<p><strong>ನವದೆಹಲಿ:</strong> ಲೇಖಕಿ ಅರುಂಧತಿ ರಾಯ್ ಅವರ ‘ಮದರ್ ಮೇರಿ ಕಮ್ಸ್ ಟು ಮಿ’ ಪುಸ್ತಕದ ಮಾರಾಟ, ಪ್ರಸಾರ ಮತ್ತು ಪ್ರದರ್ಶನವನ್ನು ನಿಷೇಧಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.</p><p>ಈ ಪುಸ್ತಕದ ಮುಖಪುಟದಲ್ಲಿ ಲೇಖಕಿ ‘ಬೀಡಿ’ ಅಥವಾ ‘ಸಿಗರೇಟ್’ ಸೇದುತ್ತಿರುವ ಚಿತ್ರವನ್ನು ಪ್ರಕಟಿಸಲಾಗಿದ್ದು, ಅದು ಕಾನೂನಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು. </p><p>ಈ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ವಜಾಗೊಳಿಸಿದ್ದ ಕೇರಳ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜಸಿಂಹನ್ ಎಂಬುವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರ ಪೀಠ ವಜಾಗೊಳಿಸಿದೆ.</p><p>‘ಪ್ರಸಿದ್ಧ ಲೇಖಕಿ ಆಗಿರುವ ಅರುಂಧತಿ ರಾಯ್ ಅವರು ಅಂತಹ ವಿಷಯಗಳನ್ನು ಪ್ರಚಾರ ಮಾಡಿಲ್ಲ. ಅಲ್ಲದೆ ಪುಸ್ತಕದ ಚಿತ್ರವು ನಗರದ ಯಾವುದೇ ಹೋರ್ಡಿಂಗ್ನಲ್ಲಿ ಇಲ್ಲ. ಪುಸ್ತಕವನ್ನು ತೆಗೆದುಕೊಂಡು ಓದುವವರು ಮಾತ್ರ ಅದನ್ನು ನೋಡುತ್ತಾರೆ’ ಎಂದು ಸಿಜೆಐ ಹೇಳಿದರು. </p><p>‘ಲೇಖಕರು ಮತ್ತು ಪ್ರಕಾಶಕ ಸಂಸ್ಥೆ ಪೆಂಗ್ವಿನ್ ಹಮಿಶ್ ಹ್ಯಾಮಿಲ್ಟನ್, ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆ–2003ರ ಕಲಂ 5 ಅನ್ನು ಉಲ್ಲಂಘಿಸಿಲ್ಲ’ ಎಂದೂ ಪೀಠ ಹೇಳಿತು. </p><p>ಹೀಗಾಗಿ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಸೂಕ್ತ ಕಾರಣವಿಲ್ಲ ಎಂದು ಪೀಠ ತಿಳಿಸಿತು. ಇದು ಲೇಖಕಿ ಅರುಂಧತಿ ರಾಯ್ ಅವರ ಆತ್ಮಚರಿತ್ರೆಯ ಪುಸ್ತಕವಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಲೇಖಕಿ ಅರುಂಧತಿ ರಾಯ್ ಅವರ ‘ಮದರ್ ಮೇರಿ ಕಮ್ಸ್ ಟು ಮಿ’ ಪುಸ್ತಕದ ಮಾರಾಟ, ಪ್ರಸಾರ ಮತ್ತು ಪ್ರದರ್ಶನವನ್ನು ನಿಷೇಧಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.</p><p>ಈ ಪುಸ್ತಕದ ಮುಖಪುಟದಲ್ಲಿ ಲೇಖಕಿ ‘ಬೀಡಿ’ ಅಥವಾ ‘ಸಿಗರೇಟ್’ ಸೇದುತ್ತಿರುವ ಚಿತ್ರವನ್ನು ಪ್ರಕಟಿಸಲಾಗಿದ್ದು, ಅದು ಕಾನೂನಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು. </p><p>ಈ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ವಜಾಗೊಳಿಸಿದ್ದ ಕೇರಳ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜಸಿಂಹನ್ ಎಂಬುವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರ ಪೀಠ ವಜಾಗೊಳಿಸಿದೆ.</p><p>‘ಪ್ರಸಿದ್ಧ ಲೇಖಕಿ ಆಗಿರುವ ಅರುಂಧತಿ ರಾಯ್ ಅವರು ಅಂತಹ ವಿಷಯಗಳನ್ನು ಪ್ರಚಾರ ಮಾಡಿಲ್ಲ. ಅಲ್ಲದೆ ಪುಸ್ತಕದ ಚಿತ್ರವು ನಗರದ ಯಾವುದೇ ಹೋರ್ಡಿಂಗ್ನಲ್ಲಿ ಇಲ್ಲ. ಪುಸ್ತಕವನ್ನು ತೆಗೆದುಕೊಂಡು ಓದುವವರು ಮಾತ್ರ ಅದನ್ನು ನೋಡುತ್ತಾರೆ’ ಎಂದು ಸಿಜೆಐ ಹೇಳಿದರು. </p><p>‘ಲೇಖಕರು ಮತ್ತು ಪ್ರಕಾಶಕ ಸಂಸ್ಥೆ ಪೆಂಗ್ವಿನ್ ಹಮಿಶ್ ಹ್ಯಾಮಿಲ್ಟನ್, ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆ–2003ರ ಕಲಂ 5 ಅನ್ನು ಉಲ್ಲಂಘಿಸಿಲ್ಲ’ ಎಂದೂ ಪೀಠ ಹೇಳಿತು. </p><p>ಹೀಗಾಗಿ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಸೂಕ್ತ ಕಾರಣವಿಲ್ಲ ಎಂದು ಪೀಠ ತಿಳಿಸಿತು. ಇದು ಲೇಖಕಿ ಅರುಂಧತಿ ರಾಯ್ ಅವರ ಆತ್ಮಚರಿತ್ರೆಯ ಪುಸ್ತಕವಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>