<p><strong>ನವದೆಹಲಿ:</strong> ಅರುಣಾಚಲ ಪ್ರದೇಶದ 27 ಪ್ರದೇಶಗಳ ಹೆಸರನ್ನು ಬದಲಿಸಿ ಚೀನಾ ಪಟ್ಟಿ ಬಿಡುಗಡೆ ಮಾಡಿದೆ. ಚೀನಾದ ಈ ಕ್ರಮಕ್ಕೆ ಭಾರತವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ‘ಇದೊಂದು ‘ವ್ಯರ್ಥ’ ಮತ್ತು ‘ಅಸಂಬದ್ಧ’ ಯತ್ನವಾಗಿದೆ. ಈ ಪ್ರದೇಶಗಳು ಹಿಂದೆಯೂ ಭಾರತದ್ದು, ಇಂದು ಮತ್ತು ಮುಂದೆಯೂ ಭಾರತದ್ದೇ ಆಗಿರಲಿವೆ’ ಎಂದು ಹೇಳಿದೆ. ಪಾಕಿಸ್ತಾನ ಜೊತೆಗೆ ಸಂಘರ್ಷ ಶಮನವಾದ ಬೆನ್ನಲ್ಲೇ ಚೀನಾ ಈ ಕ್ರಮ ಕೈಗೊಂಡಿದೆ.</p><p>ಚೀನಾ ಪಟ್ಟಿ ಬಿಡುಗಡೆ ಮಾಡಿರುವ ಬಗ್ಗೆ ಬುಧವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ<br>ಕೇಳಿದ ಪ್ರಶ್ನೆಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಉತ್ತರಿಸಿದರು.</p><p>‘ಬೇರೆ ಬೇರೆ ಹೆಸರುಗಳನ್ನು ಇಡುವುದರಿಂದ ವಾಸ್ತವ ಬದಲಾಗುವುದಿಲ್ಲ. ಅರುಣಾಚಲ ಪ್ರದೇಶವು ಭಾರತದ ಅವಿಭಾಜ್ಯ ಅಂಗವಾಗಿದ್ದು ಇನ್ನು ಮುಂದೆಯೂ ಹಾಗೆಯೇ ಇರಲಿದೆ’ ಎಂದರು.</p><p>2020ರಲ್ಲಿ ಗಾಲ್ವನ್ ಸಂಘರ್ಷ ನಡೆದು ಸುಮಾರು ನಾಲ್ಕು ವರ್ಷಗಳ ಬಳಿಕ ಭಾರತ ಮತ್ತು ಚೀನಾದ ಸಂಬಂಧವು ಉತ್ತಮಗೊಳ್ಳುವ ಹಂತದಲ್ಲಿತ್ತು. ತಮ್ಮ ದ್ವಿಪಕ್ಷೀಯ ಸಂಬಂಧವನ್ನು ಉತ್ತಮಗೊಳಿಸಿಕೊಳ್ಳುವ ಬಗ್ಗೆ ಎರಡೂ ದೇಶಗಳು ಹಲವು ಕ್ರಮಗಳನ್ನು ಕೈಗೊಂಡಿದ್ದವು.</p><p>ಭಾರತ–ಪಾಕಿಸ್ತಾನ ಸಂಘರ್ಷದ ಸಂದರ್ಭದಲ್ಲಿ, ಪಾಕಿಸ್ತಾನದ ಪರ ನಿಲ್ಲುವುದಾಗಿ ಚೀನಾ ಬಹಿರಂಗವಾಗಿಯೇ ಹೇಳಿತ್ತು.</p>.<p><strong>ನಿರ್ಬಂಧದ ಬಳಿಕ ವಾಪಸ್: </strong></p><p>ಪಾಕಿಸ್ತಾನದ ಅಪಪ್ರಚಾರಗಳನ್ನು ಸುದ್ದಿ ಮಾಡಿದ್ದಕ್ಕಾಗಿ ಚೀನಾದ ‘ಗ್ಲೋಬಲ್ ಟೈಮ್ಸ್’ ಮತ್ತು ‘ಷಿನ್ಹುವಾ’ ಪತ್ರಿಕೆಗಳ ‘ಎಕ್ಸ್’ ಖಾತೆಗಳಿಗೆ ಭಾರತ ಬುಧವಾರ ನಿರ್ಬಂಧ ಹೇರಿತ್ತು. ಈ ಖಾತೆಗಳಿಗೆ ನಿರ್ಬಂಧ ಹೇರುವಂತೆ ಕೇಂದ್ರ ಸರ್ಕಾರವು ‘ಎಕ್ಸ್’ಗೆ ಸೂಚನೆ ನೀಡಿತ್ತು. ಆದರೆ, ನಿರ್ಬಂಧ ಹೇರಿದ ಕೆಲವೇ ಗಂಟೆಗಳಲ್ಲಿ ವಾಪಸ್ ಪಡೆದಿದೆ.</p>.<p><strong>ಉತ್ತಮಗೊಳ್ಳುತ್ತಿದ್ದ ಸಂಬಂಧ</strong></p><p>2020ರಲ್ಲಿ ಚೀನಾ ಹಾಗೂ ಭಾರತದ ಸೈನಿಕರ ಮಧ್ಯೆ ಲಡಾಖ್ನ ಗಾಲ್ವನ್ ಕಣಿವೆಯಲ್ಲಿ ಭಾರಿ ಸಂಘರ್ಷ ನಡೆದಿತ್ತು. ಈ ಬಳಿಕ ಎರಡೂ ದೇಶಗಳ ಸಂಬಂಧ ಹಳಸಿತ್ತು. ಕಳೆದ ವರ್ಷದಿಂದ ಚೀನಾ–ಭಾರತ ಮಧ್ಯೆ ದ್ವಿಪಕ್ಷೀಯ ಮಾತುಕತೆಗಳು ನಡೆಯಲು ಆರಂಭಿಸಿದ್ದವು. ತಮ್ಮ ನಡುವಿನ ಸಂಘರ್ಷ ಶಮನಕ್ಕೆ ಹಲವು ಕ್ರಮಗಳನ್ನೂ ಕೈಗೊಂಡಿದ್ದವು.</p><p>* ಗಾಲ್ವನ್ ಸಂಘರ್ಷದ ಬಳಿಕ ಕಳೆದ ಐದು ವರ್ಷಗಳಿಂದ ನೇರ ವಿಮಾನಯಾನ ರದ್ದುಗೊಂಡಿತ್ತು. ಜೊತೆಗೆ ಮಾನಸ ಸರೋವರ ಯಾತ್ರೆಯನ್ನೂ ನಿಲ್ಲಿಸಲಾಗಿತ್ತು (ಕೋವಿಡ್ ಕಾರಣದಿಂದಲೂ ಯಾತ್ರೆಯನ್ನು ನಿಲ್ಲಿಸಲಾಗಿತ್ತು. ಸಂಘರ್ಷ ಬಳಿಕ ಈ ಸ್ಥಿತಿ ಮುಂದುವರಿಯಿತು). ಎರಡೂ ದೇಶಗಳ ಮಾತುಕತೆಗಳ ಬಳಿಕ ನೇರ ವಿಮಾನಯಾನವನ್ನೂ ಮಾನಸ ಸರೋವರ ಯಾತ್ರೆಯನ್ನೂ ಪುನರ್ ಆರಂಭಿಸಲಾಗಿದೆ</p><p>* ಡೆಮ್ಚೊಕ್ ಮತ್ತು ದೆಪ್ಸಾಂಗ್ ಪ್ರದೇಶಗಳಲ್ಲಿ ನಿಯೋಜಿಸಲಾಗಿದ್ದ ಸೇನೆಯನ್ನು ಎರಡೂ ದೇಶಗಳು ಹಿಂಪಡೆದುಕೊಂಡಿದ್ದವು</p><p>* ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಷಿ ಜಿಂಗ್ಪಿಂಗ್ ಅವರು ರಷ್ಯಾದ ಕಜಾನ್ನಲ್ಲಿ 2024ರಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ದ್ವಿಪಕ್ಷೀಯ ಸಂಬಂಧ ಉತ್ತಮಪಡಿಸಿಕೊಳ್ಳುವುದಕ್ಕೆ ಇಬ್ಬರೂ ಒಪ್ಪಿಗೆ ನೀಡಿದ್ದರು</p><p>* ಭಾರತ ಮತ್ತು ಚೀನಾದ ದ್ವಿಪಕ್ಷೀಯ ಸಂಬಂದಕ್ಕೆ 75 ವರ್ಷ ಸಂದ ಸಂದರ್ಭದಲ್ಲಿ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಅವರು ಚೀನಾದ ರಾಯಭಾರಿಯೊಂದಿಗೆ ದೆಹಲಿಯಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಿದ್ದರು</p>.