಹೇಮಾ ಮತ್ತು ಅವರ ವಕೀಲ ಹರೀಶ್‌ ಭಂಭಾನಿ ಕೊಲೆಯಾಗಿತ್ತು. ಮೃತದೇಹಗಳು ಪೆಟ್ಟಿಗೆಯೊಂದರಲ್ಲಿ ಮುಂಬೈನ ಖಂಡಿವಾಲಿ ಪ್ರದೇಶದಲ್ಲಿ ಹಳ್ಳವೊಂದರಲ್ಲಿ ಪತ್ತೆಯಾಗಿದ್ದವು.

ಪ್ರಕರಣದಲ್ಲಿ ಭಾಗಿಯಾಗಿದ್ದ ಇತರ ಮೂವರನ್ನೂ ಅಪರಾಧಿಗಳೆಂದು ಪರಿಗಣಿಸಿ ಜೀವಾವಧಿ ಶಿಕ್ಷೆಗೆ ಒಳಪಡಿಸಲಾಗಿದೆ.

ಚಿಂತನ್‌ ಉಪಾಧ್ಯಾಯ ವರ್ಣಚಿತ್ರ ಕಲಾವಿದರಾಗಿ ಗುರುತಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT