<p><strong>ನವದೆಹಲಿ</strong>: 2024ರ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಆಮ್ ಆದ್ಮಿ ಪಕ್ಷವು (ಆಪ್) ಜನರನ್ನು ತಲುಪುವ ಸಲುವಾಗಿ‘ಮೇಕ್ ಇಂಡಿಯಾ ನಂ.1’ ಕಾರ್ಯಕ್ರಮ ಹಮ್ಮಿಕೊಂಡಿದೆ. ಆಪ್ ಸ್ಥಾಪಕರೂ ಆಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.</p>.<p>‘ವಿಶ್ವದಲ್ಲಿ ಭಾರತವನ್ನು ಅಗ್ರಪಟ್ಟಕ್ಕೇರಿಸುವುದು ಈ ಕಾರ್ಯಕ್ರಮದ ಉದ್ದೇಶ. ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ನಾಗರಿಕರು ಈ ಕಾರ್ಯಕ್ಕೆ ಕೈಜೋಡಿಸಬೇಕು’ ಎಂದು ಕೇಜ್ರಿವಾಲ್ ಹೇಳಿದ್ದಾರೆ.</p>.<p>ತಾಲಕ್ಟೋರಾ ಕ್ರೀಡಾಂಗಣದಲ್ಲಿ ಆಯೋಜನೆಯಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಉತ್ತಮ ಆಡಳಿತದ ಕುರಿತು ತಾವು ಹೊಂದಿರುವ ದೃಷ್ಟಿಕೋನವನ್ನು ಹಂಚಿಕೊಂಡರು.</p>.<p>‘ಇದು ರಾಜಕೀಯ ಪಕ್ಷವೊಂದರ ಕಾರ್ಯಕ್ರಮವಲ್ಲ. ಇದು ರಾಷ್ಟ್ರೀಯ ‘ಮಿಷನ್’. ಸಿಂಗಪುರ ಸೇರಿದಂತೆ ಇತರೆ ಕೆಲ ರಾಷ್ಟ್ರಗಳಿಗೆ ಭಾರತದ ನಂತರ ಸ್ವಾತಂತ್ರ್ಯ ಸಿಕ್ಕಿತ್ತು. ಆದರೆ ಅಭಿವೃದ್ಧಿ ವಿಚಾರದಲ್ಲಿ ಅವು ನಮಗಿಂತಲೂ ಮುಂದಿವೆ’ ಎಂದರು. ‘ಕಾರ್ಯಕ್ರಮದಲ್ಲಿ ನಾಗರಿಕರ ಪಾಲ್ಗೊಳ್ಳುವಿಕೆ ಉತ್ತೇಜಿಸುವ ಹಾಗೂ ಆ ಮೂಲಕ ನಿಗದಿತ ಗುರಿ ಸಾಧಿಸುವ ಸಲುವಾಗಿ ದೇಶದಾದ್ಯಂತ ಪ್ರವಾಸ ಕೈಗೊಳ್ಳುತ್ತೇನೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 2024ರ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಆಮ್ ಆದ್ಮಿ ಪಕ್ಷವು (ಆಪ್) ಜನರನ್ನು ತಲುಪುವ ಸಲುವಾಗಿ‘ಮೇಕ್ ಇಂಡಿಯಾ ನಂ.1’ ಕಾರ್ಯಕ್ರಮ ಹಮ್ಮಿಕೊಂಡಿದೆ. ಆಪ್ ಸ್ಥಾಪಕರೂ ಆಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.</p>.<p>‘ವಿಶ್ವದಲ್ಲಿ ಭಾರತವನ್ನು ಅಗ್ರಪಟ್ಟಕ್ಕೇರಿಸುವುದು ಈ ಕಾರ್ಯಕ್ರಮದ ಉದ್ದೇಶ. ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ನಾಗರಿಕರು ಈ ಕಾರ್ಯಕ್ಕೆ ಕೈಜೋಡಿಸಬೇಕು’ ಎಂದು ಕೇಜ್ರಿವಾಲ್ ಹೇಳಿದ್ದಾರೆ.</p>.<p>ತಾಲಕ್ಟೋರಾ ಕ್ರೀಡಾಂಗಣದಲ್ಲಿ ಆಯೋಜನೆಯಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಉತ್ತಮ ಆಡಳಿತದ ಕುರಿತು ತಾವು ಹೊಂದಿರುವ ದೃಷ್ಟಿಕೋನವನ್ನು ಹಂಚಿಕೊಂಡರು.</p>.<p>‘ಇದು ರಾಜಕೀಯ ಪಕ್ಷವೊಂದರ ಕಾರ್ಯಕ್ರಮವಲ್ಲ. ಇದು ರಾಷ್ಟ್ರೀಯ ‘ಮಿಷನ್’. ಸಿಂಗಪುರ ಸೇರಿದಂತೆ ಇತರೆ ಕೆಲ ರಾಷ್ಟ್ರಗಳಿಗೆ ಭಾರತದ ನಂತರ ಸ್ವಾತಂತ್ರ್ಯ ಸಿಕ್ಕಿತ್ತು. ಆದರೆ ಅಭಿವೃದ್ಧಿ ವಿಚಾರದಲ್ಲಿ ಅವು ನಮಗಿಂತಲೂ ಮುಂದಿವೆ’ ಎಂದರು. ‘ಕಾರ್ಯಕ್ರಮದಲ್ಲಿ ನಾಗರಿಕರ ಪಾಲ್ಗೊಳ್ಳುವಿಕೆ ಉತ್ತೇಜಿಸುವ ಹಾಗೂ ಆ ಮೂಲಕ ನಿಗದಿತ ಗುರಿ ಸಾಧಿಸುವ ಸಲುವಾಗಿ ದೇಶದಾದ್ಯಂತ ಪ್ರವಾಸ ಕೈಗೊಳ್ಳುತ್ತೇನೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>