<div><blockquote>ಜಾಂಗ್ನ್ಯಾನ್ನ (ಅರುಣಾಚಲ ಪ್ರದೇಶಕ್ಕೆ ಚೀನಾ ಇಟ್ಟ ಹೆಸರು) ಕೆಲವು ಪ್ರದೇಶಗಳ ಹೆಸರನ್ನು ಬದಲಾಯಿಸಿದ್ದೇವೆ. ಇದು ಚೀನಾದ ಸಾರ್ವಭೌಮತ್ವದ ಹಕ್ಕಿನ ಅಡಿಯಲ್ಲಿಯೇ ಇದೆ</blockquote><span class="attribution">ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ </span></div>.<p><strong>ಪಾಕ್ ಜತೆಗಿನ ಸಂಘರ್ಷ: ದಿನದ ಬೆಳವಣಿಗೆ</strong></p><p>*‘ಭಾರತದ ವಿರುದ್ಧದ ಸೇನಾ ಕಾರ್ಯಾಚರಣೆಯನ್ನು ಮಾಜಿ ಪ್ರಧಾನಿ ನವಾಜ್ ಷರೀಫ್ ಮೇಲ್ವಿಚಾರಣೆಯಲ್ಲಿ ರೂಪಿಸಲಾಗಿತ್ತು’ ಎಂದು ಪಾಕ್ನ ಪಂಜಾಬ್ ಪ್ರಾಂತ್ಯದ ಮಾಹಿತಿ ಸಚಿವೆ ಅಜ್ಮಾ ಬುಖಾರಿ ಹೇಳಿಕೆ</p><p>*ಟರ್ಕಿಯ ಐನಾನು ವಿಶ್ವವಿದ್ಯಾಲಯದ ಜೊತೆಗಿನ ಶೈಕ್ಷಣಿಕ ಒಪ್ಪಂದವನ್ನು (ಎಂಒಯು) ರಾಷ್ಟ್ರೀಯ ಭದ್ರತಾ ದೃಷ್ಟಿಯಿಂದ ಅಮಾನತಿನಲ್ಲಿ ಇಡಲಾಗಿದೆ ಎಂದು ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಅಧಿಕಾರಿಗಳ ಹೇಳಿಕೆ</p><p>*ಭಾರತ ವಿರುದ್ಧದ ದಾಳಿಯಲ್ಲಿ ಪಾಕಿಸ್ತಾನ ಬಳಸಿರುವ ಡ್ರೋನ್ಗಳನ್ನು ಟರ್ಕಿ ಪೂರೈಸಿದೆ. ಆದ್ದರಿಂದ ಈ ಎರಡು ದೇಶಗಳಿಂದ ಆಮದಾಗುವ ಸರಕುಗಳಿಗೆ ಕೇಂದ್ರ ಸರ್ಕಾರವು ಬಹಿಷ್ಕಾರ ಹೇರಬೇಕು ಎಂದು ವರ್ತಕರ ವಲಯದ ಒತ್ತಾಯ</p><p>*ಪಾಕಿಸ್ತಾನದೊಂದಿಗೆ ಅಪವಿತ್ರ ಮೈತ್ರಿ ಹೊಂದಿರುವ ಟರ್ಕಿ ಮೇಲೆ ಆರ್ಥಿಕ ನಿರ್ಬಂಧ ವಿಧಿಸಬೇಕು’ ಎಂದು ಆರ್ಎಸ್ಎಸ್ ಅಂಗಸಂಸ್ಥೆ ಸ್ವದೇಶಿ ಜಾಗರಣ ಮಂಚ್ (ಎಸ್ಜೆಎಂ) ಆಗ್ರಹ</p><p>*ಕಾಶ್ಮೀರ ಕಣಿವೆಯ ಬಹುತೇಕ ಭಾಗಗಳಲ್ಲಿ ಬುಧವಾರದಿಂದ ಶಾಲಾ–ಕಾಲೇಜುಗಳು ಪುನರಾರಂಭ</p>.