ಆಪಾದಿತ ಈ ಹಗರಣದಲ್ಲಿ ಜಾರಿ ನಿರ್ದೇಶನಾಲಯವೋ, ಕೇಂದ್ರ ತನಿಖಾ ತಂಡವೋ ಒಂದೇ ಒಂದು ರೂಪಾಯಿ ಅಕ್ರಮ ಹಣವನ್ನು ಪತ್ತೆ ಮಾಡಲು ವಿಫಲವಾಗಿದೆ. ಅರವಿಂದ ಕೇಜ್ರಿವಾಲ್ ಅವರನ್ನು ಮುಗಿಸುವ ಮತ್ತು ದೆಹಲಿ ಹಾಗೂ ಪಂಜಾಬ್ನಲ್ಲಿರುವ ಎಎಪಿ ಸರ್ಕಾರವನ್ನು ಹತ್ತಿಕ್ಕಲು ಮಾಡಿರುವ ರಾಜಕೀಯ ಪಿತೂರಿ ಇದು ಎಂದು ಅವರು ನುಡಿದಿದ್ದಾರೆ.
ಪ್ರಕರಣ ಸಂಬಂಧ ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರಿಗೆ ಜಾಮೀನು ಲಭಿಸಿದಂತೆಯೇ ಕೇಜ್ರಿವಾಲ್ ಅವರಿಗೂ ಸುಪ್ರೀಂ ಕೋರ್ಟ್ನಲ್ಲಿ ರಿಲೀಫ್ ಸಿಗಲಿದೆ ಎಂದು ಭಾರಧ್ವಜ್ ಆಶಾಭಾವನೆ ವ್ಯಕ್ತಪಡಿಸಿದರು.