<p><strong>ನವದೆಹಲಿ:</strong> ನರೇಂದ್ರ ಮೋದಿ ಅವರ ಆಡಳಿತವು ಈ ವರ್ಷಕ್ಕೆ ಅಂತ್ಯಗೊಳ್ಳಲಿದೆ. ಮುಂದಿನ ವರ್ಷದಿಂದ ಅವರು ಪ್ರಧಾನಿ ಹುದ್ದೆಯಲ್ಲಿರುವುದಿಲ್ಲ ಎಂದು ಎಎಪಿ ನಾಯಕ ಅರವಿಂದ ಕ್ರೇಜಿವಾಲ್ ಹೇಳಿದ್ದಾರೆ. </p><p>ಶಿವಸೇನಾ(ಯುಬಿಟಿ) ನಾಯಕ ಸಂಜಯ್ ರಾವತ್ ಅವರ ‘ಅನ್ಲೈಕ್ಲಿ ಪ್ಯಾರಡೈಸ್’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅರವಿಂದ ಕ್ರೇಜಿವಾಲ್ ಅವರು ಭಾಗವಹಿಸಿದ್ದರು. </p><p>ನನ್ನ ಮನಸ್ಸು ಮತ್ತು ರಾಜಕೀಯ ತಿಳುವಳಿಕೆಯ ಪ್ರಕಾರ ಇನ್ನೂ ಕೆಲವೇ ದಿನಗಳಲ್ಲಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ರಾಜೀನಾಮೆ ನೀಡಲಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. </p><p>ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ರಾಜಕೀಯ ಪ್ರಾಬಲ್ಯವು ಇಳಿಮುಖವಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಕೂಡ ಜನರು ಸರ್ಕಾರದ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರವು ಅದನ್ನು ತಡೆಯಲು ಯತ್ನಿಸುತ್ತಿದ್ದರು ಕೂಡ, ಅದು ಸಾಧ್ಯವಾಗುತ್ತಿಲ್ಲ. ಇದು ಮೋದಿ ಆಡಳಿತದ ಅಂತ್ಯದ ಸೂಚನೆಯಾಗಿದೆ ಎಂದು ತಿಳಿಸಿದ್ದಾರೆ. </p><p>ಕೆಲವು ವರ್ಷಗಳ ಹಿಂದೆ ಮೋದಿ ವಿರುದ್ಧ ಮೀಮ್ ಮಾಡಿದವರನ್ನು ಜೈಲಿಗೆ ಕಳಿಸಲಾಗುತ್ತಿತ್ತು. ಆದರೆ, ಇಂದು ಸಾಮಾಜಿಕ ಜಾಲತಾಣಗಳ ತುಂಬಾ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ವ್ಯಕ್ತವಾಗುತ್ತಿದೆ. ಇದು ಅವರ ಜನಪ್ರಿಯತೆ ಕುಸಿಯುತ್ತಿರುವುದರ ಲಕ್ಷಣವಾಗಿದೆ ಎಂದು ಹೇಳಿದ್ದಾರೆ. </p><p>ಮೋದಿ ಅವರ ಜನಪ್ರಿಯತೆ ಕುಸಿಯುತ್ತಿರುವುದರ ನಡುವೆಯೂ ಅವರು ಚುನಾವಣೆ ಗೆಲ್ಲುತ್ತಿದ್ದಾರೆ ಎಂದರೆ ಅದಕ್ಕೆ ಚುನಾವಣಾ ಆಯೋಗ ಕಾರಣ. ಆದರೆ, ಮೇ.4ರಂದು ಬಂಗಾಳದ ಜನತೆಯು ಮೋದಿ ಮತ್ತು ಶಾ ಅವರಿಗೆ ಪಾಠ ಕಲಿಸಲಿದ್ದಾರೆ. 