<p><strong>ಭದ್ರತಾ ಸ್ಥಿತಿ: ಸಂಪುಟ ಸಮಿತಿ ಪರಾಮರ್ಶೆ</strong></p><p>ಭಾರತ–ಪಾಕಿಸ್ತಾನದ ನಡುವಿನ ಕದನ ವಿರಾಮದ ಬಳಿಕ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿಯ ಸಭೆ ಬುಧವಾರ ನಡೆಯಿತು. ‘ಆಪರೇಷನ್ ಸಿಂಧೂರ’ ಬಳಿಕದ ಭದ್ರತಾ ಸ್ಥಿತಿಯ ಬಗ್ಗೆ ಚರ್ಚಿಸಲಾಯಿತು.</p><p>ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದರು. ಪ್ರಸ್ತುತ ಪರಿಸ್ಥಿತಿ ಮತ್ತು ಭಾರತದ ಸನ್ನದ್ಧತೆ ಬಗ್ಗೆ ಚರ್ಚಿಸಿದರು.</p><p>ನಂತರ ಪ್ರಧಾನಿ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಪಾಕ್ ಬೆಂಬಲಿತ ಉಗ್ರರ ಸದೆ ಬಡಿಯಲು ನಡೆಸಿದ ಕಾರ್ಯಾಚರಣೆ ಬಗ್ಗೆ ಪ್ರಧಾನಿ ಅವರನ್ನು ಸಚಿವರು ಶ್ಲಾಘಿಸಿದರು.</p><p>ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ‘ಆಪರೇಷನ್ ಸಿಂಧೂರವು ದೇಶದ ಶ್ರೇಷ್ಠ ನಾಯಕತ್ವಕ್ಕೆ ಸಾಕ್ಷ್ಯ. ಸಶಸ್ತ್ರ ಪಡೆಗಳ ಈ ಸಾಧನೆ ದೇಶಕ್ಕೆ ಹೆಮ್ಮೆ ತಂದಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅರುಣಾಚಲ ಪ್ರದೇಶದ 27 ಪ್ರದೇಶಗಳ ಹೆಸರನ್ನು ಬದಲಿಸಿ ಚೀನಾ ಪಟ್ಟಿ ಬಿಡುಗಡೆ ಮಾಡಿದೆ. ಚೀನಾದ ಈ ಕ್ರಮಕ್ಕೆ ಭಾರತವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ‘ಇದೊಂದು ‘ವ್ಯರ್ಥ’ ಮತ್ತು ‘ಅಸಂಬದ್ಧ’ ಯತ್ನವಾಗಿದೆ. ಈ ಪ್ರದೇಶಗಳು ಹಿಂದೆಯೂ ಭಾರತದ್ದು, ಇಂದು ಮತ್ತು ಮುಂದೆಯೂ ಭಾರತದ್ದೇ ಆಗಿರಲಿವೆ’ ಎಂದು ಹೇಳಿದೆ. ಪಾಕಿಸ್ತಾನ ಜೊತೆಗೆ ಸಂಘರ್ಷ ಶಮನವಾದ ಬೆನ್ನಲ್ಲೇ ಚೀನಾ ಈ ಕ್ರಮ ಕೈಗೊಂಡಿದೆ.</p><p>ಚೀನಾ ಪಟ್ಟಿ ಬಿಡುಗಡೆ ಮಾಡಿರುವ ಬಗ್ಗೆ ಬುಧವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ<br>ಕೇಳಿದ ಪ್ರಶ್ನೆಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಉತ್ತರಿಸಿದರು.</p><p>‘ಬೇರೆ ಬೇರೆ ಹೆಸರುಗಳನ್ನು ಇಡುವುದರಿಂದ ವಾಸ್ತವ ಬದಲಾಗುವುದಿಲ್ಲ. ಅರುಣಾಚಲ ಪ್ರದೇಶವು ಭಾರತದ ಅವಿಭಾಜ್ಯ ಅಂಗವಾಗಿದ್ದು ಇನ್ನು ಮುಂದೆಯೂ ಹಾಗೆಯೇ ಇರಲಿದೆ’ ಎಂದರು.