<p><strong>ನವದೆಹಲಿ:</strong> ಪತ್ನಿ ಸುನಿತಾಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ. ಭವಿಷ್ಯದಲ್ಲಿ ಅವರು ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.</p><p>ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ‘ನನ್ನ ಬದುಕಿನ ಪ್ರತಿಯೊಂದು ಹಂತದಲ್ಲೂ ಅವರು ನನಗೆ ಬೆಂಬಲ ನೀಡಿದ್ದಾರೆ. ಅವರಂಥ ಸಂಗಾತಿ ಸಿಗಲು ನಾನು ಅದೃಷ್ಟ ಮಾಡಿದ್ದೇನೆ. ನನ್ನಂಥ ವಿಚಿತ್ರ ವ್ಯಕ್ತಿಯನ್ನು ಸಹಿಸಿಕೊಳ್ಳುವುದು ಸುಲಭವಲ್ಲ’ ಎಂದು ಹೇಳಿದ್ದಾರೆ.</p>.ಪ್ರಧಾನಿ ಬುಡಕಟ್ಟು ವಿರೋಧಿ– AAP,JMM ಮುಗಿಸಲು ಸಂಚು ರೂಪಿಸಿದ್ದಾರೆ: ಕೇಜ್ರಿವಾಲ್.<p>ತಮ್ಮ ಬದುಕಿನ ಗತಿಸಿಹೋದ ದಿನಗಳನ್ನು ಮೆಲುಕು ಹಾಕಿದ ಅವರು, ‘2000ನೇ ಇಸವಿಯಲ್ಲಿ ಆದಾಯ ತೆರಿಗೆ ಆಯುಕ್ತನಾಗಿದ್ದಾಗ ದೆಹಲಿಯ ಕೊಳಗೇರಿಗಳಲ್ಲಿ ಕೆಲಸ ಮಾಡಲು ರಜೆ ಹಾಕಿದ್ದೆ. ಬಳಿಕ ಕೆಲಸಕ್ಕೆ ರಾಜೀನಾಮೆ ನೀಡಿ ಪೂರ್ಣಾವಧಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡೆ’ ಎಂದಿದ್ದಾರೆ.</p><p>‘ ಪಕ್ಷ ಕಟ್ಟುತ್ತೇನೆ, ಮುಖ್ಯಮಂತ್ರಿಯಾಗುತ್ತೇನೆ ಎಂದು ನಾನು ಆ ಸಮಯದಲ್ಲಿ ಯೋಚಿಸಿಯೇ ಇರಲಿಲ್ಲ. ನಾನು 10 ವರ್ಷ ಕೆಲಸ ಮಾಡಿದೆ. ಈ ವೇಳೆ ಕೂಡ ಪತ್ನಿ ನನಗೆ ಬೆಂಬಲ ನೀಡಿದರು. ಆ ವೇಳೆ ಅವರು ಎಷ್ಟೆಲ್ಲಾ ಕಷ್ಟ ಅನುಭವಿಸಿರಬಹುದು ಊಹಿಸಿ’ ಎಂದು ಹೇಳಿದ್ದಾರೆ.</p>.ಕೇಜ್ರಿವಾಲ್ ಅವರೇ, ನಿಮಗೊಂದು ಕೆಟ್ಟ ಸುದ್ದಿ; 2029ರವರೆಗೆ ಮೋದಿಯೇ ಪ್ರಧಾನಿ: ಶಾ. <p>‘ನಾನು ಜೈಲಿನಲ್ಲಿದ್ದಾಗ ನನ್ನ ಮತ್ತು ದೆಹಲಿ ಜನರ ಮಧ್ಯೆ ಅವರು ಕೊಂಡಿಯಾಗಿದ್ದರು. ಅದು ತಾತ್ಕಾಲಿಕವಷ್ಟೇ. ಅವರಿಗೆ ಸಕ್ರಿಯ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ಭವಿಷ್ಯದಲ್ಲಿಯೂ ಅವರು ಚುನಾವಣೆಗೆ ಸ್ಪರ್ಧಿಸುವುದಿಲ್ಲ’ ಎಂದು ಹೇಳಿದ್ದಾರೆ.</p><p>ನನ್ನ ಪತ್ನಿ ಗಟ್ಟಿ ಹಾಗೂ ವೀರ ಮಹಿಳೆ ಎಂದು ಕೊಂಡಾಡಿದ ಅವರು, ಇಬ್ಬರು ಮಕ್ಕಳು ಕೂಡ ಅದೇ ರೀತಿ ಎಂದು ಪ್ರಶಂಸಿಸಿದ್ದಾರೆ.</p> .ಜುಲೈ 11ಕ್ಕೆ ಇ.