2027ರಲ್ಲಿ ಉತ್ತರ ಪ್ರದೇಶದ ಜನರು ಬಿಜೆಪಿಯನ್ನು ಸೋಲಿಸಲಿದ್ದಾರೆ ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನರೇಂದ್ರ ಮೋದಿ ಅವರ ಆಡಳಿತವು ಈ ವರ್ಷಕ್ಕೆ ಅಂತ್ಯಗೊಳ್ಳಲಿದೆ. ಮುಂದಿನ ವರ್ಷದಿಂದ ಅವರು ಪ್ರಧಾನಿ ಹುದ್ದೆಯಲ್ಲಿರುವುದಿಲ್ಲ ಎಂದು ಎಎಪಿ ನಾಯಕ ಅರವಿಂದ ಕ್ರೇಜಿವಾಲ್ ಹೇಳಿದ್ದಾರೆ. </p><p>ಶಿವಸೇನಾ(ಯುಬಿಟಿ) ನಾಯಕ ಸಂಜಯ್ ರಾವತ್ ಅವರ ‘ಅನ್ಲೈಕ್ಲಿ ಪ್ಯಾರಡೈಸ್’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅರವಿಂದ ಕ್ರೇಜಿವಾಲ್ ಅವರು ಭಾಗವಹಿಸಿದ್ದರು. </p><p>ನನ್ನ ಮನಸ್ಸು ಮತ್ತು ರಾಜಕೀಯ ತಿಳುವಳಿಕೆಯ ಪ್ರಕಾರ ಇನ್ನೂ ಕೆಲವೇ ದಿನಗಳಲ್ಲಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ರಾಜೀನಾಮೆ ನೀಡಲಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. </p><p>ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ರಾಜಕೀಯ ಪ್ರಾಬಲ್ಯವು ಇಳಿಮುಖವಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಕೂಡ ಜನರು ಸರ್ಕಾರದ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರವು ಅದನ್ನು ತಡೆಯಲು ಯತ್ನಿಸುತ್ತಿದ್ದರು ಕೂಡ, ಅದು ಸಾಧ್ಯವಾಗುತ್ತಿಲ್ಲ. ಇದು ಮೋದಿ ಆಡಳಿತದ ಅಂತ್ಯದ ಸೂಚನೆಯಾಗಿದೆ ಎಂದು ತಿಳಿಸಿದ್ದಾರೆ. </p><p>ಕೆಲವು ವರ್ಷಗಳ ಹಿಂದೆ ಮೋದಿ ವಿರುದ್ಧ ಮೀಮ್ ಮಾಡಿದವರನ್ನು ಜೈಲಿಗೆ ಕಳಿಸಲಾಗುತ್ತಿತ್ತು. ಆದರೆ, ಇಂದು ಸಾಮಾಜಿಕ ಜಾಲತಾಣಗಳ ತುಂಬಾ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ವ್ಯಕ್ತವಾಗುತ್ತಿದೆ. ಇದು ಅವರ ಜನಪ್ರಿಯತೆ ಕುಸಿಯುತ್ತಿರುವುದರ ಲಕ್ಷಣವಾಗಿದೆ ಎಂದು ಹೇಳಿದ್ದಾರೆ. </p><p>ಮೋದಿ ಅವರ ಜನಪ್ರಿಯತೆ ಕುಸಿಯುತ್ತಿರುವುದರ ನಡುವೆಯೂ ಅವರು ಚುನಾವಣೆ ಗೆಲ್ಲುತ್ತಿದ್ದಾರೆ ಎಂದರೆ ಅದಕ್ಕೆ ಚುನಾವಣಾ ಆಯೋಗ ಕಾರಣ. ಆದರೆ, ಮೇ.4ರಂದು ಬಂಗಾಳದ ಜನತೆಯು ಮೋದಿ ಮತ್ತು ಶಾ ಅವರಿಗೆ ಪಾಠ ಕಲಿಸಲಿದ್ದಾರೆ. 2027ರಲ್ಲಿ ಉತ್ತರ ಪ್ರದೇಶದ ಜನರು ಬಿಜೆಪಿಯನ್ನು ಸೋಲಿಸಲಿದ್ದಾರೆ ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>