‘ಲಿಕ್ಕರ್ ಗೇಟ್ ಮತ್ತು ಗೀಗೇಟ್ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಇವುಗಳಲ್ಲಿ ಅವರು ತಪ್ಪಿತಸ್ಥರೆಂದು ಸಾಬೀತಾದರೆ ಶಿಕ್ಷೆಯಾಗಬೇಕು. ಕೇಜ್ರಿವಾಲ್ ಅವರು ಭ್ರಷ್ಟ ಮಾರ್ಗದ ಮೂಲಕ ಗಳಿಸಿದ ಹಣವನ್ನು ಪಂಜಾಬ್, ಗೋವಾ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ದೆಹಲಿ ಸೇರಿ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ವಿರುದ್ಧ ಬಳಸಿದ್ದಾರೆ. ಇದನ್ನು ಕಾಂಗ್ರೆಸ್ ಸೇರಿ ಎಲ್ಲ ರಾಜಕೀಯ ನಾಯಕರು ಮರೆಯಬಾರದು’ ಎಂದು ಮಾಕೆನ್ ಹೇಳಿದ್ದಾರೆ.