<p><strong>ನವದೆಹಲಿ:</strong> ದೆಹಲಿಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಭಗತ್ ಸಿಂಗ್ ಚಿತ್ರಗಳನ್ನು ಅಳವಡಿಸಬೇಕು. ಯಾವುದೇ ರಾಜಕೀಯ ನಾಯಕರ ಚಿತ್ರಗಳು ಇರಬಾರದು ಎಂದು ಆದೇಶಿಸಿರುವುದಾಗಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.</p>.<p>ದೆಹಲಿ ಸರ್ಕಾರದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕೇಜ್ರಿವಾಲ್ ಈ ಕುರಿತು ಘೋಷಣೆ ಮಾಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಖ್ಯಮಂತ್ರಿಗಳ ಚಿತ್ರವೂ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.</p>.<p>ದಲಿತ ಕುಟುಂಬದಲ್ಲಿ ಜನಿಸಿ, ದೇಶದ ಸಂವಿಧಾನದ ಕರಡು ರಚಿಸಿದ ಅಂಬೇಡ್ಕರ್ ಅವರಿಂದ ಅತಿಹೆಚ್ಚು ಪ್ರಭಾವಿತನಾಗಿದ್ದೇನೆ. ಅದೇ ರೀತಿ ಕ್ರಾಂತಿಕಾರಿ ನಾಯಕ ಭಗತ್ ಸಿಂಗ್ ಅವರಿಂದಲೂ ಪ್ರಭಾವಿತನಾಗಿದ್ದೇನೆ. ಇವರಿಬ್ಬರ ತತ್ವಾದರ್ಶಗಳಲ್ಲೇ ದೆಹಲಿ ಸರ್ಕಾರ ಕಾರ್ಯನಿರ್ವಹಿಸಲಿದೆ ಎಂದು ಅವರು ಹೇಳಿದ್ದಾರೆ.</p>.<p><a href="https://www.prajavani.net/india-news/priyanka-gandhi-vadra-says-polarisation-suits-both-bjp-sp-to-consolidate-vote-bases-in-up-904998.html" itemprop="url">UP Election: ಬಿಜೆಪಿ, ಎಸ್ಪಿಯಿಂದ ಧ್ರುವೀಕರಣ: ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪ </a></p>.<p>100 ವರ್ಷಗಳ ಹಿಂದೆ, ಅಂತರ್ಜಾಲ ಸಂಪರ್ಕವೂ ಇಲ್ಲದ ಕಾಲದಲ್ಲಿ ಅಂಬೇಡ್ಕರ್ ಅವರು ಕೊಲಂಬಿಯಾ ವಿಶ್ವವಿದ್ಯಾಲಯಕ್ಕೆ ಹಾಗೂ ಲಂಡನ್ ಸ್ಕೂಲ್ ಆಫ್ ಎಕಾನಮಿಕ್ಸ್ಗೆ ಅರ್ಜಿ ಸಲ್ಲಿಸಿ ಅಧ್ಯಯನಕ್ಕೆ ತೆರಳಿದ್ದರು ಎಂಬುದನ್ನು ಯೋಚಿಸುವಾಗಲೆಲ್ಲ ನಾನು ಚಕಿತನಾಗುತ್ತೇನೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.</p>.<p>ಬಳಿಕ ದೇಶದ ಸಂವಿಧಾನವನ್ನು ರೂಪಿಸುವಲ್ಲಿಯೂ ಅವರು ಬಹುಮುಖ್ಯ ಪಾತ್ರವಹಿಸಿದ್ದಾರೆ. ದೇಶದ ಮೊದಲ ಕಾನೂನು ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು ಎಂದು ಕೇಜ್ರಿವಾಲ್ ನೆನಪಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಭಗತ್ ಸಿಂಗ್ ಚಿತ್ರಗಳನ್ನು ಅಳವಡಿಸಬೇಕು. ಯಾವುದೇ ರಾಜಕೀಯ ನಾಯಕರ ಚಿತ್ರಗಳು ಇರಬಾರದು ಎಂದು ಆದೇಶಿಸಿರುವುದಾಗಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.</p>.<p>ದೆಹಲಿ ಸರ್ಕಾರದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕೇಜ್ರಿವಾಲ್ ಈ ಕುರಿತು ಘೋಷಣೆ ಮಾಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಖ್ಯಮಂತ್ರಿಗಳ ಚಿತ್ರವೂ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.</p>.<p>ದಲಿತ ಕುಟುಂಬದಲ್ಲಿ ಜನಿಸಿ, ದೇಶದ ಸಂವಿಧಾನದ ಕರಡು ರಚಿಸಿದ ಅಂಬೇಡ್ಕರ್ ಅವರಿಂದ ಅತಿಹೆಚ್ಚು ಪ್ರಭಾವಿತನಾಗಿದ್ದೇನೆ. ಅದೇ ರೀತಿ ಕ್ರಾಂತಿಕಾರಿ ನಾಯಕ ಭಗತ್ ಸಿಂಗ್ ಅವರಿಂದಲೂ ಪ್ರಭಾವಿತನಾಗಿದ್ದೇನೆ. ಇವರಿಬ್ಬರ ತತ್ವಾದರ್ಶಗಳಲ್ಲೇ ದೆಹಲಿ ಸರ್ಕಾರ ಕಾರ್ಯನಿರ್ವಹಿಸಲಿದೆ ಎಂದು ಅವರು ಹೇಳಿದ್ದಾರೆ.</p>.<p><a href="https://www.prajavani.net/india-news/priyanka-gandhi-vadra-says-polarisation-suits-both-bjp-sp-to-consolidate-vote-bases-in-up-904998.html" itemprop="url">UP Election: ಬಿಜೆಪಿ, ಎಸ್ಪಿಯಿಂದ ಧ್ರುವೀಕರಣ: ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪ </a></p>.<p>100 ವರ್ಷಗಳ ಹಿಂದೆ, ಅಂತರ್ಜಾಲ ಸಂಪರ್ಕವೂ ಇಲ್ಲದ ಕಾಲದಲ್ಲಿ ಅಂಬೇಡ್ಕರ್ ಅವರು ಕೊಲಂಬಿಯಾ ವಿಶ್ವವಿದ್ಯಾಲಯಕ್ಕೆ ಹಾಗೂ ಲಂಡನ್ ಸ್ಕೂಲ್ ಆಫ್ ಎಕಾನಮಿಕ್ಸ್ಗೆ ಅರ್ಜಿ ಸಲ್ಲಿಸಿ ಅಧ್ಯಯನಕ್ಕೆ ತೆರಳಿದ್ದರು ಎಂಬುದನ್ನು ಯೋಚಿಸುವಾಗಲೆಲ್ಲ ನಾನು ಚಕಿತನಾಗುತ್ತೇನೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.</p>.<p>ಬಳಿಕ ದೇಶದ ಸಂವಿಧಾನವನ್ನು ರೂಪಿಸುವಲ್ಲಿಯೂ ಅವರು ಬಹುಮುಖ್ಯ ಪಾತ್ರವಹಿಸಿದ್ದಾರೆ. ದೇಶದ ಮೊದಲ ಕಾನೂನು ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು ಎಂದು ಕೇಜ್ರಿವಾಲ್ ನೆನಪಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>