ಡಿ ಸಮನ್ಸ್ ವಿರುದ್ಧ ಕೇಜ್ರಿವಾಲ್ ಅರ್ಜಿ ವಿಚಾರಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪತ್ನಿ ಸುನಿತಾಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ. ಭವಿಷ್ಯದಲ್ಲಿ ಅವರು ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.</p><p>ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ‘ನನ್ನ ಬದುಕಿನ ಪ್ರತಿಯೊಂದು ಹಂತದಲ್ಲೂ ಅವರು ನನಗೆ ಬೆಂಬಲ ನೀಡಿದ್ದಾರೆ. ಅವರಂಥ ಸಂಗಾತಿ ಸಿಗಲು ನಾನು ಅದೃಷ್ಟ ಮಾಡಿದ್ದೇನೆ. ನನ್ನಂಥ ವಿಚಿತ್ರ ವ್ಯಕ್ತಿಯನ್ನು ಸಹಿಸಿಕೊಳ್ಳುವುದು ಸುಲಭವಲ್ಲ’ ಎಂದು ಹೇಳಿದ್ದಾರೆ.</p>.ಪ್ರಧಾನಿ ಬುಡಕಟ್ಟು ವಿರೋಧಿ– AAP,JMM ಮುಗಿಸಲು ಸಂಚು ರೂಪಿಸಿದ್ದಾರೆ: ಕೇಜ್ರಿವಾಲ್.<p>ತಮ್ಮ ಬದುಕಿನ ಗತಿಸಿಹೋದ ದಿನಗಳನ್ನು ಮೆಲುಕು ಹಾಕಿದ ಅವರು, ‘2000ನೇ ಇಸವಿಯಲ್ಲಿ ಆದಾಯ ತೆರಿಗೆ ಆಯುಕ್ತನಾಗಿದ್ದಾಗ ದೆಹಲಿಯ ಕೊಳಗೇರಿಗಳಲ್ಲಿ ಕೆಲಸ ಮಾಡಲು ರಜೆ ಹಾಕಿದ್ದೆ. ಬಳಿಕ ಕೆಲಸಕ್ಕೆ ರಾಜೀನಾಮೆ ನೀಡಿ ಪೂರ್ಣಾವಧಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡೆ’ ಎಂದಿದ್ದಾರೆ.</p><p>‘ ಪಕ್ಷ ಕಟ್ಟುತ್ತೇನೆ, ಮುಖ್ಯಮಂತ್ರಿಯಾಗುತ್ತೇನೆ ಎಂದು ನಾನು ಆ ಸಮಯದಲ್ಲಿ ಯೋಚಿಸಿಯೇ ಇರಲಿಲ್ಲ. ನಾನು 10 ವರ್ಷ ಕೆಲಸ ಮಾಡಿದೆ. ಈ ವೇಳೆ ಕೂಡ ಪತ್ನಿ ನನಗೆ ಬೆಂಬಲ ನೀಡಿದರು. ಆ ವೇಳೆ ಅವರು ಎಷ್ಟೆಲ್ಲಾ ಕಷ್ಟ ಅನುಭವಿಸಿರಬಹುದು ಊಹಿಸಿ’ ಎಂದು ಹೇಳಿದ್ದಾರೆ.</p>.ಕೇಜ್ರಿವಾಲ್ ಅವರೇ, ನಿಮಗೊಂದು ಕೆಟ್ಟ ಸುದ್ದಿ; 2029ರವರೆಗೆ ಮೋದಿಯೇ ಪ್ರಧಾನಿ: ಶಾ. <p>‘ನಾನು ಜೈಲಿನಲ್ಲಿದ್ದಾಗ ನನ್ನ ಮತ್ತು ದೆಹಲಿ ಜನರ ಮಧ್ಯೆ ಅವರು ಕೊಂಡಿಯಾಗಿದ್ದರು. ಅದು ತಾತ್ಕಾಲಿಕವಷ್ಟೇ. ಅವರಿಗೆ ಸಕ್ರಿಯ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ಭವಿಷ್ಯದಲ್ಲಿಯೂ ಅವರು ಚುನಾವಣೆಗೆ ಸ್ಪರ್ಧಿಸುವುದಿಲ್ಲ’ ಎಂದು ಹೇಳಿದ್ದಾರೆ.</p><p>ನನ್ನ ಪತ್ನಿ ಗಟ್ಟಿ ಹಾಗೂ ವೀರ ಮಹಿಳೆ ಎಂದು ಕೊಂಡಾಡಿದ ಅವರು, ಇಬ್ಬರು ಮಕ್ಕಳು ಕೂಡ ಅದೇ ರೀತಿ ಎಂದು ಪ್ರಶಂಸಿಸಿದ್ದಾರೆ.</p> .ಜುಲೈ 11ಕ್ಕೆ ಇ.ಡಿ ಸಮನ್ಸ್ ವಿರುದ್ಧ ಕೇಜ್ರಿವಾಲ್ ಅರ್ಜಿ ವಿಚಾರಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>