ಭಾರಿ ಮಳೆಯಿಂದಾಗಿ ಯಮುನಾ ನದಿ ನೀರಿನ ಮಟ್ಟವು ಹೆಚ್ಚಾಗಿ ಪ್ರವಾಹ ಸಂಭವಿಸಿ, ನಗರದ ಕೆಲವು ಭಾಗಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿತ್ತು. ಇದೀಗ ಮಳೆ ಕಡಿಮೆಯಾಗಿದ್ದು, ಇಂದು ಬೆಳಿಗ್ಗೆ ಯಮುನಾ ನೀರಿನ ಮಟ್ಟವು 207.43 ಮೀಟರ್ಗೆ ಇಳಿಮುಖಗೊಂಡಿದೆ. ರಾತ್ರಿ 11 ಗಂಟೆ ಸಮಯಕ್ಕೆ 206.72 ಮೀಟರ್ಗೆ ಇಳಿಯಲಿದೆ ಎಂದು ದೆಹಲಿ ಸರ್ಕಾರದ ಕಂದಾಯ ಕಾರ್ಯದರ್ಶಿ ಅಶ್ವಿನಿ ಕುಮಾರ್ ತಿಳಿಸಿದ್ದಾರೆ.
ನಗರದ ಹಲವು ಭಾಗಗಳು ಇನ್ನೂ ಜಲಾವೃತಗೊಂಡಿದ್ದು, ಅಂತಹ ಪ್ರದೇಶಗಳಿಗೆ ಹೋಗದಂತೆ ಜನರಿಗೆ ಕೇಜ್ರಿವಾಲ್ ಮನವಿ ಮಾಡಿದ್ದಾರೆ.