<p><strong>ನವದೆಹಲಿ:</strong> ‘ನಮ್ಮ ವಿರುದ್ಧದ ಈ ಭ್ರಷ್ಟಾಚಾರ ಪ್ರಕರಣವು ಸ್ವತಂತ್ರ ಭಾರತದ ಇತಿಹಾಸದಲ್ಲಿಯೇ ಅತ್ಯಂತ ದೊಡ್ಡ ರಾಜಕೀಯ ಪಿತೂರಿಯಾಗಿದೆ’ ಎಂದು ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಪ್ರತಿಪಾದಿಸಿದರು.</p>. <p>ದೆಹಲಿ ಅಬಕಾರಿ ನೀತಿ ಪ್ರಕರಣದಿಂದ ಖುಲಾಸೆಗೊಂಡ ಆದೇಶ ಹೊರಬಿದ್ದ ಕೂಡಲೇ, ಕೋರ್ಟ್ನಿಂದ ಹೊರಬಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು. ಈ ವೇಳೆ ಭಾವನಾತ್ಮಕವಾಗಿ ಮಾತನಾಡಿದ ಅವರು ಕಣ್ಣೀರು ಹಾಕಿದರು.</p>. <p>‘ನಾನು, ಸಿಸೋಡಿಯಾ ಮತ್ತು ಎಎಪಿ ಪಕ್ಷದವರು ಪೂರ್ಣ ಪ್ರಾಮಾಣಿಕರು ಎಂಬುದು ನ್ಯಾಯಾಲಯದ ಈ ಆದೇಶದಿಂದ ಸ್ಪಷ್ಟವಾಗುತ್ತದೆ’ ಎಂದರು.</p>. <h2>ಮೋದಿ ಮೇಲೆ ಪಿತೂರಿ ಆರೋಪ: </h2><p>‘ಅಬಕಾರಿ ನೀತಿ ಪ್ರಕರಣದ ಮೂಲಕ ಎಎಪಿಯನ್ನು ಮುಗಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪಿತೂರಿ ರೂಪಿಸಿದ್ದರು’ ಎಂದು ಕೇಜ್ರಿವಾಲ್ ಆರೋಪಿಸಿದರು. </p><p>‘ಮೋದಿ ಮತ್ತು ಅಮಿತ್ ಶಾ ಅವರು ಒಟ್ಟಾಗಿ ಸ್ವತಂತ್ರ ಭಾರತದ ಅತಿದೊಡ್ಡ ರಾಜಕೀಯ ಪಿತೂರಿಯನ್ನು ರೂಪಿಸಿದರು. ಎಎಪಿ ಮುಗಿಸಲು ಪಕ್ಷದ ಐವರು ಹಿರಿಯ ನಾಯಕರನ್ನು ಜೈಲಿಗಟ್ಟಿದರು. ಆದರೆ ದೇವರು ನಮ್ಮೊಂದಿಗಿದ್ದಾನೆ ಎಂದು ನಾನು ಯಾವಾಗಲೂ ಹೇಳುತ್ತಿದ್ದೆ’ ಎಂದು ಅವರು ಸ್ಮರಿಸಿದರು.</p><p>‘ಹಾಲಿ ಮುಖ್ಯಮಂತ್ರಿಯನ್ನು ಮನೆಯಿಂದ ಜೈಲಿಗೆ ಎಳೆದೊಯ್ದದ್ದು ಇದೇ ಮೊದಲು’ ಎಂದ ಅವರು, ‘ನಮ್ಮ ವಿರುದ್ಧ ಅಪಪ್ರಚಾರ ಮಾಡಲಾಯಿತು. ಸುದ್ದಿ ವಾಹಿನಿಗಳಲ್ಲಿ ದಿನದ 24 ಗಂಟೆಯೂ ಈ ಬಗ್ಗೆ ಚರ್ಚೆಗಳು ನಡೆದವು’ ಎಂದು ಬೇಸರ ವ್ಯಕ್ತಪಡಿಸಿದರು. </p> .<div><div class="bigfact-title">ನಕಲಿ ಪ್ರಕರಣ:</div><div class="bigfact-description">‘ಅವರು ನಮ್ಮ ವಿರುದ್ಧ ನಕಲಿ ಪ್ರಕರಣ ದಾಖಲಿಸಿದ್ದರು. ನಾನು ಪ್ರಾಮಾಣಿಕನಾಗಿದ್ದು, ಪ್ರಾಮಾಣಿಕತೆಯನ್ನಷ್ಟೇ ಗಳಿಸಿದ್ದೇನೆ. ಅದೀಗ ಸಾಬೀತಾಗಿದೆ’ ಎಂದರು. ‘ಅಧಿಕಾರಕ್ಕಾಗಿ ದೇಶ ಮತ್ತು ಸಂವಿಧಾನದ ಜತೆ ಆಟವಾಡಬೇಡಿ ಎಂದು ಪ್ರಧಾನಿ ಮೋದಿ ಅವರಿಗೆ ಹೇಳಬಯಸುತ್ತೇನೆ’ ಎಂದು ಕೇಜ್ರಿವಾಲ್ ಹೇಳಿದರು.</div></div>.ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್, ಸಿಸೋಡಿಯಾ, ಕವಿತಾ ಖುಲಾಸೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ನಮ್ಮ ವಿರುದ್ಧದ ಈ ಭ್ರಷ್ಟಾಚಾರ ಪ್ರಕರಣವು ಸ್ವತಂತ್ರ ಭಾರತದ ಇತಿಹಾಸದಲ್ಲಿಯೇ ಅತ್ಯಂತ ದೊಡ್ಡ ರಾಜಕೀಯ ಪಿತೂರಿಯಾಗಿದೆ’ ಎಂದು ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಪ್ರತಿಪಾದಿಸಿದರು.</p>. <p>ದೆಹಲಿ ಅಬಕಾರಿ ನೀತಿ ಪ್ರಕರಣದಿಂದ ಖುಲಾಸೆಗೊಂಡ ಆದೇಶ ಹೊರಬಿದ್ದ ಕೂಡಲೇ, ಕೋರ್ಟ್ನಿಂದ ಹೊರಬಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು. ಈ ವೇಳೆ ಭಾವನಾತ್ಮಕವಾಗಿ ಮಾತನಾಡಿದ ಅವರು ಕಣ್ಣೀರು ಹಾಕಿದರು.</p>. <p>‘ನಾನು, ಸಿಸೋಡಿಯಾ ಮತ್ತು ಎಎಪಿ ಪಕ್ಷದವರು ಪೂರ್ಣ ಪ್ರಾಮಾಣಿಕರು ಎಂಬುದು ನ್ಯಾಯಾಲಯದ ಈ ಆದೇಶದಿಂದ ಸ್ಪಷ್ಟವಾಗುತ್ತದೆ’ ಎಂದರು.</p>. <h2>ಮೋದಿ ಮೇಲೆ ಪಿತೂರಿ ಆರೋಪ: </h2><p>‘ಅಬಕಾರಿ ನೀತಿ ಪ್ರಕರಣದ ಮೂಲಕ ಎಎಪಿಯನ್ನು ಮುಗಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪಿತೂರಿ ರೂಪಿಸಿದ್ದರು’ ಎಂದು ಕೇಜ್ರಿವಾಲ್ ಆರೋಪಿಸಿದರು. </p><p>‘ಮೋದಿ ಮತ್ತು ಅಮಿತ್ ಶಾ ಅವರು ಒಟ್ಟಾಗಿ ಸ್ವತಂತ್ರ ಭಾರತದ ಅತಿದೊಡ್ಡ ರಾಜಕೀಯ ಪಿತೂರಿಯನ್ನು ರೂಪಿಸಿದರು. ಎಎಪಿ ಮುಗಿಸಲು ಪಕ್ಷದ ಐವರು ಹಿರಿಯ ನಾಯಕರನ್ನು ಜೈಲಿಗಟ್ಟಿದರು. ಆದರೆ ದೇವರು ನಮ್ಮೊಂದಿಗಿದ್ದಾನೆ ಎಂದು ನಾನು ಯಾವಾಗಲೂ ಹೇಳುತ್ತಿದ್ದೆ’ ಎಂದು ಅವರು ಸ್ಮರಿಸಿದರು.</p><p>‘ಹಾಲಿ ಮುಖ್ಯಮಂತ್ರಿಯನ್ನು ಮನೆಯಿಂದ ಜೈಲಿಗೆ ಎಳೆದೊಯ್ದದ್ದು ಇದೇ ಮೊದಲು’ ಎಂದ ಅವರು, ‘ನಮ್ಮ ವಿರುದ್ಧ ಅಪಪ್ರಚಾರ ಮಾಡಲಾಯಿತು. ಸುದ್ದಿ ವಾಹಿನಿಗಳಲ್ಲಿ ದಿನದ 24 ಗಂಟೆಯೂ ಈ ಬಗ್ಗೆ ಚರ್ಚೆಗಳು ನಡೆದವು’ ಎಂದು ಬೇಸರ ವ್ಯಕ್ತಪಡಿಸಿದರು. </p> .<div><div class="bigfact-title">ನಕಲಿ ಪ್ರಕರಣ:</div><div class="bigfact-description">‘ಅವರು ನಮ್ಮ ವಿರುದ್ಧ ನಕಲಿ ಪ್ರಕರಣ ದಾಖಲಿಸಿದ್ದರು. ನಾನು ಪ್ರಾಮಾಣಿಕನಾಗಿದ್ದು, ಪ್ರಾಮಾಣಿಕತೆಯನ್ನಷ್ಟೇ ಗಳಿಸಿದ್ದೇನೆ. ಅದೀಗ ಸಾಬೀತಾಗಿದೆ’ ಎಂದರು. ‘ಅಧಿಕಾರಕ್ಕಾಗಿ ದೇಶ ಮತ್ತು ಸಂವಿಧಾನದ ಜತೆ ಆಟವಾಡಬೇಡಿ ಎಂದು ಪ್ರಧಾನಿ ಮೋದಿ ಅವರಿಗೆ ಹೇಳಬಯಸುತ್ತೇನೆ’ ಎಂದು ಕೇಜ್ರಿವಾಲ್ ಹೇಳಿದರು.</div></div>.ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್, ಸಿಸೋಡಿಯಾ, ಕವಿತಾ ಖುಲಾಸೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>