</p><p>2020ರಲ್ಲಿ ಗಾಲ್ವನ್ ಸಂಘರ್ಷ ನಡೆದು ಸುಮಾರು ನಾಲ್ಕು ವರ್ಷಗಳ ಬಳಿಕ ಭಾರತ ಮತ್ತು ಚೀನಾದ ಸಂಬಂಧವು ಉತ್ತಮಗೊಳ್ಳುವ ಹಂತದಲ್ಲಿತ್ತು. ತಮ್ಮ ದ್ವಿಪಕ್ಷೀಯ ಸಂಬಂಧವನ್ನು ಉತ್ತಮಗೊಳಿಸಿಕೊಳ್ಳುವ ಬಗ್ಗೆ ಎರಡೂ ದೇಶಗಳು ಹಲವು ಕ್ರಮಗಳನ್ನು ಕೈಗೊಂಡಿದ್ದವು.</p><p>ಭಾರತ–ಪಾಕಿಸ್ತಾನ ಸಂಘರ್ಷದ ಸಂದರ್ಭದಲ್ಲಿ, ಪಾಕಿಸ್ತಾನದ ಪರ ನಿಲ್ಲುವುದಾಗಿ ಚೀನಾ ಬಹಿರಂಗವಾಗಿಯೇ ಹೇಳಿತ್ತು.</p>.<p><strong>ನಿರ್ಬಂಧದ ಬಳಿಕ ವಾಪಸ್: </strong></p><p>ಪಾಕಿಸ್ತಾನದ ಅಪಪ್ರಚಾರಗಳನ್ನು ಸುದ್ದಿ ಮಾಡಿದ್ದಕ್ಕಾಗಿ ಚೀನಾದ ‘ಗ್ಲೋಬಲ್ ಟೈಮ್ಸ್’ ಮತ್ತು ‘ಷಿನ್ಹುವಾ’ ಪತ್ರಿಕೆಗಳ ‘ಎಕ್ಸ್’ ಖಾತೆಗಳಿಗೆ ಭಾರತ ಬುಧವಾರ ನಿರ್ಬಂಧ ಹೇರಿತ್ತು. ಈ ಖಾತೆಗಳಿಗೆ ನಿರ್ಬಂಧ ಹೇರುವಂತೆ ಕೇಂದ್ರ ಸರ್ಕಾರವು ‘ಎಕ್ಸ್’ಗೆ ಸೂಚನೆ ನೀಡಿತ್ತು. ಆದರೆ, ನಿರ್ಬಂಧ ಹೇರಿದ ಕೆಲವೇ ಗಂಟೆಗಳಲ್ಲಿ ವಾಪಸ್ ಪಡೆದಿದೆ.</p>.<p><strong>ಉತ್ತಮಗೊಳ್ಳುತ್ತಿದ್ದ ಸಂಬಂಧ</strong></p><p>2020ರಲ್ಲಿ ಚೀನಾ ಹಾಗೂ ಭಾರತದ ಸೈನಿಕರ ಮಧ್ಯೆ ಲಡಾಖ್ನ ಗಾಲ್ವನ್ ಕಣಿವೆಯಲ್ಲಿ ಭಾರಿ ಸಂಘರ್ಷ ನಡೆದಿತ್ತು. ಈ ಬಳಿಕ ಎರಡೂ ದೇಶಗಳ ಸಂಬಂಧ ಹಳಸಿತ್ತು. ಕಳೆದ ವರ್ಷದಿಂದ ಚೀನಾ–ಭಾರತ ಮಧ್ಯೆ ದ್ವಿಪಕ್ಷೀಯ ಮಾತುಕತೆಗಳು ನಡೆಯಲು ಆರಂಭಿಸಿದ್ದವು. ತಮ್ಮ ನಡುವಿನ ಸಂಘರ್ಷ ಶಮನಕ್ಕೆ ಹಲವು ಕ್ರಮಗಳನ್ನೂ ಕೈಗೊಂಡಿದ್ದವು.</p><p>* ಗಾಲ್ವನ್ ಸಂಘರ್ಷದ ಬಳಿಕ ಕಳೆದ ಐದು ವರ್ಷಗಳಿಂದ ನೇರ ವಿಮಾನಯಾನ ರದ್ದುಗೊಂಡಿತ್ತು. ಜೊತೆಗೆ ಮಾನಸ ಸರೋವರ ಯಾತ್ರೆಯನ್ನೂ ನಿಲ್ಲಿಸಲಾಗಿತ್ತು (ಕೋವಿಡ್ ಕಾರಣದಿಂದಲೂ ಯಾತ್ರೆಯನ್ನು ನಿಲ್ಲಿಸಲಾಗಿತ್ತು. ಸಂಘರ್ಷ ಬಳಿಕ ಈ ಸ್ಥಿತಿ ಮುಂದುವರಿಯಿತು). ಎರಡೂ ದೇಶಗಳ ಮಾತುಕತೆಗಳ ಬಳಿಕ ನೇರ ವಿಮಾನಯಾನವನ್ನೂ ಮಾನಸ ಸರೋವರ ಯಾತ್ರೆಯನ್ನೂ ಪುನರ್ ಆರಂಭಿಸಲಾಗಿದೆ</p><p>* ಡೆಮ್ಚೊಕ್ ಮತ್ತು ದೆಪ್ಸಾಂಗ್ ಪ್ರದೇಶಗಳಲ್ಲಿ ನಿಯೋಜಿಸಲಾಗಿದ್ದ ಸೇನೆಯನ್ನು ಎರಡೂ ದೇಶಗಳು ಹಿಂಪಡೆದುಕೊಂಡಿದ್ದವು</p><p>* ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಷಿ ಜಿಂಗ್ಪಿಂಗ್ ಅವರು ರಷ್ಯಾದ ಕಜಾನ್ನಲ್ಲಿ 2024ರಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ದ್ವಿಪಕ್ಷೀಯ ಸಂಬಂಧ ಉತ್ತಮಪಡಿಸಿಕೊಳ್ಳುವುದಕ್ಕೆ ಇಬ್ಬರೂ ಒಪ್ಪಿಗೆ ನೀಡಿದ್ದರು</p><p>* ಭಾರತ ಮತ್ತು ಚೀನಾದ ದ್ವಿಪಕ್ಷೀಯ ಸಂಬಂದಕ್ಕೆ 75 ವರ್ಷ ಸಂದ ಸಂದರ್ಭದಲ್ಲಿ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಅವರು ಚೀನಾದ ರಾಯಭಾರಿಯೊಂದಿಗೆ ದೆಹಲಿಯಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಿದ್ದರು</p>.<div><blockquote>ಜಾಂಗ್ನ್ಯಾನ್ನ (ಅರುಣಾಚಲ ಪ್ರದೇಶಕ್ಕೆ ಚೀನಾ ಇಟ್ಟ ಹೆಸರು) ಕೆಲವು ಪ್ರದೇಶಗಳ ಹೆಸರನ್ನು ಬದಲಾಯಿಸಿದ್ದೇವೆ. ಇದು ಚೀನಾದ ಸಾರ್ವಭೌಮತ್ವದ ಹಕ್ಕಿನ ಅಡಿಯಲ್ಲಿಯೇ ಇದೆ</blockquote><span class="attribution">ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ </span></div>.<p><strong>ಪಾಕ್ ಜತೆಗಿನ ಸಂಘರ್ಷ: ದಿನದ ಬೆಳವಣಿಗೆ</strong></p><p>*‘ಭಾರತದ ವಿರುದ್ಧದ ಸೇನಾ ಕಾರ್ಯಾಚರಣೆಯನ್ನು ಮಾಜಿ ಪ್ರಧಾನಿ ನವಾಜ್ ಷರೀಫ್ ಮೇಲ್ವಿಚಾರಣೆಯಲ್ಲಿ ರೂಪಿಸಲಾಗಿತ್ತು’ ಎಂದು ಪಾಕ್ನ ಪಂಜಾಬ್ ಪ್ರಾಂತ್ಯದ ಮಾಹಿತಿ ಸಚಿವೆ ಅಜ್ಮಾ ಬುಖಾರಿ ಹೇಳಿಕೆ</p><p>*ಟರ್ಕಿಯ ಐನಾನು ವಿಶ್ವವಿದ್ಯಾಲಯದ ಜೊತೆಗಿನ ಶೈಕ್ಷಣಿಕ ಒಪ್ಪಂದವನ್ನು (ಎಂಒಯು) ರಾಷ್ಟ್ರೀಯ ಭದ್ರತಾ ದೃಷ್ಟಿಯಿಂದ ಅಮಾನತಿನಲ್ಲಿ ಇಡಲಾಗಿದೆ ಎಂದು ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಅಧಿಕಾರಿಗಳ ಹೇಳಿಕೆ</p><p>*ಭಾರತ ವಿರುದ್ಧದ ದಾಳಿಯಲ್ಲಿ ಪಾಕಿಸ್ತಾನ ಬಳಸಿರುವ ಡ್ರೋನ್ಗಳನ್ನು ಟರ್ಕಿ ಪೂರೈಸಿದೆ. ಆದ್ದರಿಂದ ಈ ಎರಡು ದೇಶಗಳಿಂದ ಆಮದಾಗುವ ಸರಕುಗಳಿಗೆ ಕೇಂದ್ರ ಸರ್ಕಾರವು ಬಹಿಷ್ಕಾರ ಹೇರಬೇಕು ಎಂದು ವರ್ತಕರ ವಲಯದ ಒತ್ತಾಯ</p><p>*ಪಾಕಿಸ್ತಾನದೊಂದಿಗೆ ಅಪವಿತ್ರ ಮೈತ್ರಿ ಹೊಂದಿರುವ ಟರ್ಕಿ ಮೇಲೆ ಆರ್ಥಿಕ ನಿರ್ಬಂಧ ವಿಧಿಸಬೇಕು’ ಎಂದು ಆರ್ಎಸ್ಎಸ್ ಅಂಗಸಂಸ್ಥೆ ಸ್ವದೇಶಿ ಜಾಗರಣ ಮಂಚ್ (ಎಸ್ಜೆಎಂ) ಆಗ್ರಹ</p><p>*ಕಾಶ್ಮೀರ ಕಣಿವೆಯ ಬಹುತೇಕ ಭಾಗಗಳಲ್ಲಿ ಬುಧವಾರದಿಂದ ಶಾಲಾ–ಕಾಲೇಜುಗಳು ಪುನರಾರಂಭ</p>.<p><strong>ಭದ್ರತಾ ಸ್ಥಿತಿ: ಸಂಪುಟ ಸಮಿತಿ ಪರಾಮರ್ಶೆ</strong></p><p>ಭಾರತ–ಪಾಕಿಸ್ತಾನದ ನಡುವಿನ ಕದನ ವಿರಾಮದ ಬಳಿಕ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿಯ ಸಭೆ ಬುಧವಾರ ನಡೆಯಿತು. ‘ಆಪರೇಷನ್ ಸಿಂಧೂರ’ ಬಳಿಕದ ಭದ್ರತಾ ಸ್ಥಿತಿಯ ಬಗ್ಗೆ ಚರ್ಚಿಸಲಾಯಿತು.</p><p>ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದರು. ಪ್ರಸ್ತುತ ಪರಿಸ್ಥಿತಿ ಮತ್ತು ಭಾರತದ ಸನ್ನದ್ಧತೆ ಬಗ್ಗೆ ಚರ್ಚಿಸಿದರು.</p><p>ನಂತರ ಪ್ರಧಾನಿ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಪಾಕ್ ಬೆಂಬಲಿತ ಉಗ್ರರ ಸದೆ ಬಡಿಯಲು ನಡೆಸಿದ ಕಾರ್ಯಾಚರಣೆ ಬಗ್ಗೆ ಪ್ರಧಾನಿ ಅವರನ್ನು ಸಚಿವರು ಶ್ಲಾಘಿಸಿದರು.</p><p>ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ‘ಆಪರೇಷನ್ ಸಿಂಧೂರವು ದೇಶದ ಶ್ರೇಷ್ಠ ನಾಯಕತ್ವಕ್ಕೆ ಸಾಕ್ಷ್ಯ. ಸಶಸ್ತ್ರ ಪಡೆಗಳ ಈ ಸಾಧನೆ ದೇಶಕ್ಕೆ ಹೆಮ್ಮೆ ತಂದಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>