‘ಇದು ‘ರೇವ್ಡಿ’ (ಉಚಿತ ಕೊಡುಗೆ) ಸರ್ಕಾರವಷ್ಟೇ ಅಲ್ಲ, ‘ಬೇವ್ಡಿ’ (ಕುಡುಕರ) ಸರ್ಕಾರ ಕೂಡಾ. ಸಂಪುಟದ ಒಪ್ಪಿಗೆ ಪಡೆಯದೆ ಅಬಕಾರಿ ಕಂಪನಿಗಳಿಗೆ ₹144 ಕೋಟಿ ಹಿಂತಿರುಗಿಸಿದ್ದು ಏಕೆ’ ಎಂದುಅನುರಾಗ್ ಠಾಕೂರ್ ಪ್ರಶ್ನಿಸಿದ್ದಾರೆ. ಮನೀಷ್ ಸಿಸೋಡಿಯಾ ಅವರನ್ನು ದುಡ್ಡಿನ ವ್ಯಕ್ತಿ ಎಂದು ಕರೆದಿರುವ ಠಾಕೂರ್, ಸಿಸೋಡಿಯಾ ಹಣ ಮಾಡುತ್ತಾರೆ ಹಾಗೂ ಮೌನವಾಗಿರುತ್ತಾರೆ ಎಂದು ಆರೋಪಿಸಿದ್ದಾರೆ. ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ಆದೇಶ ಗುಪ್ತಾ, ಲೋಕಸಭಾ ಸದಸ್ಯ ಮನೋಜ್ ತಿವಾರಿ ಅವರೂ ಕೇಜ್ರಿವಾಲ್ ವಿರುದ್ಧ ವಾಕ್ಸಮರ ನಡೆಸಿದ್ದಾರೆ.