<p><strong>ನವದೆಹಲಿ:</strong> ದೆಹಲಿ ವಿಧಾನಸಭೆ ಚುನಾವಣೆಯ ಟಿಕೆಟ್ ನೀಡಲು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ₹10 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಎಎಪಿಯ ದ್ವಾರಕಾ ಕ್ಷೇತ್ರದ ಶಾಸಕ, ಭಾರತದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮೊಮ್ಮಗಆದರ್ಶ ಶಾಸ್ತ್ರಿ ಆರೋಪಿಸಿದ್ದಾರೆ.</p>.<p>ಶನಿವಾರವಷ್ಟೇ ಕಾಂಗ್ರೆಸ್ಗೆ ಸೇರ್ಪಡೆಯಾದ ಶಾಸ್ತ್ರಿ, ಆಮ್ ಆದ್ಮಿ ಪಕ್ಷ (ಎಎಪಿ)ವು 2020ರ ದೆಹಲಿ ವಿಧಾನಸಭೆ ಚುನಾವಣೆಯ ಟಿಕೆಟ್ಗಳನ್ನು ₹10-20 ಕೋಟಿಗಳಿಗೆ ಮಾರಾಟ ಮಾಡಿದೆ ಎಂದು ದೂರಿದ್ದಾರೆ.</p>.<p>ಫೆಬ್ರವರಿ 8ರಂದು ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಗೆ ದ್ವಾರಕಾದಿಂದ ಮತ್ತೆ ಸ್ಪರ್ಧಿಸಲು ಇಚ್ಛಿಸಿದ್ದ ಶಾಸ್ತ್ರಿ ಅವರಿಗೆ ಟಿಕೆಟ್ ನೀಡಲು ಎಎಪಿ ನಿರಾಕರಿಸಿತ್ತು. ಅಲ್ಲದೆ ದ್ವಾರಕಾದಿಂದ ವಿನಯ್ ಮಿಶ್ರಾ ಅವರನ್ನು ಕಣಕ್ಕಿಳಿಸಿದ ಬೆನ್ನಲ್ಲೇ ಅಸಮಾಧಾನಗೊಂಡು ಪಕ್ಷವನ್ನು ತೊರೆದಿದ್ದರು.</p>.<p>ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಸುಭಾಷ್ ಚೋಪ್ರಾ ಮತ್ತು ಎಐಸಿಸಿ ಉಸ್ತುವಾರಿ ಪಿ.ಸಿ.ಚಾಕೊ ಅವರ ನೇತೃತ್ವದಲ್ಲಿ ಪಕ್ಷದ ದೆಹಲಿ ಕಚೇರಿಯಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದರು.</p>.<p>ಆದರ್ಶಶಾಸ್ತ್ರಿ ಅವರು ಎಎಪಿಯಲ್ಲಿ ರಾಷ್ಟ್ರೀಯ ವಕ್ತಾರ ಮತ್ತು ಸಾಗರೋತ್ತರ ವ್ಯವಹಾರಗಳ ಸಹ-ಸಂಚಾಲಕರಾಗಿ ಕಾರ್ಯನಿರ್ವಹಿಸಿದ್ದರು.</p>.<p>ಈ ಹಿಂದೆಯೂ ಎಎಪಿ ವಿರುದ್ಧ ಇಂತದ್ದೇ ಆರೋಪ ಕೇಳಿಬಂದಿತ್ತು. ಲೋಕಸಭಾ ಚುನಾವಣೆಯಲ್ಲಿ ಎಎಪಿಯ ಪಶ್ಚಿಮ ದೆಹಲಿಯ ಅಭ್ಯರ್ಥಿಯಾಗಿದ್ದ ಬಲ್ಬೀರ್ ಸಿಂಗ್ ಜಾಖರ್ ಅವರ ಪುತ್ರ, ಟಿಕೆಟ್ ಪಡೆಯಲು ತನ್ನ ತಂದೆ ಅರವಿಂದ್ ಕೇಜ್ರಿವಾಲ್ಗೆ ಹಣ ಪಾವತಿಸಿದ್ದರು ಎಂದು ದೂರಿದ್ದರು.</p>.<p>ನನ್ನ ತಂದೆ ಸುಮಾರು ಮೂರು ತಿಂಗಳ ಹಿಂದೆ ರಾಜಕೀಯಕ್ಕೆ ಸೇರಿದರು. ಆಗ ಟಿಕೆಟ್ಗಾಗಿ ಅರವಿಂದ್ ಕೇಜ್ರಿವಾಲ್ ಅವರಿಗೆ ₹6 ಕೋಟಿ ನೀಡಿದ್ದರು. ಅವರು ಹಣ ಪಾವತಿಸಿದ್ದರು ಎನ್ನುವುದಕ್ಕೆ ನನ್ನ ಬಳಿ ವಿಶ್ವಾಸಾರ್ಹ ಸಾಕ್ಷ್ಯಗಳಿವೆ ಎಂದು ಬಲ್ಬೀರ್ ಸಿಂಗ್ ಜಾಖರ್ ಪುತ್ರ ಉದಯ್ ಹೇಳಿದ್ದರು. ಪುತ್ರನ ಆರೋಪವನ್ನು ಬಲ್ಬೀರ್ ಸಿಂಗ್ ಅಲ್ಲಗಳೆದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿ ವಿಧಾನಸಭೆ ಚುನಾವಣೆಯ ಟಿಕೆಟ್ ನೀಡಲು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ₹10 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಎಎಪಿಯ ದ್ವಾರಕಾ ಕ್ಷೇತ್ರದ ಶಾಸಕ, ಭಾರತದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮೊಮ್ಮಗಆದರ್ಶ ಶಾಸ್ತ್ರಿ ಆರೋಪಿಸಿದ್ದಾರೆ.</p>.<p>ಶನಿವಾರವಷ್ಟೇ ಕಾಂಗ್ರೆಸ್ಗೆ ಸೇರ್ಪಡೆಯಾದ ಶಾಸ್ತ್ರಿ, ಆಮ್ ಆದ್ಮಿ ಪಕ್ಷ (ಎಎಪಿ)ವು 2020ರ ದೆಹಲಿ ವಿಧಾನಸಭೆ ಚುನಾವಣೆಯ ಟಿಕೆಟ್ಗಳನ್ನು ₹10-20 ಕೋಟಿಗಳಿಗೆ ಮಾರಾಟ ಮಾಡಿದೆ ಎಂದು ದೂರಿದ್ದಾರೆ.</p>.<p>ಫೆಬ್ರವರಿ 8ರಂದು ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಗೆ ದ್ವಾರಕಾದಿಂದ ಮತ್ತೆ ಸ್ಪರ್ಧಿಸಲು ಇಚ್ಛಿಸಿದ್ದ ಶಾಸ್ತ್ರಿ ಅವರಿಗೆ ಟಿಕೆಟ್ ನೀಡಲು ಎಎಪಿ ನಿರಾಕರಿಸಿತ್ತು. ಅಲ್ಲದೆ ದ್ವಾರಕಾದಿಂದ ವಿನಯ್ ಮಿಶ್ರಾ ಅವರನ್ನು ಕಣಕ್ಕಿಳಿಸಿದ ಬೆನ್ನಲ್ಲೇ ಅಸಮಾಧಾನಗೊಂಡು ಪಕ್ಷವನ್ನು ತೊರೆದಿದ್ದರು.</p>.<p>ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಸುಭಾಷ್ ಚೋಪ್ರಾ ಮತ್ತು ಎಐಸಿಸಿ ಉಸ್ತುವಾರಿ ಪಿ.ಸಿ.ಚಾಕೊ ಅವರ ನೇತೃತ್ವದಲ್ಲಿ ಪಕ್ಷದ ದೆಹಲಿ ಕಚೇರಿಯಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದರು.</p>.<p>ಆದರ್ಶಶಾಸ್ತ್ರಿ ಅವರು ಎಎಪಿಯಲ್ಲಿ ರಾಷ್ಟ್ರೀಯ ವಕ್ತಾರ ಮತ್ತು ಸಾಗರೋತ್ತರ ವ್ಯವಹಾರಗಳ ಸಹ-ಸಂಚಾಲಕರಾಗಿ ಕಾರ್ಯನಿರ್ವಹಿಸಿದ್ದರು.</p>.<p>ಈ ಹಿಂದೆಯೂ ಎಎಪಿ ವಿರುದ್ಧ ಇಂತದ್ದೇ ಆರೋಪ ಕೇಳಿಬಂದಿತ್ತು. ಲೋಕಸಭಾ ಚುನಾವಣೆಯಲ್ಲಿ ಎಎಪಿಯ ಪಶ್ಚಿಮ ದೆಹಲಿಯ ಅಭ್ಯರ್ಥಿಯಾಗಿದ್ದ ಬಲ್ಬೀರ್ ಸಿಂಗ್ ಜಾಖರ್ ಅವರ ಪುತ್ರ, ಟಿಕೆಟ್ ಪಡೆಯಲು ತನ್ನ ತಂದೆ ಅರವಿಂದ್ ಕೇಜ್ರಿವಾಲ್ಗೆ ಹಣ ಪಾವತಿಸಿದ್ದರು ಎಂದು ದೂರಿದ್ದರು.</p>.<p>ನನ್ನ ತಂದೆ ಸುಮಾರು ಮೂರು ತಿಂಗಳ ಹಿಂದೆ ರಾಜಕೀಯಕ್ಕೆ ಸೇರಿದರು. ಆಗ ಟಿಕೆಟ್ಗಾಗಿ ಅರವಿಂದ್ ಕೇಜ್ರಿವಾಲ್ ಅವರಿಗೆ ₹6 ಕೋಟಿ ನೀಡಿದ್ದರು. ಅವರು ಹಣ ಪಾವತಿಸಿದ್ದರು ಎನ್ನುವುದಕ್ಕೆ ನನ್ನ ಬಳಿ ವಿಶ್ವಾಸಾರ್ಹ ಸಾಕ್ಷ್ಯಗಳಿವೆ ಎಂದು ಬಲ್ಬೀರ್ ಸಿಂಗ್ ಜಾಖರ್ ಪುತ್ರ ಉದಯ್ ಹೇಳಿದ್ದರು. ಪುತ್ರನ ಆರೋಪವನ್ನು ಬಲ್ಬೀರ್ ಸಿಂಗ್ ಅಲ್ಲಗಳೆದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>